ಸ್ಪರ್ಧಾತ್ಮಕ ಪರೀಕ್ಷೆಗೆ ʼಉಚಿತ ತಾಲೀಮು’

ಸ್ವಂತ ದುಡ್ಡಿನಲ್ಲಿ ಆಯೋಜನೆ ; ಬಡ ವಿದ್ಯಾರ್ಥಿಗಳಿಗೆ ಅನುಕೂಲ ; ಮಾದರಿ ಕಾರ್ಯಕ್ಕೆ ಮುಂದಾದ ಸರಕಾರಿ ನೌಕರರು

Team Udayavani, Oct 9, 2022, 4:40 PM IST

21

ರಾಯಚೂರು: ಕೆಎಎಸ್‌ ಪಾಸ್‌ ಮಾಡಬೇಕೆಂಬ ಕನಸು ಹೊತ್ತು ಪರೀಕ್ಷೆಗೆ ಸಿದ್ಧಗೊಳ್ಳುತಿರುವ ಸರ್ಕಾರಿ ನೌಕರರಿಬ್ಬರು ತಮ್ಮೊಟ್ಟಿಗೆ ಸಹಸ್ರಾರು ವಿದ್ಯಾರ್ಥಿಗಳನ್ನು ಅದೇ ಹಾದಿಯಲ್ಲಿ ಕರೆದೊಯ್ಯುತ್ತಿದ್ದು, ಪ್ರತಿ ರವಿವಾರ ಸ್ವಂತ ದುಡ್ಡಿನಲ್ಲಿ ಪ್ರಾಯೋಗಿಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಮಾದರಿ ಕಾರ್ಯಕ್ಕೆ ಮುಂದಾಗಿದ್ದಾರೆ.

ಇಲ್ಲಿನ ಅರಣ್ಯ ಇಲಾಖೆಯ ನೌಕರ ಮಹೇಂದ್ರ ನಾಯಕ ಹಾಗೂ ಆಯುಷ್‌ ಇಲಾಖೆಯ ಪ್ರಥಮ ದರ್ಜೆ ಸಹಾಯಕ ನರಸಪ್ಪ ಅಸ್ಕಿಹಾಳ ಸೇರಿ ಪ್ರತಿ ವಾರ ಸ್ವಂತ ಹಣದಲ್ಲಿ ನೂರಾರು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸುತ್ತಿದ್ದಾರೆ. ಪೊಲೀಸ್‌ ಹುದ್ದೆ, ಎಸ್‌ಡಿಎ, ಎಫ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ನೀಡಿ ನಗರದ ಜಿಲ್ಲಾ ಗ್ರಂಥಾಲಯ ಬಳಿ ಪರೀಕ್ಷೆ ನಡೆಸಲಾಗುತ್ತಿದೆ. ಪೂರಕ ಪರೀಕ್ಷೆ ನಡೆಸಲು ಬೇಕಾಗುವ ಎಲ್ಲ ಖರ್ಚು-ವೆಚ್ಚಗಳನ್ನು ಇವರೇ ಭರಿಸುತ್ತಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡುವ ಅನೇಕ ಕೇಂದ್ರಗಳು ಈಗ ನಾಯಿ ಕೊಡೆಗಳಂತೆ ಹುಟ್ಟಿಕೊಂಡಿವೆ. ಆಕಾಂಕ್ಷಿಗಳಿಂದ ಸಾವಿರಾರು ರೂ. ಹಣ ಪಡೆದು ತರಬೇತಿ ನೀಡುತ್ತಿವೆ. ಆದರೆ ಬಡ ಮಕ್ಕಳಿಗೆ ಇಂಥ ಕಡೆ ತರಬೇತಿ ಪಡೆಯಲು ಸಾಧ್ಯವಾಗದೆ ಸರ್ಕಾರಿ ನೌಕರಿ ಗಗನ ಕುಸುಮವಾಗಿದೆ. ಇಂಥ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಆಸಕ್ತಿ ಮೂಡಲಿ ಎಂಬ ನಿಟ್ಟಿನಲ್ಲಿ ಈ ಕಾರ್ಯ ಕೈಗೊಂಡಿದ್ದು, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

200-300 ವಿದ್ಯಾರ್ಥಿಗಳು ಹಾಜರ್‌: ಪ್ರತಿ ವಾರ ಇವರು ನಡೆಸುವ ಪರೀಕ್ಷೆಗೆ ಏನಿಲ್ಲವೆಂದರೂ 200-300 ಜನ ಹಾಜರಾಗುತ್ತಿದ್ದಾರೆ. ಕಳೆದ 14 ವಾರಗಳಿಂದ ಪರೀಕ್ಷೆ ನಡೆಸಿಕೊಂಡು ಬರುತ್ತಿದ್ದು, ಅಂದಾಜು 1500 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ನೀಡುವ ಈ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕೂಡ ಇವರೇ ಸಿದ್ಧಪಡಿಸುವುದು ವಿಶೇಷ. ಪರೀಕ್ಷೆ ನಂತರ ಸ್ಥಳದಲ್ಲಿಯೇ ಅಂಕ ಘೋಷಿಸಲಾಗುತ್ತದೆ. ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನ ನೀಡುತ್ತಾರೆ. ಈ ಎಲ್ಲ ಕಾರ್ಯಗಳಿಗೆ ಆಗುವ ವೆಚ್ಚವನ್ನು ಅವರೇ ಭರಿಸುತ್ತಾರೆ. ಸರ್ಕಾರವೇ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲು ಜಾತಿ ತಾರತಮ್ಯ ಮಾಡಿದರೆ; ಇವರು ಮಾತ್ರ ಯಾರೇ ಬಂದರೂ ಪರೀಕ್ಷೆ ಬರೆಯಲು ಅವಕಾಶ ನೀಡುತ್ತಾರೆ. ಇವರ ಕಾರ್ಯಕ್ಕೆ ವಿದ್ಯಾರ್ಥಿಗಳಾದ ಸಂಜೀವ್‌, ಪ್ರಕಾಶ, ಚಂದಪ್ಪ, ನರೇಶ ಸೇರಿದಂತೆ ಹಲವರು ಸಹಕಾರ ನೀಡುತ್ತಿದ್ದಾರೆ.

ಇವರು ಮಾತ್ರವಲ್ಲ ಇವರ ಅನೇಕ ಸ್ನೇಹಿತರು ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿ ವಾರ ಅಂಥವರಲ್ಲಿ ಒಬ್ಬರನ್ನು ಆಹ್ವಾನಿಸಿ ಉದ್ಯೋಗಾಂಕ್ಷಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

ನಾವು ಸರ್ಕಾರಿ ನೌಕರಿ ಪಡೆದರೂ ಕೆಎಎಸ್‌ಗೆ ಅಧ್ಯಯನ ನಡೆಸುತ್ತಿದ್ದೇವೆ. ಈಗಾಗಲೇ ಎರಡು ಬಾರಿ ಪ್ರಯತ್ನಿಸಿದ್ದೇನೆ. ನಾವು ಅಧ್ಯಯನ ಮಾಡುವ ವಿಷಯಗಳನ್ನು ಬೇರೆ ವಿದ್ಯಾರ್ಥಿಗಳಿಗೂ ತಿಳಿಸಿದರೆ ಅವರಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ಬರೆಯಬೇಕೆನ್ನುವ ಮನೋಭಾವ ಮೂಡುತ್ತದೆ. ಕಳೆದ 14 ವಾರಗಳಿಂದ ಪರೀಕ್ಷೆ ನಡೆಸಿಕೊಂಡು ಬರಲಾಗುತ್ತಿದೆ. –ಮಹೇಂದ್ರ ನಾಯಕ, ಅರಣ್ಯ ಇಲಾಖೆ ಸಿಬ್ಬಂದಿ, ರಾಯಚೂರು.

ಉದ್ಯೋಗಾಂಕ್ಷಿಗಳಿಗೆ ನೆರವಾಗಲಿ ಎಂಬ ದೃಷ್ಟಿಯಿಂದ ಪ್ರತಿವಾರವೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದ ಮಾದರಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಎಲ್ಲ ಸಮುದಾಯದ ಉದ್ಯೋಗಾಂಕ್ಷಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಯಾರಿಂದಲೂ ಹಣ ಪಡೆಯಲ್ಲ. ಉದ್ಯೋಗಾಂಕ್ಷಿಗಳಿಗೂ ಇಂಥ ಪರೀಕ್ಷೆಯಿಂದ ಭಯ ಹೋಗಲಾಡಿಸಲು ಅನುಕೂಲವಾಗುತ್ತದೆ.  –ನರಸಪ್ಪ, ಆಯುಷ್‌ ಇಲಾಖೆ ನೌಕರ.

ಸಾಕಷ್ಟು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇಗೆ ಬರೆಯಬೇಕು. ಹೇಗೆ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದೇ ತಿಳಿಯುತ್ತಿಲ್ಲ. ಇಂಥ ಪರೀಕ್ಷೆಗಳು ನಡೆಸುವುದರಿಂದ ಪರೀಕ್ಷೆಯ ಭಯವೂ ಹೋಗುತ್ತದೆ. ಅಲ್ಲದೇ ಹೆಚ್ಚು ಅಧ್ಯಯನ ಮಾಡಲು ಅನುಕೂಲವಾಗಲಿದೆ.  ಮಹೇಂದ್ರ ನಾಯಕ ಹಾಗೂ ನರಸಪ್ಪ ಅಸ್ಕಿಹಾಳ ಅವರ ಈ ಸೇವೆ ಶ್ಮಾಘನೀಯ.  –ನಿಸ್ಸಾರ್‌ ಅಹ್ಮದ್‌, ಡಿವೈಎಸ್‌ಪಿ, ಮುನಿರಾಬಾದ್‌.

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.