ರೈತರ ಸಭೆ ಕರೆದು ಚರ್ಚಿಸಲು ಆಗ್ರಹ


Team Udayavani, Nov 5, 2019, 5:51 PM IST

rc-tdy-1

ರಾಯಚೂರು: ಕೇಂದ್ರ ಸರ್ಕಾರ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ(ಆರ್‌ಸಿಇಪಿ) ಒಪ್ಪಂದವನ್ನು ಕೂಡಲೇ ಕೈ ಬಿಡಬೇಕು. ಇಂಥ ಮಹತ್ವದನಿರ್ಣಯಗಳನ್ನು ಕೈಗೊಳ್ಳುವ ಮುನ್ನ ರೈತ ಸಂಘದ ನಾಯಕರ ಜತೆ ವಿಶೇಷ ಸಭೆ ನಡೆಸಿ ಸಾಧಕ ಬಾಧಕಗಳ ಕುರಿತು ಚರ್ಚಿಸಬೇಕು ಎಂದು ಆಗ್ರಹಿಸಿ ಸ್ವರಾಜ್‌ ಇಂಡಿಯಾ ಪಕ್ಷ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಜನಾಂದೋಲನಗಳ ಮಹಾಮೈತ್ರಿ ನೇತೃತ್ವದಲ್ಲಿ ಸೋಮವಾರ ಧರಣಿ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಎದುರಿನ ಉದ್ಯಾನವನದಲ್ಲಿ ನೂರಾರು ರೈತರು ಧರಣಿ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಅಪರ ಜಿಲ್ಲಾ ಧಿಕಾರಿ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸಲಾಯಿತು. ಆರ್‌ಸಿಇಪಿ ಒಪ್ಪಂದ ರೈತ ವಿರೋಧಿಯಾಗಿದ್ದು, ಇದರಿಂದ ದೇಶದ ಹೈನುಗಾರಿಕೆ ವಲಯವೇ ನಿಸ್ತೇಜಗೊಳ್ಳಲಿದೆ. ಕೋಟ್ಯಂತರ ರೈತರ ಬದುಕು ಅಕ್ಷರಶಃ ಬೀದಿಗೆ ಬರಲಿದೆ. ಕೇಂದ್ರ ಸರ್ಕಾರ ಆಯಾ ಜಿಲ್ಲಾ ಮಟ್ಟದಲ್ಲಿ ರೈತರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಿ. ಬಳಿಕ ಸೂಕ್ತ ನಿರ್ಧಾರ ಕೈಗೊಳ್ಳಲಿ ಎಂದು  ತಾಕೀತು ಮಾಡಿದರು.

ಆರ್‌ಸಿಇಪಿ ಒಪ್ಪಂದದಿಂದ ರಾಜ್ಯದಲ್ಲಿ 30 ಲಕ್ಷಕ್ಕೂ ಅಧಿ ಕ ಕುಟುಂಬಗಳು ಅತಂತ್ರಗೊಳ್ಳಲಿವೆ. ದೇಶದಲ್ಲಿ ಕೋಟ್ಯಂತರ ಜನ ಹಾಲು ಉತ್ಪಾದಕರು, ರೈತರು, ಮಹಿಳೆಯರು, ಕೃಷಿ ಕೂಲಿಕಾರ್ಮಿಕರು ಹಾಗೂ ಮಾರಾಟಗಾರರು ಮತ್ತು ನೌಕರರ ಕುಟುಂಬಗಳು ಸಂಕಷ್ಟ ಅನುಭವಿಸಲಿವೆ. ಸರ್ಕಾರ ಬಂಡವಾಳ ಶಾಹಿಗಳೊಂದಿಗೆ ಒಗ್ಗೂಡಿ ಇಂಥ ಕೃತ್ಯಕ್ಕೆ ಮುಂದಾಗಿದೆ ಎಂದರು. ಜಿಲ್ಲೆ ಸತತ ಬರ, ನೆರೆಗೆ ತುತ್ತಾಗಿ ರೈತರು ತತ್ತರಿಸಿ ಹೋಗಿದ್ದಾರೆ. ನೆರೆಹಾವಳಿಯಿಂದ ರೈತರು ಅಪಾರ ನಷ್ಟದಲ್ಲಿದ್ದಾರೆ. ನೀರಾವರಿ ವಲಯದಲ್ಲೇ ನೀರಿಲ್ಲದ ಸ್ಥಿತಿ ಇದೆ. ಸಕಾಲಕ್ಕೆ ವಿದ್ಯುತ್‌ ನೀಡದೆ ಬೆಳೆ ಹಾಳಾಗುತ್ತಿವೆ. ಮಾರುಕಟ್ಟೆ ವ್ಯವಸ್ಥೆ ರೈತ ಸ್ನೇಹಿಯಾಗಿಲ್ಲ. ಇಷ್ಟೆಲ್ಲ ಜ್ವಲಂತ ಸಮಸ್ಯೆಗಳಿದ್ದರೂ ಕಿವಿಗೊಡದ ಸರ್ಕಾರ ರೈತರ ಬದುಕನ್ನೇ ನಾಶ ಮಾಡಲು ಮುಂದಾಗಿದೆ ಎಂದು ಆಕ್ರೋಶ ಹೊರ ಹಾಕಿದರು.

ಫಸಲ್‌ ಬಿಮಾ ಯೋಜನೆಯಡಿ ಹಣ ಕಟ್ಟಿದ ಸಾಕಷ್ಟು ರೈತರಿಗೆ ಪರಿಹಾರ ಸಿಕ್ಕಿಲ್ಲ. ಬರ ಪರಿಹಾರ ಸಮರ್ಪಕವಾಗಿ ವಿತರಣೆ ಆಗಿಲ್ಲ. ರೈತರಿಗೆ 12 ಗಂಟೆಗಳ ಕಾಲ ತ್ರಿಪೇಸ್‌ ವಿದ್ಯುತ್‌ ನೀಡಬೇಕು. ನಾರಾಯಣಪುರ ಬಲದಂಡೆ ನಾಲೆಯ 9ಎ ಕಾಲುವೆ ಕಾಮಗಾರಿ ಸ್ಥಗಿತಗೊಂಡಿದ್ದು ಕೂಡಲೇ ಪೂರ್ಣಗೊಳಿಸಬೇಕು. ಬಲದಂಡೆ ನಾಲೆಗಾಗಿ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಬೇಕು. ರೈತರಿಗೆ ಸುಲಭಕ್ಕೆ ಸಾಲ ಸಿಗುವಂತೆ ಮಾಡಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ರಾಜ್ಯ ಕಾಯಂ ಸದಸ್ಯ ಅಮರಣ್ಣ ಗುಡಿಹಾಳ, ಸದಸ್ಯರಾದ ರಾಘವೇಂದ್ರ ಕುಷ್ಟಗಿ, ದೊಡ್ಡಬಸನಗೌಡ ಬಲ್ಲಟಗಿ, ಸೂಗೂರಯ್ಯ ಆರ್‌.ಎಸ್‌.ಹಿರೇಮಠ, ಲಕ್ಣಗೌಡ ಕಡಗಂದೊಡ್ಡಿ, ಜಾನ್‌ವೆಸ್ಲಿ, ಭೀಮೇಶ್ವರರಾವ್‌, ಯಂಕಪ್ಪ ಕಾರಬಾರಿ, ಮಲ್ಲಣ್ಣ ದಿನ್ನಿ, ಬಸವರಾಜ, ವೆಂಕಟರೆಡ್ಡಿ ಸೇರಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.