ಮೀನುಗಾರರ ಹುಡುಕಾಟಕ್ಕೆ ಮಹಾ ಗೃಹ ಸಚಿವರಿಗೆ ಪತ್ರ
Team Udayavani, Jan 27, 2019, 12:30 AM IST
ರಾಯಚೂರು: ಮೀನುಗಾರರ ನಾಪತ್ತೆ ಪ್ರಕರಣ ಈಗ ಕೇಂದ್ರ ಸರ್ಕಾರದ ಅಂಗಳದಲ್ಲಿದೆ. ಘಟನೆ ಮಹಾರಾಷ್ಟ್ರ ಗಡಿಯಲ್ಲಿ ನಡೆದಿರುವ ಕಾರಣ ಸಿಎಂ ಕುಮಾರಸ್ವಾಮಿ, ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ತಾವು ಸೇರಿ ಮಹಾರಾಷ್ಟ್ರದ ಗೃಹ ಸಚಿವರಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದೇವೆ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಹುಡುಕಾಟ ಮಾಡಿದ ಬಳಿಕ ಒಂದಷ್ಟು ಅವಶೇಷ ಸಿಕ್ಕಿದ್ದು, ಅದರಿಂದ ಏನಾದರು ಸುಳಿವು ಸಿಗಬಹುದು ಎಂಬ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿದಿದೆ. ಅದರ ಜತೆಗೆ ಮಹಾರಾಷ್ಟ್ರದ ಗೃಹ ಸಚಿವರ ಭೇಟಿಗೆ ಅವಕಾಶ ಸಿಕ್ಕಲ್ಲಿ ಹೆಚ್ಚಿನ ಕ್ರಮಕ್ಕೆ ಮನವಿ ಮಾಡಲಾಗುವುದು ಎಂದರು.
ರಾಯಚೂರು ಪ್ರತ್ಯೇಕ ವಿವಿ ಸ್ಥಾಪನೆ ಪ್ರಸ್ತಾವನೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ. ಫೆ.6ರಂದು ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಆಗ ಪ್ರತ್ಯೇಕ ವಿವಿ ಸ್ಥಾಪನೆ ಬಗ್ಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ