ಐಐಐಟಿ ಬಾಕಿ ಕಾಮಗಾರಿ ಶೀಘ್ರ ಮುಗಿಸಿ

ಅಧಿಕಾರಿಗಳಿಗೆ ಡಿಸಿ ವೆಂಕಟೇಶಕುಮಾರ್‌ ನಿರ್ದೇಶನ

Team Udayavani, Oct 14, 2020, 4:57 PM IST

rc-tdy-2

ರಾಯಚೂರು: ಯರಮರಸ್‌ ಬಳಿಯ ಸರ್ಕಾರಿಇಂಜಿನಿಯರ್‌ ಕಾಲೇಜಿನಲ್ಲಿ ಐಐಐಟಿ ತರಗತಿಆರಂಭಿಸುವ ನಿಟ್ಟಿನಲ್ಲಿ ಬಾಕಿ ಕಾಮಗಾರಿತ್ವರಿತಗತಿಯಲ್ಲಿ ಮುಗಿಸುವಂತೆ ಸಂಬಂಧ ಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ್‌ ನಿರ್ದೇಶನ ನೀಡಿದರು.

ಯರಮರಸ್‌ ಬಳಿಯ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ನಿರ್ಮಿಸುತ್ತಿರುವ ಐಐಐಟಿಯ ತಾತ್ಕಾಲಿಕ ಕಟ್ಟಡದಲ್ಲಿ ತರಗತಿಗಳಆರಂಭಕ್ಕೆ ಕೈಗೊಳ್ಳಬೇಕಾದ ಪೂರ್ವಭಾವಿ ಸಿದ್ಧತೆಗಳ ಕುರಿತು ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಐಐಐಟಿ ತರಗತಿ ಆರಂಭಕ್ಕೆ ಅಗತ್ಯವಿರುವ ಮೂಲ ಸೌಲಭ್ಯ ಒದಗಿಸುವಂತೆ ಈ ಹಿಂದೆಭೇಟಿ ನೀಡಿದ ತಜ್ಞರ ತಂಡ ಸೂಚಿಸಿತ್ತು. ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜಿಗೆ ಭೇಟಿ ನೀಡಿದಾಗ ಕೂಲಂಕಷವಾಗಿ ಪರಿಶೀಲಿಸಿ ಏನೆಲ್ಲ ಸೌಲಭ್ಯ ಅಗತ್ಯ ಎಂಬುದನ್ನು ತಿಳಿಸಿತ್ತು. ತರಗತಿಗಳು ಹಾಗೂ

ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಅಗತ್ಯವಿರುವ ಸೌಕರ್ಯಗಳ ಪಟ್ಟಿ ಒದಗಿಸಿ ಅದರಂತೆ ಸೌಲಭ್ಯ ಕಲ್ಪಿಸುವಂತೆ ತಿಳಿಸಿತ್ತು. ಆ ಹಿನ್ನೆಲೆಯಲ್ಲಿ ಕಟ್ಟಡಕ್ಕೆ ವೈ ಫೈ, ಯುಪಿಎಸ್‌, ಇನ್‌ವರ್ಟರ್‌, ಟಿ.ವಿ, ಗೀಸರ್‌, ಬೀದಿ ದೀಪಗಳು, ರಸ್ತೆ, ಚರಂಡಿ, 15 ಕೆ.ಬಿ. ಜನರೇಟರ್‌, ಬಾಸ್ಕೆಟ್‌ಬಾಲ್‌, ಫುಟ್‌ಬಾಲ್‌, ವಾಲಿಬಾಲ್‌ ಮೈದಾನ ಸಿದ್ಧಪಡಿಸಬೇಕು. ವಿದ್ಯಾರ್ಥಿನಿಲಯದ ಕಿಟಕಿಗಳಿಗೆ ಮೆಸ್‌ ಅಳವಡಿಕೆ, ಅಡುಗೆ ಕೋಣೆಯಲ್ಲಿ ಶುದ್ಧ ಕುಡಿವ ನೀರು ಪೂರೈಕೆ, ನಾಮಫಲಕಗಳು ಸೇರಿ ಕೂಡಲೇ ಬಾಕಿ ಉಳಿದಿರುವ ಕಾಮಗಾರಿ ಮುಗಿಸುವಂತೆ ಸೂಚಿಸಿದರು.

ಲೋಕೋಪಯೋಗಿ ಇಲಾಖೆ, ಕ್ಯಾಷುಟೆಕ್‌, ಕೆಆರ್‌ಐಡಿಎಲ್‌ ಸಂಸ್ಥೆಗಳಿಗೆ ಕಾಮಗಾರಿ ಹೊಣೆ ನೀಡಿದ್ದು, ನಿಮಗೆ ಸಂಬಂ ಧಿಸಿದ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸುವಂತೆ ಸೂಚಿಸಿದರು. ರಸ್ತೆ ಗುಂಡಿ ಮುಚ್ಚುವುದು, ವಿದ್ಯುತ್‌ ಪೂರೈಕೆಗೆ ಪರಿವರ್ತಕಗಳ ಅಳವಡಿಕೆ, ಮಳೆಗಾಲವಾದ ಕಾರಣ ಕೂಡಲೇ ಸಸಿ ನೆಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಬರುವ 15-20 ದಿನಗಳಲ್ಲಿ ಹೈದರಾಬಾದ್‌ನ ತಂಡವು ಆಗಮಿಸಿ ಇಲ್ಲಿ ಒದಗಿಸಿರುವ ಸೌಲಭ್ಯ ಕುರಿತು ಪರಿಶೀಲಿಸಲಿದೆ ಎಂದರು.

ಈ ವೇಳೆ ಜಿಪಂ ಸಿಇಒ ಲಕ್ಷ್ಮೀಕಾಂತ ರೆಡ್ಡಿ, ಪಿಡಬ್ಲ್ಯುಡಿ ಇಇ ಚನ್ನಬಸಪ್ಪ ಮೆಕಾಲೆ, ಕ್ಯಾಷುಟೆಕ್‌ ನ ಶರಣಬಸಪ್ಪ ಪಟ್ಟೇದ್‌, ಕೆಆರ್‌ಡಿಎಲ್‌ನ ಕಾರ್ಯನಿರ್ವಾಹಕ ಇಂಜಿನಿಯರ್‌ ಅನಿಲ್‌ಕುಮಾರ್‌, ಕಾಲೇಜು ಪ್ರಾಚಾರ್ಯ ವೀರೇಶ್‌ ಇತರರಿದ್ದರು.

ಈ ತಾತ್ಕಾಲಿಕ ಕಟ್ಟಡದಲ್ಲಿ ತರಗತಿ ಪ್ರಾರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಈಗಾಗಲೇ ಸೂಚಿಸಿದ್ದಾರೆ. ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತರಗತಿಗಳು ಇನ್ನು ಮುಂದೆ ಇಲ್ಲಿಯೇಪ್ರಾರಂಭವಾಗಲಿದ್ದು, ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. – ಆರ್‌. ವೆಂಕಟೇಶಕುಮಾರ್‌, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.