ಪಠ್ಯಪುಸ್ತಕದಲ್ಲಿ ಜಾನಪದ ಸಾಹಿತ್ಯ ಅಳವಡಿಸಲಿ
•ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ •ಗ್ರಾಮೀಣ ಜನರ ಬದುಕಿನ ಚಿತ್ರಣವೇ ಜಾನಪದ ಸಾಹಿತ್ಯ
Team Udayavani, May 27, 2019, 9:56 AM IST
ರಾಯಚೂರು: ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ರವಿವಾರ ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಹಾಗೂ ಸಿಂದಿಗಿ ಜಾನಪದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.
ರಾಯಚೂರು: ಪ್ರಸ್ತುತ ಆಧುನೀಕರಣ ಭರಾಟೆಯ ದಿನಗಳಲ್ಲಿ ಜಾನಪದ ಸಾಹಿತ್ಯ, ಕಲೆಗಳು ಕಣ್ಮರೆಯಾಗುತ್ತಿದ್ದು, ಪಠ್ಯಪುಸ್ತಕದಲ್ಲಿ ಜಾನಪದ ಸಾಹಿತ್ಯ ಅಳವಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾನಪದ ಸಾಹಿತ್ಯದ ಅಭಿರುಚಿ ಬೆಳೆಸುವ ಕೆಲಸ ಆಗಬೇಕು ಎಂದು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ| ಬಾಲಾಜಿ ಅಭಿಪ್ರಾಯಪಟ್ಟರು.
ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ರವಿವಾರ ನಡೆದ ಜಿಲ್ಲಾ ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಹಾಗೂ ಸಿಂದಿಗಿ ಜಾನಪದ ಸ್ಮರಣ ಸಂಚಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಾನಪದ ಸಾಹಿತ್ಯ ಉಳಿಸಿ ಬೆಳೆಸುವ ಎಲ್ಲರ ಕರ್ತವ್ಯ ನಮ್ಮ ಗ್ರಾಮೀಣ ಜನರ ಬದುಕನ್ನು ಬಿಂಬಿಸುವ ಸಾಹಿತ್ಯವೇ ಇದಾಗಿದೆ. ಯುವಕರು ಇಂಥ ಸಾಹಿತ್ಯ ಹೆಚ್ಚಾಗಿ ಅಭ್ಯಾಸ ಮಾಡಬೇಕು ಎಂದರು.
ನಿವೃತ ಪ್ರಾಧ್ಯಾಪಕಿ ಡಾ| ಜಯಲಕ್ಷ್ಮೀ ಮಂಗಳಾಮೂರ್ತಿ ಮಾತನಾಡಿ, ಜಾನಪದ ಸಾಹಿತ್ಯ ಸರ್ವವ್ಯಾಪಿ ಸಾಹಿತ್ಯವಾಗಿದೆ. ಇದರಲ್ಲಿ ಅನೇಕ ನೈತಿಕತೆಗಳು ಅಡಗಿವೆ. ಇದನ್ನು ಕೇವಲ ಆಸ್ವಾದಿಸುವುದಲ್ಲದೇ ಅದರಲ್ಲಿನ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಅತಿಥಿ ವೀರಹನುಮಾನ ಮಾತನಾಡಿ, ಮೂಲ ರಾಮಾಯಣದಲ್ಲಿ ಇರಲಾರದ ಎಷ್ಟೋ ವಿಚಾರಗಳು ಜಾನಪದ ರಾಮಾಯಣದಲ್ಲಿ ಅಡಗಿವೆ ಎಂದರು. ಸಿಂದಿಗಿಯ ಜಾನಪದ ಸ್ಮರಣ ಸಂಚಿಕೆಯನ್ನು ಹಿರಿಯ ವಾಹನ ನಿರೀಕ್ಷಕ ವೆಂಕಟೇಶ್ವರರಾವ್ ಬಿಡುಗಡೆಗೊಳಿಸಿದರು. ಸಾಹಿತಿ ಅಯ್ಯಪ್ಪಯ್ಯ ಹುಡಾ, ಕಸಾಪ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಶಿಖರಮಠ, ಕರವೇ ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ಡಾ| ಅರುಣ ಹಿರೇಮಠ, ಡಾ| ಅಹೋಜಿ ಮಾತನಾಡಿದರು.
ಪರಿಷತ್ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಶರಣಪ್ಪ ಗೋನಾಳ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಅವಧೂ ಬಂಡಗಾರ, ಸಿದ್ದಯ್ಯಸ್ವಾಮಿ ಚೇಗುಂಟ, ಕವಿಗಳಾದ ಯಾಡ್ಕಿ ಮಹೇಶಬಾಬು, ತಾಯಪ್ಪ, ಬಿ.ಹೊಸೂರು, ಡಾ| ಧರ್ಮಣ್ಣ, ದೇವರೆಡ್ಡಿ, ಶ್ರೀದೇವಿ, ವೀರಣ್ಣ, ಪಲುಗುಲ ನಾಗಾರಾಜ, ಗಜಲ್ ಸಾಹಿತ್ಯ ಪರಿಷತ್ ಅಧ್ಯಕ್ಷ ರಾಂಪುರಿ, ಹಾಜಿಬಾಬು , ಶ್ರೀಕಾಂತ, ಪ್ರವೀಣ ಮಾನ್ವಿ, ಗೋಪಾಲ, ವೀರಪ್ಪ ಸೇರಿ ಇತರರಿದ್ದರು. ಮುರಳೀಧರ ಕುಲಕರ್ಣಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ