ರಾಯಚೂರು: ಮಸ್ಕಿಹಳ್ಳ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ ವೇಳೆ ಹಗ್ಗ ತುಂಡಾಗಿ ಓರ್ವ ನೀರುಪಾಲು
Team Udayavani, Oct 11, 2020, 10:57 AM IST
ರಾಯಚೂರು: ಜಿಲ್ಲೆಯಲ್ಲಿ ಶನಿವಾರ ರಾತ್ರಿಯಿಂದ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು, ಮಸ್ಕಿ ಹಳ್ಳದ ಪ್ರವಾಹಕ್ಕೆ ಯುವಕನೋರ್ವ ಕೊಚ್ಚಿಹೋದ ಘಟನೆ ನಡೆದಿದೆ. ಪ್ರವಾಹಕ್ಕೆ ಮತ್ತೊಬ್ಬ ಯುವಕನನ್ನು ರಕ್ಷಿಸಲಾಗಿದೆ.
ಹಳ್ಳಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿಸಿದ ಪರಿಣಾಮ ಯುವಕರು ಪ್ರವಾಹಕ್ಕೆ ಸಿಲುಕಿದ್ದರು. ರಕ್ಷಣೆ ವೇಳೆ ಹಗ್ಗ ಕಡಿದು ಹೋಗಿದ್ದು ಓರ್ವ ಯುವಕ ಪ್ರವಾಹದಲ್ಲಿ ಸಿಲಿಕಿ ಕೊಚ್ಚಿ ಹೋಗಿದ್ದಾನೆ. ರಕ್ಷಣೆ ಹೋಗಿದ್ದ ಮೂವರು ಈಜಿ ದಡ ಸೇರಿದ್ದಾರೆ. ತಾಲ್ಲೂಕು ಆಡಳಿತ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮಸ್ಕಿನಾಲಾ ಜಲಾಶಯಕ್ಕೆ ಒಳ ಹರಿವು ಮತ್ತೆ ಹೆಚ್ಚಾಗಿದೆ. ಸತತ ಮಳೆಯಿಂದ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ 2100 ಕ್ಯೂಸೆಕ್ ಗಡಿ ದಾಟಿದ್ದು, ಜಲಾಶಯದ ನಾಲ್ಕು ಗೇಟುಗಳ ಮೂಲಕ 1600 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ. ಇದರಿಂದ ಮಸ್ಕಿ, ಪೋತ್ನಾಳ ಹಳ್ಳಗಳು ತುಂಬಿ ಹರಿಯುತ್ತಿದ್ದು, ಜನ ಜಾನುವಾರುಗಳನ್ನು ಹಳ್ಳಕ್ಕೆ ಬಿಡದಂತೆ ಸೂಚನೆ ನೀಡಲಾಗಿದೆ.
ರಾತ್ರಿಯಿಂದ ಈವರೆಗೂ ಎಡೆಬಿಡದೆ ಮಳೆ ಸುರಿಯುತ್ತಿದ್ದು ನಾನಾ ಅವಾಂತರ ಸೃಷ್ಟಿಸಿದೆ. ನಗರದ ತಗ್ಗು ಪ್ರದೇಶಗಳಿಗೆ ಮತ್ತೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಹತ್ತಿ ಕಾಯಿ ಬಿಟ್ಟಿರುವ ಪರಿಣಾಮ ನೆಲಕ್ಕೆ ಒರಗಿ ಕಪ್ಪಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!