ರೈತರೇ ಸಾಲ ಕಟ್ಟಬೇಡಿ: ಕೋಡಿಹಳ್ಳಿ


Team Udayavani, Oct 24, 2017, 2:43 PM IST

ray-1.jpg

ರಾಯಚೂರು: ರೈತರೇ ಯಾವುದೇ ಕಾರಣಕ್ಕೂ ಸಹಕಾರಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಮಾಡಿದ ಸಾಲ ಮರು
ಪಾವತಿಸಬೇಡಿ. ಸಾಲ ವಸೂಲಿಗೆ ಬರುವ ಪ್ರತಿನಿಧಿಗಳನ್ನು ಗ್ರಾಮಗಳಲ್ಲೇ ಕೂಡಿ ಹಾಕಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಕರೆ ನೀಡಿದರು.

ಕೃಷಿ ವಿಶ್ವವಿದ್ಯಾಲಯ ಆವರಣದಲ್ಲಿ ಸೋಮವಾರ ನಡೆದ ರೈತರ ಸಾಲಮನ್ನಾಕ್ಕೆ ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ಹಾಗೂ ಮುಖ್ಯಮಂತ್ರಿಗೆ ಅರ್ಜಿ ಸಲ್ಲಿಕೆ ಸಮಾವೇಶದಲ್ಲಿ ಅವರು ಮಾತನಾಡಿ, ನೀವು ಕೂಡಿ ಹಾಕಿದ ಸಾಲ ವಸೂಲಿಗಾರರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್‌ ಅಧಿಕಾರಿಗಳೇ ಬಂದು ಬಿಡಿಸಿಕೊಂಡು ಹೋಗಲಿ ಎಂದರು.

ಇಂದು ರೈತರು ನಷ್ಟದಲ್ಲಿದ್ದಾರೆ. ದೇಶದಲ್ಲಿ ಆಳುವ ಸರ್ಕಾರಗಳ ಖಾಸಗೀಕರಣ, ಕೈಗಾರಿಕಾ ನೀತಿಯಿಂದ ಅನ್ನದಾತ ಸಂಕಷ್ಟಕ್ಕೀಡಾಗಿದ್ದಾನೆ. ಸ್ವಾರ್ಥ ರಾಜಕಾರಣದಿಂದ ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ. ಸತತ ಬರ ಆವರಿಸಿ ರೈತರು ಕಂಗಾಲಾಗಿದ್ದಾರೆ. ದಿಕ್ಕು ತೋಚದೆ ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ. ಇಂಥ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಸಾಲ ಮರು ಪಾವತಿಸಬೇಡಿ ಎಂದರಲ್ಲದೇ ಸಾಲ ವಸೂಲಿಗೆ ಮುಂದಾಗುತ್ತಿರುವ ಸರ್ಕಾರಗಳ ನಿರ್ಧಾರ ಖಂಡನೀಯ ಎಂದರು. 

ಇಂದು ರೈತರು ಯಾರಿಂದ ಸಾಲಗಾರರಾಗುತ್ತಿದ್ದಾರೆ ಎನ್ನುವುದನ್ನು ಜನಪ್ರತಿನಿಧಿಗಳು ಅರಿಯಲಿ. ಒಂದೆ‌ಡೆ ರೈತರು ಆರ್ಥಿಕ ದಿವಾಳಿಯಾಗುತ್ತಿದ್ದರೆ, ಮತ್ತೂಂದೆಡೆ ಯುಜಿಸಿ ಸ್ಕೇಲ್‌ ಶೇ.24.5ರಷ್ಟು ಹೆಚ್ಚಳವಾಗಿದೆ. ಮೊದಲಿನಿಂದಲೂ ಸರ್ಕಾರಗಳು ರೈತರನ್ನು ಸಾಲಗಾರರನ್ನಾಗಿ ನೋಡುತ್ತಿದ್ದು, ಅದರಿಂದ ಮುಕ್ತರನ್ನಾಗಿಸುತ್ತಿಲ್ಲ ಎಂದು ದೂರಿದರು. 

ರೈತರು ಮಾಡಿರುವ ಎಲ್ಲ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಡಾ| ಸ್ವಾಮಿನಾಥನ್‌ ವರದಿಯಂತೆ ರೈತರ ಉತ್ಪನ್ನಗಳಿಗೆ ವೆಚ್ಚದಲ್ಲಿ ಶೇ.50 ಲಾಭಾಂಶ ಒಳಗೊಂಡಂತೆ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನ.20ರಂದು ಸಂಸತ್‌ಗೆ ಮುತ್ತಿಗೆ ಕಾರ್ಯಕ್ರಮ ರೂಪಿಸಿದ್ದು, ದೇಶದ 50ಲಕ್ಷಕ್ಕೂ ಹೆಚ್ಚು ರೈತರು ಚಳವಳಿಯಲ್ಲಿ ಭಾಗವಹಿಸುವರು ಎಂದರು. 

ಸಂಘದ ರಾಜ್ಯ ಕಾರ್ಯದರ್ಶಿ ಅಬ್ಬಣಿ ಶಿವಪ್ಪ ಮಾತನಾಡಿ, ಸುಮಾರು ದಶಕಗಳಿಂದ ರೈತರು ನಾನಾ ರೀತಿಯಲ್ಲಿ ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬದುಕಿನ ಹಾದಿ ಇನ್ನಷ್ಟು ಕಠಿಣವಾಗಲಿದ್ದು, ಈಗಲಾದರೂ ಸಂಘಟಿತರಾಗಿ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಬೇಕು ಎಂದರು. ಸಂಘದ ರಾಜ್ಯ ಉಪಾಧ್ಯಕ್ಷ ಜಡಿಯಪ್ಪ ದೇಸಾಯಿ, ಕಾರ್ಯದರ್ಶಿ ಅಮೀನ ಪಾಷಾ ದಿದ್ದಿಗಿ, ಜಿಲ್ಲಾಧ್ಯಕ್ಷ ಸೂಗೂರಯ್ಯ ಆರ್‌.ಎಸ್‌.ಮಠ, ದೇವದುರ್ಗ ತಾಲೂಕು ಅಧ್ಯಕ್ಷ ವಾಸುದೇವ ಮೇಟಿ ಮಾತನಾಡಿದರು. ಸಂಘದ ಮುಖಂಡರಾದ ಮಲ್ಲಿಕಾರ್ಜುನ ರೆಡ್ಡಿ ದಿನ್ನಿ, ಬಸವರಾಜ ಹಂಚಿನಾಳ, ವೆಂಕಟರೆಡ್ಡಿ ರಾಜಲಬಂಡ, ಅಮರಯ್ಯ ಸ್ವಾಮಿ ಜಿ.ಮಠ ಸೇರಿದಂತೆ ವಿವಿಧ ಗ್ರಾಮಗಳ ಸಾವಿರಾರು ರೈತರು ಭಾಗವಹಿಸಿದ್ದರು.

ಡಿಸಿ ಆಗಮನಕ್ಕೆ ಪಟ್ಟು ಅರ್ಜಿ ಸಲ್ಲಿಕೆ ಸಮಾವೇಶದಲ್ಲಿ ಬಹಿರಂಗ ವೇದಿಕೆ ನಿರ್ಮಿಸಲಾಗಿತ್ತು. ಸಾವಿರಾರು ರೈತರು ಬಿಸಿಲಿನಲ್ಲೇ ಕುಳಿತು ಭಾಷಣ ಕೇಳುತ್ತಿದ್ದರು. ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿಯೇ ಸ್ಥಳಕ್ಕೆ ಭೇಟಿ ನೀಡಬೇಕೆಂದು ಮುಖಂಡರು ಪಟ್ಟು ಹಿಡಿದರು. ಒಂದು ವೇಳೆ ಜಿಲ್ಲಾಧಿಕಾರಿ ಬರದಿದ್ದಲ್ಲಿ ಡಿಸಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು. ಒತ್ತಡಕ್ಕೆ ಮಣಿದು ಕೊನೆಗೆ ಜಿಲ್ಲಾಧಿಕಾರಿಯೇ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ತಿಳಿಸಿದರು. ಸರ್ಕಾರಗಳು ರೈತರ ಸಾಲ ಮನ್ನಾ ಮಾಡದಿದ್ದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿ ಕಾನೂನು ಹೋರಾಟ ನಡೆಸಲಾಗುವುದು.  ಕೋಡಿಹಳ್ಳಿ ಚಂದ್ರಶೇಖರ್‌ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.