ಎಕ್ಸಿಸ್ ಬ್ಯಾಂಕ್ ನೋಟಿಸ್ಗೆ ಹೆದರಿ ರೈತ ಆತ್ಮಹತ್ಯೆ
Team Udayavani, Nov 19, 2018, 6:05 AM IST
ದೇವದುರ್ಗ: ಪಟ್ಟಣದ ಎಕ್ಸಿಸ್ ಬ್ಯಾಂಕ್ನಿಂದ ಸಾಲ ಪಡೆದ ತಾಲೂಕಿನ ಬೆಣಕಲ್ ಗ್ರಾಮದ ರೈತನಿಗೆ ಸಾಲ ಮರು ಪಾವತಿಗೆ ನೋಟಿಸ್ ನೀಡಿದ್ದರಿಂದ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಬೆಣಕಲ್ ಗ್ರಾಮದ ರಾಮಪ್ಪ ಚಂದ್ರಾಮಪ್ಪ ತಳವಾರ (30) ಮೃತ ರೈತ. ಈತ ತನ್ನ ತಂದೆ ಹೆಸರಿನಲ್ಲಿದ್ದ ಭೂಮಿ ಮೇಲೆ ದೇವದುರ್ಗ ಎಕ್ಸಿಸ್ ಬ್ಯಾಂಕ್ ಶಾಖೆಯಲ್ಲಿ 10 ಲಕ್ಷ ರೂ. ಸಾಲ ಪಡೆದಿದ್ದ. ಜಮೀನಿನಲ್ಲಿ ಭತ್ತ ಬೆಳೆದಿದ್ದ. ನಿರಂತರ ಬೆಳೆ ಹಾನಿಯಿಂದ ಕಂಗೆಟ್ಟು ಮತ್ತು ಎಕ್ಸಿಸ್ ಬ್ಯಾಂಕ್ ಸಾಲ ವಸೂಲಿಗೆ ನೋಟಿಸ್ ನೀಡಿದ್ದರಿಂದ ಬೇಸತ್ತು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾನೆ ಎನ್ನಲಾಗಿದೆ.
ಮೃತ ರೈತನಿಗೆ ಐವರು ಪುತ್ರಿಯರಿದ್ದಾರೆ. ಪತ್ನಿ ಯಲ್ಲಮ್ಮ ನೀಡಿದ ದೂರಿನ ಮೇರೆಗೆ ದೇವ ದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂಬೈ ಎಕ್ಸಿಸ್ ಬ್ಯಾಂಕ್ ಕೇಂದ್ರ ಕಚೇರಿ ಪರವಾಗಿ ಹೈಕೋರ್ಟ್ ವಕೀಲ ಓ.ಎಂ. ಗುಜರಿ ಮೃತ ರೈತನ ತಂದೆ ಚಂದ್ರಾಮಪ್ಪ ಅವರಿಗೆ ಸಾಲ ಮರುಪಾವತಿಗೆ ನೋಟಿಸ್ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ