ಪಾಲಿಕೆ ಫೈಟ್:ಕಾಂಗ್ರೆಸ್‌ ಟಿಕೆಟ್‌ಗೆ ಅಲ್ಪಸಂಖ್ಯಾತರ ಬಿಗಿಪಟ್ಟು!

ಅಲ್ಪಸಂಖ್ಯಾತರಿಗೆ ನೀಡುವ ಅವಕಾಶ ಇದ್ದಾಗ್ಯೂ ಕಾಂಗ್ರೆಸ್‌ ನೀಡದಿರುವುದು ಮುಸ್ಲಿಂ ಆಕ್ರೋಶಕ್ಕೆ ಕಾರಣವಾಗಿತ್ತು.

Team Udayavani, Aug 21, 2021, 5:34 PM IST

ಪಾಲಿಕೆ ಫೈಟ್:ಕಾಂಗ್ರೆಸ್‌ ಟಿಕೆಟ್‌ಗೆ ಅಲ್ಪಸಂಖ್ಯಾತರ ಬಿಗಿಪಟ್ಟು!

ರಾಯಚೂರು: ಸಂಪ್ರದಾಯದಂತೆ ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ತಪ್ಪದೆ ಪಡೆದಿರುವ ಅಲ್ಪಸಂಖ್ಯಾತರು, ಮುಂಬರುವ ಚುನಾವಣೆಗೂ ಟಿಕೆಟ್‌ ನೀಡಲೇಬೇಕು ಎಂಬ ಹಕ್ಕೊತ್ತಾಯ ಮಂಡಿಸುವ ಮೂಲಕ ರಾಜಕೀಯ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಚುನಾವಣೆಗೆ ಇನ್ನೂ ಸಾಕಷ್ಟು ಸಮಯ ಇರುವಾಗಲೇ ಈ ವಿಚಾರ ಮುನ್ನೆಲೆಗೆ ಬಂದಿರುವುದು ಕಾಂಗ್ರೆಸ್‌ ಒಳಜಗಳದ ಕಾವು ಹೆಚ್ಚಿಸಿದೆ.

ರಾಯಚೂರು ನಗರ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕಾಂಗ್ರೆಸ್‌ ಟಿಕೆಟ್‌ ನೀಡುತ್ತಲೇ ಬರಲಾಗುತ್ತಿದೆ. ಆದರೆ, 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪುವ ಸಾಧ್ಯತೆ ದಟ್ಟವಾಗಿತ್ತು. ಕೊನೆ ಕ್ಷಣದಲ್ಲಿ ಮಾಜಿ ಶಾಸಕ ಸೈಯದ್‌ ಯಾಸಿನ್‌ರಿಗೆ ಟಿಕೆಟ್‌ ಸಿಗುವ ಮೂಲಕ ಕಾಂಗ್ರೆಸ್‌ ಸಂಪ್ರದಾಯ ಮುಂದುವರಿಸಿತ್ತು. ಆದರೆ, ಆಗ ಪಕ್ಷದ ವರಿಷ್ಠರು ಇದೇ ಕೊನೆ ಮುಂದಿನ ಬಾರಿ ಟಿಕೆಟ್‌ ಬೇರೆಯವರಿಗೆ ನೀಡಲಾಗುವುದು ಎಂಬ ಷರತ್ತಿನ ಮೇಲೆ ನೀಡಿದ್ದರು ಎನ್ನುತ್ತವೆ ಮೂಲಗಳು.

ಆ ಕ್ಷಣಕ್ಕೆ ಅದು ನ್ಯಾಯೋಚಿತ ಎನಿಸಿದರೂ ಈಗ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಂಜುಮನ್‌ ಎ ಸಂಘಟನೆ ಮತ್ತೆ ಧ್ವನಿ ಎತ್ತಿದೆ. ಈಚೆಗೆ ನಗರಕ್ಕೆ ಆಗಮಿಸಿದ್ದ ಪಕ್ಷದ ವರಿಷ್ಠರಾದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಸೇರಿ ಇತರರಿಗೆ ಟಿಕೆಟ್‌ ವಿಚಾರವಾಗಿ ಮನವಿ ಸಲ್ಲಿಸಿದೆ. ಅದಕ್ಕೂ ಮುಂಚೆ ನಗರದಲ್ಲಿ ರ್ಯಾಲಿ ಕೂಡ ನಡೆಸಿದೆ. ಈ ಬೆಳವಣಿಗೆ ಬೇರೆ ಸಮುದಾಯದ ಟಿಕೆಟ್‌ ಆಕಾಂಕ್ಷಿಗಳಿಗೆ ನುಂಗಲಾರದ ತುತ್ತಾಗಿ ಪರಿಣಿಸಿದ್ದು, ಮುಂದಿನ ಬಾರಿಯೂ ಟಿಕೆಟ್‌ ಸಂಘರ್ಷ ಜೋರಾಗಲಿದೆಯೇ ಎಂಬ ಮುನ್ಸೂಚನೆ ನೀಡಿದೆ.

ರಾಯಚೂರು ನಗರ ಕ್ಷೇತ್ರದ ಇತಿಹಾಸವನ್ನೊಮ್ಮೆ ನೋಡಿದರೆ 1957ರಿಂದ ಈವರೆಗೆ ನಡೆದ 15 ಚುನಾವಣೆಗಳಲ್ಲಿ ಏಳು ಬಾರಿ ಅಲ್ಪಸಂಖ್ಯಾತ ಸಮುದಾಯದವರೇ ಕಾಂಗ್ರೆಸ್‌ನಿಂದ ಗೆದ್ದಿದ್ದಾರೆ. ಎಲ್ಲ ಚುನಾವಣೆಗಳಲ್ಲೂ ಟಿಕೆಟ್‌ ಮಾತ್ರ ಅಲ್ಪಸಂಖ್ಯಾತರಿಗೆ ನೀಡಲಾಗಿತ್ತು. ಈ ಬಾರಿ ಬೇರೆಯವರಿಗೆ ನೀಡಬೇಕು ಎನ್ನುವ ಕಾರಣಕ್ಕೆ ಕಳೆದ ಚುನಾವಣೆಯಲ್ಲಿ ಪಕ್ಷದೊಳಗೆ ಗುಂಪುಗಾರಿಕೆ ಏರ್ಪಟ್ಟಿತ್ತು. ಆದರೂ ಅಲ್ಪಸಂಖ್ಯಾತರು ಪ್ರಾಬಲ್ಯ ಸಾಧಿಸಿದ್ದರೂ 2023ರ ಚುನಾವಣೆಯಲ್ಲಾದರೂ ಹಾದಿ ಸುಗಮವಾಗಲಿದೆ ಎಂದುಕೊಂಡವರಿಗೆ ಈಗಿಂದಲೇ ಭಿನ್ನಮತದ ಬಿಸಿ ತಟ್ಟುತ್ತಿರುವುದು ವಿಪರ್ಯಾಸ.

ಅಲ್ಪಸಂಖ್ಯಾತರನ್ನು ಅಲ್ಲಗಳೆಯುವಂತಿಲ್ಲ
ರಾಯಚೂರು ನಗರ ಕ್ಷೇತ್ರ ಮಾತ್ರವಲ್ಲದೇ ಜಿಲ್ಲೆಯ ಏಳು ಕ್ಷೇತ್ರಗಳಲ್ಲೂ ಮುಸ್ಲಿಂ ಮತಗಳು ನಿರ್ಣಾಯಕ ಹಂತದಲ್ಲಿವೆ. ಆದರೆ, ರಾಯಚೂರು, ಸಿಂಧನೂರು ಹೊರತಾಗಿಸಿ ಉಳಿದೆಲ್ಲ ಕ್ಷೇತ್ರಗಳಿಗೆ ಬೇರೆ ಸಮುದಾಯಗಳಿಗೆ ಮೀಸಲಾತಿ ಇದೆ. ಹೀಗಾಗಿ ಅಲ್ಪಸಂಖ್ಯಾತರು ರಾಯಚೂರು ನಗರ ಕ್ಷೇತ್ರ ಒಂದರ ಮೇಲೆಯೇ ಒಲವು ತೋರಿಸುತ್ತಿದ್ದಾರೆ. ಕಾಂಗ್ರೆಸ್‌ ಅಷ್ಟು ಸುಲಭಕ್ಕೆ ಅಲ್ಪಸಂಖ್ಯಾತರ ಬೇಡಿಕೆಯನ್ನು ಅಲ್ಲಗಳೆಯುವುದು ಕಷ್ಟ ಸಾಧ್ಯ ಎನ್ನುವುದು ರಾಜಕೀಯ ವಲಯದ ಚರ್ಚೆಯಾಗುತ್ತಿದೆ.

ಕಾಂಗ್ರೆಸ್‌ ಅಲ್ಪಸಂಖ್ಯಾತರ ಮತಗಳನ್ನು ಭದ್ರ ಮತ ಬ್ಯಾಂಕ್‌ ರೀತಿ ಪಡೆಯುತ್ತಿದ್ದು, ಟಿಕೆಟ್‌ ಹಂಚಿಕೆ ವಿಚಾರ ಬಂದಾಗ ಹಿಂದೇಟಾಕುವುದು ಕಷ್ಟ ಸಾಧ್ಯ ಎನ್ನುತ್ತಾರೆ ಪಕ್ಷದ ಕೆಲ ನಾಯಕರು. ಅಲ್ಲದೇ, ಈಚೆಗೆ ನಗರಸಭೆ ಅಧ್ಯಕ್ಷ ಸ್ಥಾನ ಅಲ್ಪಸಂಖ್ಯಾತರಿಗೆ ನೀಡುವ ಅವಕಾಶ ಇದ್ದಾಗ್ಯೂ ಕಾಂಗ್ರೆಸ್‌ ನೀಡದಿರುವುದು ಮುಸ್ಲಿಂ ಆಕ್ರೋಶಕ್ಕೆ ಕಾರಣವಾಗಿತ್ತು.

ನಾನೇ ಅಭ್ಯರ್ಥಿ ಎನ್ನುವವರಿಲ್ಲ
ಚುನಾವಣೆಗೆ ಇನ್ನೂ ಕಾಲಾವಕಾಶ ಇದ್ದರೂ ಜಿಲ್ಲೆಯ ಕೆಲ ಕ್ಷೇತ್ರಗಳಲ್ಲಿ ನಾವೇ ಮುಂದಿನ ಅಭ್ಯರ್ಥಿ ಎಂದು ಕೆಲಸ ಮಾಡುವ ನಾಯಕರಿದ್ದಾರೆ. ಆದರೆ, ನಗರ ಕ್ಷೇತ್ರದಲ್ಲಿ ಅದರಲ್ಲೂ ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ನಾನೇ ಮುಂದಿನ ಅಭ್ಯರ್ಥಿ ಎಂದು ಬಹಿರಂಗವಾಗಿ ಹೇಳಿಕೊಂಡು ಯಾವುದೇ ನಾಯಕರು ಕೆಲಸ ಮಾಡುತ್ತಿಲ್ಲ. ಚುನಾವಣೆಗೆ ವೇದಿಕೆ ಸಿದ್ಧ ಮಾಡಿಕೊಂಡು ಕೆಲ ನಾಯಕರು ಕೆಲಸ ಮಾಡುತ್ತಿದ್ದಾರೆ.

ವಿನಃ ಬಹಿರಂಗವಾಗಿ ಹೇಳಿಕೊಳ್ಳಲು ಹಿಂಜರಿಯುತ್ತಿದ್ದಾರೆ. ಇದು ಪಕ್ಷದ ಕಾರ್ಯಕರ್ತರಿಗೂ ಗೊಂದಲ ಮೂಡಿಸುತ್ತಿದೆ. ಏತನ್ಮಧ್ಯೆ ರಾಯಚೂರು ನಗರ ಕ್ಷೇತ್ರಕ್ಕೆ ಬೇರೆ ಭಾಗದಿಂದ ಅಭ್ಯರ್ಥಿಗಳು ಬಂದು ಸ್ಪರ್ಧಿಸಲಿದ್ದಾರೆ ಎಂಬ ಗುಮಾನಿಗಳು ಕೂಡ ಜೋರಾಗುತ್ತಿದೆ. ಅಪರೂಪದ ಅತಿಥಿಗಳಂತೆ ಕೆಲ ನಾಯಕರು ನಗರದಲ್ಲಿ ಗುರುತಿಸಿಕೊಳ್ಳುವ ಯತ್ನ ಮಾಡುತ್ತಿರುವುದು ಕೂಡ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಯಾದಗಿರಿ ವಿಧಾನಸಭೆ ಕ್ಷೇತ್ರವನ್ನು ಈ ಬಾರಿ ಅಲ್ಪಸಂಖ್ಯಾತರಿಗೆ ಬಿಟ್ಟು ಕೊಡಲಾಗುತ್ತಿದೆ ಎಂಬ ಸುದ್ದಿಯೂ ಈ ಎಲ್ಲ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ.

ಪ್ರತಿಪಕ್ಷಗಳಿಗೆ ವರವಾದೀತೆ ನಡೆ?
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿದ್ದ ಗುಂಪುಗಾರಿಕೆ ಬಿಜೆಪಿ ಅಭ್ಯರ್ಥಿ ಗೆಲುವಿಗೆ ನೆರವಾಯಿತು. ಈ ಬಾರಿಯೂ ಮತ್ತದೆ ಪರಿಸ್ಥಿತಿ ಏರ್ಪಡುತ್ತಿರುವುದು ಪ್ರತಿಪಕ್ಷಗಳಿಗೆ ವರವಾದರೆ ಅಚ್ಚರಿ ಪಡುವಂತಿಲ್ಲ. ಕಳೆದ ಬಾರಿ ಜೆಡಿಎಸ್‌ನಿಂದ ದುರ್ಬಲ ಅಭ್ಯರ್ಥಿ ಕಣಕ್ಕಿಳಿದ ಕಾರಣ ಕಾಂಗ್ರೆಸ್‌ ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಕಾಂಗ್ರೆಸ್‌ನಲ್ಲಿ ಟಿಕೆಟ್‌ನಿಂದ ಉಂಟಾದ ಭಿನ್ನಮತ ಚುನಾವಣೆ ಮೇಲೆ ಪ್ರಭಾವ ಬೀರಿತು. ಇದು ಬಿಜೆಪಿಗೆ ಅನುಕೂಲವಾಯಿತು. ಈಗಲೂ ಕಾಂಗ್ರೆಸ್‌ನಲ್ಲಿ ಒಮ್ಮತದ ಧ್ವನಿ ಕೇಳಿ ಬರುತ್ತಿಲ್ಲ. ಪಕ್ಷದ ತೀರ್ಮಾನವೇ ಅಂತಿಮವಾಗಿದ್ದರೆ ಈ ರೀತಿ ವರಿಷ್ಠರ ಮುಂದೆ ಟಿಕೆಟ್‌ಗೆ
ಪ್ರಸ್ತಾಪ ಇಡುವ ಸನ್ನಿವೇಶ ಬರುವುದಿಲ್ಲ ಎಂದು ಪಕ್ಷದ ಕೆಲ ನಾಯಕರೇ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

*ಸಿದ್ಧಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.