ರಾಯಚೂರು: ಪ್ರತಿಭಟನೆ ವೇಳೆ ಮಾಜಿ ಶಾಸಕರಿಂದ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ
Team Udayavani, Nov 3, 2021, 1:10 PM IST
ರಾಯಚೂರು: ಪ್ರತಿಭಟನೆ ವೇಳೆ ಮಾಜಿ ಶಾಸಕ ಎ.ಪಾಪಾರೆಡ್ಡಿ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದ್ದು, ಪೊಲೀಸ್ ವಲಯದ ಆಕ್ರೋಶಕ್ಕೆ ಕಾರಣವಾಗಿದೆ.
ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಇದಕ್ಕೆ ಅವಕಾಶ ನೀಡದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ.
ಇದನ್ನೂ ಓದಿ: ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಿಜೆಪಿ ಎಸ್.ಸಿ. ಮೋರ್ಚಾ ಪ್ರತಿಭಟನೆ
ಪೊಲೀಸರು ಪ್ರತಿಕೃತಿ ತೆರವು ಮಾಡಲು ಮುಂದಾಗಿದ್ದಾರೆ. ಇದರಿಂದ ಕೋಪಗೊಂಡ ಮಾಜಿ ಶಾಸಕ ಎ ಪಾಪಾರೆಡ್ಡಿ ಪಶ್ಚಿಮ ಠಾಣೆ ಪೇದೆ ರಾಘವೇಂದ್ರ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ಸ್ಥಿತಿ ಏರ್ಪಟ್ಟಿತ್ತು.
ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.