ಹಿಜಾಬ್ ಹೆಸರಿನಲ್ಲಿ ಶಿಕ್ಷಣದಿಂದ ವಂಚನೆ ಸಲ್ಲ
Team Udayavani, Feb 6, 2022, 1:33 PM IST
ಸಿರವಾರ: ಕುಂದಾಪುರ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ನಿಷೇಧದ ಹೆಸರಿನಲ್ಲಿ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತಗೊಳಿಸುತ್ತಿರುವ ಪ್ರಾಚಾರ್ಯರ ವಿರುದ್ಧ ಕ್ರಮ ಜರುಗಿಸುವಂತೆ ಅಂಜುಮನ್ ಕಮಿಟಿ ವತಿಯಿಂದ ಒತ್ತಾಯಿಸಲಾಯಿತು.
ಮುಸ್ಲಿಂ ಧರ್ಮದಲ್ಲಿ ಹಿಜಾಬ್ ಎಂಬುವುದು ಕಡ್ಡಾಯವಾಗಿ ಪಾಲನೆ ಮಾಡಬೇಕಾದ ಅಂಶ. ಮುಸ್ಲಿಂ ಧರ್ಮದ ಯಾವುದೇ ಹೆಣ್ಣು ಮಗಳು ವಯಸ್ಕಳಾದ ಮೇಲೆ ಅನ್ಯರಿಗೆ ಮುಖ ಮತ್ತು ಕೈಗಳನ್ನು ಮಾತ್ರ ತೋರಿಸಬೇಕು ಎಂಬುವುದು ಪ್ರಮುಖ ಅಂಶವಾಗಿದೆ. ನಮ್ಮ ಹೆಣ್ಣು ಮಕ್ಕಳು ಹಿಜಾಬ್ ಧರಿಸಿಕೊಂಡು ಬರುತ್ತಿದ್ದು, ಇದು ನಮ್ಮ ಮೂಲಭೂತ ಹಕ್ಕಾಗಿದೆ. ಇದನ್ನು ಕಸಿದುಕೊಳ್ಳಲು ಹೊರಟಿರುವುದು ಖಂಡನೀಯ. ಈ ರೀತಿ ವಿದ್ಯಾರ್ಥಿಗಳನ್ನು ವಿದ್ಯಾಭ್ಯಾಸದಿಂದ ದೂರ ಇಡುತ್ತಿರುವ ಕಾಲೇಜಿನ ಪ್ರಾಚಾರ್ಯರನ್ನು ಕೂಡಲೇ ಅಮಾನತು ಮಾಡುವಂತೆ ಒತ್ತಾಯಿಸಿದರು.
ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಗ್ರೇಡ್-2 ತಹಶೀಲ್ದಾರ್ ಪರಶುರಾಮ್ ಅವರಿಗೆ ಸಲ್ಲಿಸಲಾಯಿತು. ಕಮಿಟಿಯ ಅಧ್ಯಕ್ಷ ಮಹಮ್ಮದ್ ವಲಿ ಗುತ್ತೇದಾರ್, ಸತ್ತರ್ಸಾಬ್, ಇಬ್ರಾಹಿಂ, ರಾಜಾ ಬಗ್ಗೆ, ಅಜ್ಮೀರ್, ಬಾಹುದ್ದೀನ್, ರಜಾಕ್, ರಫಿ, ಚಾಂದ್, ಇಸ್ಮಾಯಿಲ್, ಮರಿಯಣ್ಣ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ