ಕೆರೆ ತುಂಬಿಸಲು ಈಗಿನಿಂದಲೇ ಕಸರತ್ತು


Team Udayavani, Mar 27, 2022, 5:24 PM IST

19lake

ಸಿಂಧನೂರು: ಪ್ರತಿ ವರ್ಷ ಬೇಸಿಗೆ ಸಂದರ್ಭದಲ್ಲಿ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಿಗಡಾಯಿಸುತ್ತದೆ. ಪ್ರಸಕ್ತ ಸಾಲಿನಲ್ಲಿ ಬೇಸಿಗೆ ಮುನ್ನ ತಾಲೂಕಿನಲ್ಲಿ ಕುಡಿವ ನೀರಿನ ಅಭಾವ, ತಾಪತ್ರಯ ಪರಿಶೀಲಿಸಲು ಆಡಳಿತ ವರ್ಗ ಗಮನ ಹರಿಸಿದೆ.

ಶಾಸಕ ವೆಂಕಟರಾವ್‌ ನಾಡಗೌಡ ಅಧ್ಯಕ್ಷತೆಯಲ್ಲಿ ಭಾನುವಾರ ನಗರದ ತಾಪಂನಲ್ಲಿ ವಿಶೇಷ ಸಭೆಯನ್ನು ಕುಡಿಯವ ನೀರಿಗೆ ಸಂಬಂಧಿಸಿದ ನಿಗದಿಪಡಿಸಲಾಗಿದೆ.

ತಾಲೂಕು ವ್ಯಾಪ್ತಿಗೆ ಒಳಪಡುವ 3 ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಸದ್ಯ ಸ್ಥಿತಿಗತಿಯನ್ನು ಆಲಿಸಲು ಸಭೆ ನಡೆಸಲಾಗುತ್ತಿದೆ. ಸಮಸ್ಯಾತ್ಮಕ ಹಳ್ಳಿ, ಕ್ಯಾಂಪ್‌ ಗಳನ್ನು ಗುರುತಿಸಿ ನೀರಿನ ಅಭಾವ ತಲೆದೋರುವ ಮುನ್ನವೇ ಮುನ್ನೆಚ್ಚರಿಕೆವಹಿಸಲು ಆಡಳಿತ ವರ್ಗ ಎಚ್ಚೆತ್ತುಕೊಂಡಿದೆ.

ತಾಲೂಕಿನಲ್ಲಿವೆ 146 ಕೆರೆ

ಕುಡಿಯುವ ನೀರು ಸಂಗ್ರಹಕ್ಕಾಗಿ ತಾಲೂಕಿನಲ್ಲಿ ನರೇಗಾ ಸೇರಿದಂತೆ ವಿವಿಧ ಯೋಜನೆಯಡಿ ಕೆರೆಗಳನ್ನು ನಿರ್ಮಿಸಲಾಗಿದೆ. ಬರೋಬ್ಬರಿ ಬೇಸಿಗೆ ಮುನ್ನವೇ 140 ಕೆರೆಗಳಲ್ಲಿ ನೀರು ಭರ್ತಿ ಮಾಡಿದರೆ, ಯಾವುದೇ ಅಭಾವ ಉಂಟಾಗುವುದಿಲ್ಲ.

ಬೋರ್‌ವೆಲ್‌ ಆಶ್ರಯಿಸಿರುವ ಉಮಲೂಟಿ, ರಾಗಲಪರ್ವಿ ಸೇರಿ ಇತರೆ ಗ್ರಾಮಗಳಲ್ಲಿ ಹಾಹಾಕಾರ ಉಂಟಾಗುತ್ತದೆ. ಕೆರೆಗಳನ್ನು ಭರ್ತಿ ಮಾಡಿದರೆ, ಅಲ್ಲಿನ ಜನರು ನಿರಾಳರಾಗುತ್ತಾರೆ. ರಾಮಾ ಕ್ಯಾಂಪಿನಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆ ಮಾಡಲಾಗಿತ್ತು. ಇದೀಗ ಕೆರೆ ಹೂಳೆತ್ತಿ ನೀರು ತುಂಬಿಸಲು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದಂತೆ ಎಲ್ಲ ಗ್ರಾಮಗಳಲ್ಲಿ ಕೆರೆಗೆ ನೀರು ತುಂಬಿಸಲು ಆಡಳಿತ ವರ್ಗ ಗಮನ ಹರಿಸಬೇಕಿದೆ.

2ನೇ ಬೆಳೆಗೆ ನೀರು ವರದಾನ

ತುಂಗಭದ್ರಾ ಎಡದಂಡೆಯ ಆರಂಭಿಕ ಪಾಯಿಂಟ್‌ನಲ್ಲಿ ಕಾಲುವೆ ಒಡ್ಡು ಕುಸಿದ ಹಿನ್ನೆಲೆಯಲ್ಲಿ ಸಮಸ್ಯೆ ಉಂಟಾಗಿತ್ತು. ಕೆಲವು ದಿನಗಳ ಕಾಲ ನೀರಿನ ಹರಿವು ಸ್ಥಗಿತಗೊಳಿಸಿದ್ದರಿಂದ ಸಮಸ್ಯೆ ಅನುಭವಿಸಬೇಕಾಯಿತು. ಈವರೆಗೂ ಕೊನೆ ಭಾಗಕ್ಕೆ ನೀರು ಕಳುಹಿಸಲು ಹಾಗೂ ಕಾಲುವೆಯ ಗೇಜ್‌ ಕಾಪಾಡಲು ಅಧಿಕಾರಿಗಳು ಹೋರಾಟ ನಡೆಸಿದ್ದಾರೆ. ಬೆಳೆ ಉಳಿಸುವುದರ ಜೊತೆಗೆ ಬೇಸಿಗೆಯಲ್ಲಿ ನೀರಿನ ಅಭಾವ ತಪ್ಪಿಸಲು ತಾಲೂಕಿನಲ್ಲಿ ಎಲ್ಲ ಕೆರೆಗಳನ್ನು ಭರ್ತಿ ಮಾಡಬೇಕಿದೆ. ಆದರೆ, 2ನೇ ಬೆಳೆಗೆ ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಹರಿಸುತ್ತಿರುವುದರಿಂದ ಅಧಿಕಾರಿಗಳು ನಿರಾಳವಾಗಿದ್ದು, ಮೈ ಮರೆಯದಂತೆ ಎಚ್ಚರಿಸಲು ಮಾ.27ರಂದು ಸಭೆ ಕರೆಯಲಾಗಿದೆ.

ನಮ್ಮ ಭಾಗದಲ್ಲಿ ಯಾವುದೇ ನೀರಿನ ಸಮಸ್ಯೆಯಿಲ್ಲ. ಕಾಲುವೆಯ ಟೇಲೆಂಡ್‌ ಭಾಗದಲ್ಲಿ ಕೆರೆ ತುಂಬಿಸಬೇಕಿದ್ದು, ನೀರಾವರಿ ಇಲಾಖೆಯ ಸಹಕಾರ ಅಗತ್ಯವಾಗಿದೆ. ಪೊಲೀಸರು ಕೂಡ ಭದ್ರತೆ ಒದಗಿಸಬೇಕು. -ಹೆಸರು ಹೇಳಲಿಚ್ಚಿಸದ ಗ್ರಾಪಂ ಪಿಡಿಒ, ಸಿಂಧನೂರು

-ಯಮನಪ್ಪ ಪವಾರ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.