ಬೆಳೆ ನಷ್ಟ ಪರಿಹಾರಕ್ಕೆ ತಪ್ಪದ ಅಲೆದಾಟ


Team Udayavani, Aug 1, 2020, 5:01 PM IST

ಬೆಳೆ ನಷ್ಟ ಪರಿಹಾರಕ್ಕೆ ತಪ್ಪದ ಅಲೆದಾಟ

ಸಾಂದರ್ಭಿಕ ಚಿತ್ರ

ದೇವದುರ್ಗ: ಕಳೆದ ವರ್ಷ ಉಂಟಾದ ನೆರೆ ಹಾವಳಿಗೆ ಬೆಳೆ ನಷ್ಟ ಅನುಭವಿಸಿದ ನೂರಾರು ರೈತರಿಗೆ ವರ್ಷವಾದರೂ ಪರಿಹಾರ ಸಿಗದೇ ನಿತ್ಯ ಕಚೇರಿಗೆ ಅಲೆಯುವಂತ ಸ್ಥಿತಿ ಬಂದೊದಗಿದೆ.

ಬಸವ ಸಾಗರ ಜಲಾಶಯದಿಂದ ಕೃಷ್ಣಾನದಿಗೆ 6.75 ಲಕ್ಷ ಕ್ಯೂಸೆಕ್‌ ನೀರು ಬಿಟ್ಟ ಪರಿಣಾಮ ನದಿತೀರದ ನೂರಾರು ರೈತರು ಬೆಳೆದ ಬೆಳೆಗಳು ನೀರು ಪಾಲಾಗಿದ್ದು, ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವಂತಾಗಿದೆ. ರಾಜ್ಯ ಸರಕಾರ ನೇರವಾಗಿ ಬೆಳೆ ನಷ್ಟದ ರೈತರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳು ಇಲ್ಲಿಯವರೆಗೆ ಸ್ಪಷ್ಟ ಮಾಹಿತಿ ನೀಡದಿರುವ ಹಿನ್ನೆಲೆಯಲ್ಲಿ ರೈತರಿಗೆ ಚಿಂತೆಯಾಗಿ ಪರಿಣಮಿಸಿದೆ.

ಆನ್‌ಲೈನ್‌ ಅಪ್‌ಲೋಡ್‌: ಕಳೆದ ವರ್ಷ ನೆರೆ ಹಾವಳಿಗೆ ಬೆಳೆ ನಷ್ಟದ ಪರಿಹಾರ ರೈತರಿಂದ ಬ್ಯಾಂಕ್‌ ಪಾಸ್‌ಬುಕ್‌, ಪಹಣಿ, ಆಧಾರ್‌ ಕಾರ್ಡ್‌ ಸೇರಿ ಇತರೆ ದಾಖಲಾತಿ ಪಡೆದು ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಲಾಗಿದೆ. ಈಗಾಗಲೇ ಶೇ.60ರಷ್ಟು ರೈತರಿಗೆ ಪರಿಹಾರ ಸೌಲಭ್ಯ ಕಲ್ಪಿಸಲಾಗಿದೆ. ಉಳಿದ ನೂರಾರು ರೈತರಿಗೆ ವರ್ಷವಾದರೂ ಪರಿಹಾರದ ಹಣ ಜಮೆ ಆಗಿಲ್ಲ.

ಎಲ್ಲೆಲ್ಲಿ ಹಾನಿ?: ಕೃಷ್ಣಾನದಿ ತೀರದ ಹಲವು ಗ್ರಾಮಗಳು ನೆರೆ ಹಾವಳಿಗೆ ತತ್ತರಿಸಿ ಹೋಗಿದ್ದವು. ಅಂಜಳ, ಹೇರುಂಡಿ, ಲಿಂಗದಹಳ್ಳಿ, ನವಿಲಗುಡ್ಡ, ಯರಗುಡ್ಡ, ಮುದುಗೋಟ, ಬಾಗೂರು, ಕರಿಗುಡ್ಡ, ಮೇದರಗೋಳ, ಕುರ್ಕಿಹಳ್ಳಿ, ಪರತಾಪೂರು, ಕೂಪ್ಪರ ಸೇರಿ ಇತರೆ ಗ್ರಾಮಗಳಿಗೆ ನೀರು ನುಗ್ಗಿ ಬೆಳೆ, ಮನೆಗಳು ಹಾನಿ ಉಂಟಾಗಿತ್ತು. ನೆರೆ ಹಾವಳಿಗೆ ಬಹುತೇಕ ನೆರೆ ಸಂತ್ರಸ್ತರು ಬದುಕನ್ನು ಕಳೆದುಕೊಂಡಂತಾಗಿತ್ತು. ಪಟ್ಟಣದಲ್ಲಿ ಪರಿಹಾರ ಕೇಂದ್ರ ಆರಂಭಿಸಿ ತಾಲೂಕಾಡಳಿತ ಅಗತ್ಯ ಸೌಲಭ್ಯ ಕಲ್ಪಿಸಲಾಗಿತ್ತು.

ಪರಿಹಾರ ವಿಳಂಬ: ನೆರೆ ಹಾವಳಿಗೆ ಜಾಲಹಳ್ಳಿ ಗ್ರಾಮದಲ್ಲಿ 63 ಸಾವಿರ 579 ಎಕರೆ ಪ್ರದೇಶದಲ್ಲಿ ಬೆಳೆ ಹಾನಿ. ಗಬ್ಬೂರು ಹೋಬಳಿ ವ್ಯಾಪ್ತಿಯ 16 ಸಾವಿರ 87 ಎಕರೆ, ದೇವದುರ್ಗ ವ್ಯಾಪ್ತಿಯ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಭತ್ತ, ಹತ್ತಿ, ಹೆಸರು, ಸೂರ್ಯಕಾಂತಿ, ತೂಗರಿ ಸೇರಿ ಇತರೆ ಬೆಳೆಗಳಿಗೆ ನೀರು ನುಗ್ಗಿ ಜಲಾವೃತಗೊಂಡು ಹಾನಿ ಉಂಟಾಗಿತ್ತು. ಮೂರು ಹೋಬಳಿ ವ್ಯಾಪ್ತಿಯಲ್ಲಿ 400ಕ್ಕೂ ಹೆಚ್ಚು ರೈತರಿಗೆ ಇಲ್ಲಿವರೆಗೆ ಬೆಳೆ ನಷ್ಟದ ಪರಿಹಾರ ಬ್ಯಾಂಕ್‌ ಖಾತೆಗೆ ಹಣ ಜಮೆ ಆಗಿಲ್ಲ.

ರೈತರಲ್ಲಿ ಅಸಮಾಧಾನ: ಪ್ರವಾಹ ಉಂಟಾದ ಹಿನ್ನೆಲೆ ಕೃಷ್ಣಾನದಿ ತೀರದ ಹತ್ತಾರೂ ಗ್ರಾಮಗಳಲ್ಲಿ ನೆರೆ ಹಾವಳಿಗೆ ಬೆಳೆ ನಷ್ಟದ ಸಂಕಷ್ಟ ಅನುಭವಿಸಿದ ಬಹುತೇಕ ರೈತರಿಗೆ ಬೆಳೆ ಪರಿಹಾರ ಜಮೆ ಆಗಿಲ್ಲ. ಕೂಪ್ಪರು ಗ್ರಾಮದ ಅಕ್ಕಪಕ್ಕದ ರೈತರಿಗೆ ಹಣ ಜಮೆ ಆಗಿದೆ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಅಧಿಕಾರಿಗಳ ಎಡವಟ್ಟಿನಿಂದ ನಿತ್ಯ ರೈತರು ಕಚೇರಿಗೆ ಅಲೆಯಬೇಕಾಗಿದೆ. ರಾಜ್ಯ ಸರಕಾರ ಬೆಳೆ ಪರಿಹಾರ ನೀಡುವಲ್ಲಿ ಮಲತಾಯಿ ಧೋರಣೆ ತಾಳಿದೆ. ನೊಂದ ರೈತರಿಗೆ ಕೂಡಲೇ ಪರಿಹಾರ ಬ್ಯಾಂಕ್‌ ಖಾತೆಗೆ ಜಮೆ ಮಾಡದೇ ಹೋದಲ್ಲಿ ತಾಲೂಕು ಕಚೇರಿ ಮುಂದೆ ಹೋರಾಟ ನಡೆಸಬೇಕಾಗುತ್ತದೆ.  –ಮಲ್ಲಯ್ಯ ಕಟ್ಟಿಮನಿ, ತಾಲೂಕು ಅಧ್ಯಕ್ಷ, ಕೆಆರ್‌ಎಸ್‌.

ನೆರೆ ಹಾವಳಿ ಬೆಳೆ ನಷ್ಟದ ಪರಿಹಾರ ಸೌಲಭ್ಯ ಕಲ್ಪಿಸಲು ಆನ್‌ಲೈನ್‌ ಮೂಲಕ ಅಪ್‌ಲೋಡ್‌ ಮಾಡಲಾಗಿದೆ. ಸರಕಾರದಿಂದಲೇ ರೈತರ ಬ್ಯಾಂಕ್‌ ಖಾತೆಗೆ ಹಣ ಜಮೆ ಮಾಡಲಾಗುತ್ತದೆ. –ಮಧುರಾಜ ಯಾಳಗಿ,  ತಹಶೀಲ್ದಾರ್‌.

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.