ವೀರಶೈವ ಧರ್ಮಕ್ಕಿದೆ ಐದು ಸಾವಿರ ವರ್ಷಗಳ ಇತಿಹಾಸ: ಕಾಶಿ ಶ್ರೀ


Team Udayavani, Jul 23, 2018, 1:16 PM IST

ray-2.jpg

ಲಿಂಗಸುಗೂರು: ವೀರಶೈವ ಧರ್ಮಕ್ಕೆ ಐದು ಸಾವಿರ ವರ್ಷಗಳ ಇತಿಹಾಸವಿದೆ. ರಂಭಾಪುರಿ, ಉಜ್ಜಯಿನಿ, ಕೇದಾರ, ಕಾಶೀ, ಶ್ರೀಶೈಲ ಈ ಪಂಚಪೀಠಗಳು ರಾಷ್ಟ್ರೀಯ ಮಹಾಪೀಠಗಳಾಗಿವೆ ಎಂದು ಕಾಶಿ ಜ್ಞಾನ ಸಿಂಹಾಸನ ಪೀಠದ ಜಗದ್ಗುರು ಶ್ರೀ ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ನುಡಿದರು.

ತಾಲೂಕಿನ ದೇವರಭೂಪುರ ಬೃಹನ್ಮಠದಲ್ಲಿ ರವಿವಾರ ನಡೆದ ಅಮರೇಶ್ವರ ಗುರುಗಜದಂಡ ಶಿವಾಚಾರ್ಯರ 13ನೇ ಪುಣ್ಯಸ್ಮರಣೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಪೂಜ್ಯರು ಆಶೀರ್ವಚನ ನೀಡಿದರು.

ಪಂಚಪೀಠಗಳು ಸಮಸ್ತ ಮನುಕುಲದ ಉದ್ಧಾರಕ್ಕಾಗಿ ಅವತಾರ ತಾಳಿ, ವರ್ಗ, ವರ್ಣ, ಜಾತಿ, ಮತ, ಭಾಷೆಗಳ ಭೇದವಿಲ್ಲದೆ ಎಲ್ಲ ವರ್ಗದ ಜನರಿಗೆ ಸಮಾನತೆ ಸಾರುವ ಲಿಂಗದಿಧೀಕ್ಷೆ, ಜ್ಞಾನಾರ್ಜನೆ, ಸಂಸ್ಕಾರ ನೀಡುತ್ತಿವೆ. ಪಂಚಪೀಠಗಳು ಮತ್ತು ಶಾಖಾ ಮಠಗಳು ಸಮಾಜದ ಉದ್ಧಾರ ಕಾರ್ಯಮಾಡುತ್ತಿವೆ ಎಂದರು. 

ಇಂತಹ ಶಾಖಾ ಮಠಗಳ ಪೈಕಿ ಉಜ್ಜಯಿನಿ ಪೀಠದ ಶಾಖಾ ಮಠವಾದ ದೇವರಭೂಪುರದ ಬೃಹನ್ಮಠವು ಶಿವನೇ ಬಾಲಕನ ರೂಪದಲ್ಲಿ ಧರೆಗೆ ಬಂದು ಶ್ರೀಮಠದ ಗಜದಂಡ ಶಿವಾಚಾರ್ಯರಿಂದ ಲಿಂಗ ದೀಕ್ಷೆ, ವಿದ್ಯಾಭ್ಯಾಸ ಪಡೆದ ಶ್ರೇಷ್ಠ ಪ್ರಾಚೀನ ಮಠವಾಗಿದೆ. ಅಲ್ಲದೆ ಶ್ರೀಮಠದಲ್ಲಿ ಸಿದ್ಧಾರೂಢರು 12 ವರ್ಷಗಳ ಕಾಲ ಸೇವೆ ಮಾಡಿ ಗುರುವಿನಿಂದ ದೀಕ್ಷೆ ಪಡೆದು ಪ್ರಸಿದ್ಧರಾಗಿದ್ದಾರೆ. ಇಂತಹ ಗುರು-ಶಿಷ್ಯ ಪರಂಪರೆಯ ಸಾಮರಸ್ಯ ಸಾರಿದ ಶ್ರೀಮಠ ಇನ್ನು ಬೆಳೆಯಲಿ ಎಂದು ಆಶಿಸಿದರು.

ಭೂಮಿಯ ಮೇಲಿನ 84 ಲಕ್ಷ ಚರಾಚರ ಜೀವರಾಶಿಗಳಲ್ಲಿ ಮಾನವ ಜನ್ಮ ಶ್ರೇಷ್ಠವೆಂದೆನಿಸಿದೆ. ಮನುಷ್ಯ ಜನ್ಮ ತಾಳಿದ ಮೇಲೆ ದೇವರು, ಗುರು ಮತ್ತು ತಂದೆ-ತಾಯಿಗಳ ಋಣದಲ್ಲಿರುತ್ತಾನೆ. ಈ ಎಲ್ಲರ ಋಣದಿಂದ ಮುಕ್ತರಾಗಲು ದೇವರ ಸ್ಮರಣೆ, ಗುರು ಮತ್ತು ತಂದೆ-ತಾಯಿಗಳ ಸೇವೆಯಲ್ಲಿ ತೊಡಗಬೇಕು. ಇವರ ಸೇವೆಯಿಂದ ಮಾತ್ರ ಸನ್ಮಾರ್ಗ ಸಾಧ್ಯ ಎಂದರು.

ಪ್ರತಿನಿತ್ಯ ದೇವರನ್ನು ಸ್ಮರಿಸಬೇಕು. ಜ್ಞಾನಾರ್ಜನೆ ನೀಡಿದ ಗುರುವಿನ ಮತ್ತು ಹೆತ್ತು ಹೊತ್ತು ಸಾಕಿ ಸಲುಹಿದ ತಂದೆ-ತಾಯಿಗಳ ಸೇವೆ ಮಾಡಬೇಕು. ಅಂದಾಗ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ ಎಂದರು.

ಅಮರೇಶ್ವರ ಅಭಿನವ ಗುರುಗಜದಂಡ ಶಿವಾಚಾರ್ಯರು, ಮರಿಸಿದ್ಧಲಿಂಗ ಶಿವಾಚಾರ್ಯರು, ಗುರುಲಿಂಗ ಶಿವಾಚಾರ್ಯರು, ಪ್ರಶಾಂತಸಾಗರ ಶಿವಾಚಾರ್ಯರು, ಮುರುಘೇಂದ್ರ ಸ್ವಾಮೀಜಿ, ಬೆಟ್ಟಪ್ಪಯ್ಯ ತಾತನವರು, ಚಂದ್ರಶೇಖರಯ್ಯ ಶ್ರೀಗಳು, ಮಾಜಿ ಸಚಿವ ರಾಜಾ ಅಮರೇಶ್ವರ ನಾಯಕ, ಗ್ರಾಪಂ ಮಾಜಿ ಅಧ್ಯಕ್ಷ ರಾಜಾ ಸೋಮನಾಥ ನಾಯಕ, ಮುಖಂಡರಾದ ಆರ್‌. ಎಸ್‌.ನಾಡಗೌಡ, ಸಿದ್ಧನಗೌಡ ಪಾಟೀಲ, ಗಜೇಂದ್ರ ನಾಯಕ, ಶರಣಯ್ಯ ಗೊರೇಬಾಳ, ವಲಿಬಾಬು ಸೇರಿದಂತೆ ಇತರರು ಇದ್ದರು.

ಇತ್ತೀಚಿನ ದಿನಮಾನಗಳಲ್ಲಿ ತಂದೆ-ತಾಯಿ ಗಳಿಸಿದ ಆಸ್ತಿ ಬೇಕು. ಆದರೆ ಅವರು ಬೇಡ ಎಂಬ ಮನೋಭಾವ ಮಕ್ಕಳಲ್ಲಿ ಹೆಚ್ಚುತ್ತಿರುವುದು ವಿಷಾದನೀಯ. ತಂದೆ-ತಾಯಿಯನ್ನು ದೇವರಂತೆ ಕಂಡಾಗ ಪುಣ್ಯ ಪ್ರಾಪ್ತಿ ಆಗುತ್ತದೆ.  ಜಗದ್ಗುರು ಶ್ರೀ ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಕಾಶಿ ಜ್ಞಾನಸಿಂಹಾಸನಾಧೀಶ್ವರ ಪೀಠ

ಟಾಪ್ ನ್ಯೂಸ್

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.