2ನೇ ದಿನಕ್ಕೆ ಕಾಲಿಟ್ಟ ಧರಣಿ
Team Udayavani, Jun 24, 2022, 5:40 PM IST
ದೇವದುರ್ಗ: ವಿವಿಧ ಬೇಡಿಕೆ ಈಡೇರಿಕೆಗಾಗಿ ಪ್ರಾಂತ ರೈತ ಸಂಘ ಜಾಲಹಳ್ಳಿ ಗ್ರಾಪಂ ಮುಂದೆ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಕೆಲ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುವ ಮೂಲಕ ಬಗೆಹರಿಸಲಾಗಿದೆ. ಜ್ವಲಂತ ಸಮಸ್ಯೆ ಕುರಿತು ಇಲ್ಲಿವರೆಗೆ ಅಧಿಕಾರಿಗಳು ಸ್ಪಂದಿಸದೇ ಹಿಂದೇಟು ಹಾಕಿದ ಹೋರಾಟ ಅನಿವಾರ್ಯ ಎಂದು ಪ್ರತಿಭಟನಾಕರರು ದೂರಿದರು.
ಕುಡಿಯುವ ನೀರು, ಶೌಚಾಲಯ, ರಸ್ತೆ ಸೇರಿದಂತೆ ಹಲವು ಬೇಡಿಕೆಗಳು ಈಡೇರಿಸಲು ಅಧಿಕಾರಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಸಂಜೆಯಾಗುತ್ತಿದ್ದಂತೆ ಸೊಳ್ಳೆ ಉತ್ಪತ್ತಿ ಹೆಚ್ಚಿವೆ. ಫಾಗಿಂಗ್ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಹುಸಿ ಭರವಸೆ ನೀಡುತ್ತಿರುವ ಹಿನ್ನೆಲೆ ನಿವಾಸಿಗಳು ಸಾಂಕ್ರಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ.
ಜಾಲಹಳ್ಳಿ ಗ್ರಾಮದಲ್ಲಿರುವಂತಹ ಹಲವು ಸಮಸ್ಯೆಗಳಿಗೆ ಕೊಡಲೇ ಪರಿಹಾರ ನೀಡಬೇಕು. ಯಾವುದೇ ವಾರ್ಡ್ನಲ್ಲಿರುವ ಸಮಸ್ಯೆಗೆ ತಕ್ಷಣ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಇನ್ನು ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಸಮಪರ್ಕ ಕೆಲಸ ನೀಡುತ್ತಿಲ್ಲ. ಸರಕಾರಿ ಶಾಲೆಗಳು ಅವ್ಯವಸ್ಥೆಯಲ್ಲಿವೆ.
ನರಸಣ್ಣ ನಾಯಕ, ಶಬ್ಬೀರ ಜಾಲಹಳ್ಳಿ, ದುರಗಪ್ಪ ಹೊರಟಿ, ಮೌನೇಶ ದಾಸರ, ಹನುಮಂತ ಮಡಿವಾಳ, ಭೀಮಣ್ಣ ಡೆಂಗಿ, ಸಂಗಮೇಶ, ಶಿವಮಾನ್ಯ ಪ್ಯಾಪ್ಲಿ, ದುರಗಪ್ಪ ಕುಳ್ಳಿ, ಬಸವರಾಜ, ರಂಗನಾಥ, ರಿಯಾಜ್, ಅರ್ತಿ, ಮೇಲಪ್ಪ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ