ತುಂಬಿದ ಚರಂಡಿ; ದಿಢೀರ್ ಹೆದ್ದಾರಿ ಬಂದ್-ಆಕ್ರೋಶ
Team Udayavani, Feb 25, 2022, 5:49 PM IST
ಮುದಗಲ್ಲ: ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ವಾರ್ಡ್ ನಂ.7ರ ನಿವಾಸಿಗಳು ಚರಂಡಿ ಸ್ವತ್ಛಗೊಳಿಸದ್ದರಿಂದ ಸೊಳ್ಳೆಕಾಟಕ್ಕೆ ಬೇಸತ್ತು ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿ ಪುರಸಭೆ ಮುಖ್ಯಾಧಿಕಾರಿ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಾರ್ಡ್ ನಂ.7 ಹನುಮಂತ ದೇವರ ಗುಡಿ ಮುಂಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಹಿನ್ನೆಲೆಯಲ್ಲಿ ನಿರ್ಮಿಸಿದ ಚರಂಡಿಗೆ ಸಂಪರ್ಕ ಕಲ್ಪಿಸದೇ ಹಳೇ ಚರಂಡಿಯಲ್ಲಿ ಪುರಸಭೆ ಮುಂದಿರುವ ಮೂತ್ರಾಲಯ ಹಾಗೂ ಶೌಚಾಲಯ ನೀರು ಹರಿದು ಹಳೇ ಚರಂಡಿಯಲ್ಲಿ ಕಳೆದ ನಾಲ್ಕಾರು ತಿಂಗಳಿಂದ ಅದರಲ್ಲಿಯೇ ಸಂಗ್ರಹವಾಗಿದೆ. ಇದು ಅಲ್ಲಿನ ನಿವಾಸಿಗೆ ತೊಂದರೆಯಾಗಿದೆ. ಹೀಗಾಗಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆಕ್ರೋಶಗೊಂಡು ಏಕಾಏಕಿ ಒಂದು ಗಂಟೆ ಕಾಲ ಹೆದ್ದಾರಿ ಬಂದ್ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸೈ ಡಾಕೇಶ ಹಾಗೂ ಸಿಬ್ಬಂದಿ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಅಷ್ಟಾದರೂ ಮುಖ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ನೈರ್ಮಲ್ಯ ನಿರೀಕ್ಷಕಿ ಆರೀಫುನ್ನಿಸಾಬ ಆಗಮಿಸಿ ಒಂದು ಗಂಟೆಯಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿ ಹಳೇ ಚರಂಡಿ ಮುಚ್ಚಿಸಿ ಜನರ ಸಮಸ್ಯೆಗೆ ಸ್ಪಂದಿಸಿದರು.
ಈ ವೇಳೆ ಭೀಮಣ್ಣ ಉಪ್ಪಾರ, ಲಿಂಗಪ್ಪ ಉಪ್ಪಾರ, ರಾಮು ಉಪ್ಪಾರ, ಶಂಕರ, ರಾಮಣ್ಣ ಉಪ್ಪಾರ, ಅಮೀನ ನದಾಫ್, ಆನಂದ ಮಡಿವಾಳ, ಶರಣು ಹೂಗಾರ, ಹೇಮಂತ ಪಾಟೀಲ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ