ಜಾತಿ ಆಧಾರದಡಿ ಕೂಲಿ ಪಾವತಿ ನಿಲ್ಲಿಸಲು ಒತ್ತಾಯ
Team Udayavani, Mar 24, 2022, 6:03 PM IST
ರಾಯಚೂರು: ತಾಲೂಕಿನಲ್ಲಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಜಾತಿ ಅನುಸಾರವಾಗಿ ಕೂಲಿ ಹಣ ಪಾವತಿಸುವ ಆದೇಶ ರದ್ದುಪಡಿಸಿ ಎಲ್ಲರಿಗೂ ಸಮಾನತೆಯಿಂದ ಕೂಲಿ ಪಾವತಿ ಮಾಡಬೇಕು ಎಂದು ಕರ್ನಾಟಕ ಜನಸೈನ್ಯದಿಂದ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಿನಲ್ಲಿ 34 ಗ್ರಾಪಂಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಗ್ರಾಮೀಣ ಕೂಲಿ ಕಾರ್ಮಿಕರು ಸುಮಾರು ಅನೇಕ ವರ್ಷಗಳಿಂದ ಕೆಲಸ ಮಾಡುತ್ತಿದ್ದು ಜಾತಿ, ಮತ, ಭೇದವಿಲ್ಲದೇ ನಡೆದುಕೊಂಡು ಹೋಗುತ್ತಿದ್ದಾರೆ. ದುಡಿಯುವ ಕೂಲಿ ಕಾರ್ಮಿಕರಿಗೆ ಜಾತಿಗೆ ಅನುಗುಣವಾಗಿ ಎನ್ಎಂಆರ್ ತೆಗೆದು ಕೆಲಸ ಮಾಡಿರುವ ಪರಿಶಿಷ್ಟ ಜಾತಿ ಕೂಲಿ ಕಾರ್ಮಿಕರಿಗೆ ಮೊದಲನೇ ಹಂತದಲ್ಲಿ ಕೂಲಿ ಹಣ ಜಮಾ ಮಾಡುವುದು, ಒಬಿಸಿ ಜಾತಿಯ ಕೂಲಿ ಕಾರ್ಮಿಕರಿಗೆ 2ನೇ ಹಂತದಲ್ಲಿ ಕೂಲಿ ಹಣ ಪಾವತಿಸುವುದು. ಹೀಗೆ ಒಂದು ಕಣ್ಣಿಗೆ ಬೆಣ್ಣೆ ಇನ್ನೊಂದು ಕಣ್ಣಿಗೆ ಸುಣ್ಣದಂತೆ ತಾರತಮ್ಯ ನೀತಿ ಅನುಸರಿಸುವ ಆದೇಶ ಹೊರಡಿಸಿರುವುದಕ್ಕೆ ಕೂಲಿ ಕಾರ್ಮಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ ಎಂದು ದೂರಿದರು.
ಈ ಜಾತಿ, ಮತ, ಭೇದ ದೂರವಿಟ್ಟು, ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ಮಾಡುವ ಎಲ್ಲ ಕೂಲಿ ಕಾರ್ಮಿಕರಿಗೆ ಈ ಹಿಂದೆ ಇರುವಂತೆ ಏಕ ಕಾಲಕ್ಕೆ ಕೂಲಿ ಹಣ ಪಾವತಿಸುವ ಆದೇಶ ಹೊರಡಿಸುವಂತೆ ಒತ್ತಾಯಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ ವೆಂಕಟೇಶ ಅರಗೋಲು, ವೆಂಕಟಸ್ವಾಮಿ, ರಮೇಶ ವಡವಾಟಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ