ಚಂದ್ರಬಂಡಾ ಗ್ರಾಪಂಗೆ ಗಾಂಧಿ  ಗ್ರಾಮ ಪುರಸ್ಕಾರ


Team Udayavani, Sep 30, 2018, 3:38 PM IST

ray-1.jpg

ರಾಯಚೂರು: ಅಭಿವೃದ್ಧಿ, ಪಾರದರ್ಶಕ ಆಡಳಿತ ಸೇರಿ ಹಲವು ಮಾನದಂಡಗಳನ್ನು ಆಧರಿಸಿ ನೀಡುವ ಗಾಂಧಿ  ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ಜಿಲ್ಲೆಯ 5 ಪಂಚಾಯಿತಿಗಳ ಪೈಕಿ ಚಂದ್ರಬಂಡಾ ಕೂಡ ಒಂದು.

ಈಗಿರುವ ಪಂಚಾಯಿತಿಗಳಲ್ಲಿ ಗುರುತಿಸಿಕೊಳ್ಳುವಂಥ ಪ್ರಗತಿ ಸಾಧಿಸಿರುವುದು ಇಲ್ಲಿನ ಹೆಗ್ಗಳಿಕೆ. ಐದು ಗ್ರಾಮಗಳನ್ನು ಒಳಗೊಂಡ ಈ ಪಂಚಾಯಿತಿಯಲ್ಲಿ 25 ಸದಸ್ಯರಿದ್ದಾರೆ. ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಬೇಕಾದ ಕೆಲಸವನ್ನು ಸಾಧ್ಯವಾದ ಮಟ್ಟಿಗೆ ಮಾಡಿದ್ದನ್ನೇ ಸಾಧನೆ ಎಂದು ಪರಿಗಣಿಸಬೇಕಿದೆ. ಹಾಗಂತ ಇದೇನು ಮಾದರಿ ಪಂಚಾಯಿತಿ ಅಲ್ಲ. ಉಳಿದವುಗಳಿಗಿಂತ ಉತ್ತಮ ಎಂದೇ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಜಿಲ್ಲಾ ಕೇಂದ್ರಕ್ಕೆ ಕೇವಲ 12 ಕಿ.ಮೀ. ದೂರದಲ್ಲಿರುವ ಚಂದ್ರಬಂಡಾ ಗಡಿಭಾಗ. ಆಡಳಿತಕ್ಕೂ, ವ್ಯವಹಾರಕ್ಕೂ ರಾಯಚೂರನ್ನೇ ನಂಬಿಕೊಂಡಿರುವ ಇಲ್ಲಿನ ಜನರಿಗೆ ಅಭಿವೃದ್ಧಿಯ ಕಲ್ಪನೆ ಇಲ್ಲದಿರಲಿಕ್ಕಿಲ್ಲ. ಆ ಕಾರಣಕ್ಕೋ, ಅಥವಾ ಜನಪ್ರತಿನಿದಿಗಳ ಇಚ್ಛಾಶಕ್ತಿಗೋ ಸಿಸಿ ರಸ್ತೆ, ಚರಂಡಿ, ಶಾಲಾ ಕೌಂಪೌಂಡ್‌ಗಳು ಸೇರಿ ಕೆಲ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ನಡೆದಿವೆ.  ದ್ರಬಂಡಾ ಹೋಬಳಿ ಕೇಂದ್ರವಾದ್ದರಿಂದ ನಾಡ ಕಚೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತ ಸಂಪರ್ಕ ಕೇಂದ್ರ, ಹಿರಿಯ ಪ್ರಾಥಮಿಕ ಶಾಲೆ ಎಲ್ಲವೂ ಒಂದೇ ಕಂಪೌಂಡ್‌ನೊಳಗೆ ಸಿಗುತ್ತದೆ.

ಕಟ್ಲಟೂರು, ಅರಸಿಗೇರಾ, ಗಣಮೂರು, ಪಲವಲದೊಡ್ಡಿ ಗ್ರಾಮಗಳು ಪಂಚಾಯಿತಿ ವ್ಯಾಪ್ತಿಗೆ ಬರುತ್ತಿದ್ದು, ಉದ್ಯೋಗ ಖಾತ್ರಿ ಯೋಜನೆ ಯಶಸ್ವಿಯಾಗಿದೆ. 1,620 ಜಾಬ್‌ಕಾರ್ಡ್‌ ಗುರಿಯಿದ್ದು, 1200ಕ್ಕೂ ಅಧಿಕ ಜನರಿಗೆ ಕೆಲಸ ನೀಡಲಾಗುತ್ತಿದೆ. 14ನೇ ಹಣಕಾಸಿನ ಯೋಜನೆಯಡಿ 19 ಕೆಲಸಗಳನ್ನು ನಡೆಸಿದ್ದು, ಅವುಗಳನ್ನು ಗಾಂಧಿ  ಸಾಕ್ಷಿ ಕಾಯಕ ಸಾಫ್ಟ್‌ವೇರ್‌ನಲ್ಲಿ ದಾಖಲಿಸಲಾಗಿದೆ. ಈ ಎಲ್ಲ ಅಂಶಗಳನ್ನು ಪ್ರಶಸ್ತಿ ಆಯ್ಕೆಯ ಪ್ರಮುಖಾಂಶಗಳು ಎಂದು
ಹೇಳಬಹುದು.

ಇಕ್ಕಟ್ಟಾದ ಕಟ್ಟಡ: ಗ್ರಾಮ ಪಂಚಾಯತಿಗೆ ಸುಸಜ್ಜಿತ ಕಟ್ಟಡವಿಲ್ಲ. ಸುಮಾರು 25 ಸದಸ್ಯರಿರುವ ಪಂಚಾಯಿತಿಯಲ್ಲಿ ಸಭೆ ನಡೆಸಿದರೆ ಮುಂದಿನ ಆವರಣದಲ್ಲಿ ನಡೆಸಬೇಕು. ಇರುವ ಎರಡು ಕೋಣೆಯೊಳಗೆ ಪಂಚಾಯಿತಿ ನಡೆಸಬೇಕಿದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೇ ಪ್ರತ್ಯೇಕ ಕೊಠಡಿ ಇಲ್ಲ. ಎಚ್‌ಕೆಆರ್‌ಡಿಬಿ ಅನುದಾನದಡಿ ಕಟ್ಟಡ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದರ ಜತೆಗೆ ಪಂಚಾಯಿತಿಯ ಯಾವುದಾದರೂ ಯೋಜನೆಯಡಿ ಕಟ್ಟಡ ನಿರ್ಮಿಸುವ ಚಿಂತನೆ ಇದೆ ಎನ್ನುತ್ತಾರೆ ಪಿಡಿಒ ಹನುಮಂತ.

ಫ್ಲೋರೈಡ್‌ಯುಕ್ತ ನೀರು: ಪಂಚಾಯಿತಿ ಇನ್ನೂ ಶುದ್ಧ ಕುಡಿಯುವ ನೀರು ಪೂರೈಸುವಲ್ಲಿ ಶಕ್ತವಾಗಿಲ್ಲ. ಇಲ್ಲಿ ಫ್ಲೋರೈಡ್‌ ನೀರು ಹೆಚ್ಚಾಗಿದ್ದು, ಜನ ವಿಧಿ  ಇಲ್ಲದೇ ಕುಡಿಯಬೇಕಿದೆ. ಪಂಚಾಯಿತಿ ಕಡೆಯಿಂದ ಚಂದ್ರಬಂಡಾ ಮತ್ತು ಗಣಮೂರಿನಲ್ಲಿ ಒಂದೊಂದು ಶುದ್ಧ ನೀರಿನ ಘಟಕಗಳನ್ನು ಅಳವಡಿಸಿದ್ದು, ಅದು ಸಾಲುತ್ತಿಲ್ಲ. ಪಂಚಾಯಿತಿಯಡಿ 9 ಸಾವಿರ ಜನಸಂಖ್ಯೆಯಿದ್ದರೆ, ಚಂದ್ರಬಂಡಾದಲ್ಲೇ 4 ಸಾವಿರಕ್ಕೂ ಅಧಿಕ ಜನರಿದ್ದಾರೆ. ಎಲ್ಲರಿಗೂ ನೀರಿನ ಸೌಲಭ್ಯ ಕಲ್ಪಿಸಬೇಕಿದೆ. ಆದರೆ, ನಿರೀಕ್ಷಿತ ಮಟ್ಟದಲ್ಲಿ ಕರ ವಸೂಲಿ ಆಗುತ್ತಿಲ್ಲ ಎನ್ನುವ ಕಾರಣಕ್ಕೆ ಅಭಿವೃದ್ಧಿ ವೇಗಕ್ಕೂ ಕಡಿವಾಣ ಬಿದ್ದಿದೆ.

ಇನ್ನು ಸಾಕಷ್ಟು ಕಡೆ ಚರಂಡಿ ವ್ಯವಸ್ಥೆ ಮಾಡಬೇಕಿದೆ. ಶೌಚಗೃಹ ನಿರ್ಮಾಣದಲ್ಲಿ ಶೇ.85ರಷ್ಟು ಗುರಿ ತಲುಪಿರುವುದಾಗಿ ಹೇಳುವ ಅಧಿಕಾರಿಗಳು ಅವುಗಳನ್ನು ಬಳಸುವಂತೆ ಜಾಗೃತಿ ಮೂಡಿಸಬೇಕಿದೆ. ಒಟ್ಟಾರೆ ಇರುವುದರಲ್ಲಿಯೇ ಉತ್ತಮ ಪಂಚಾಯಿತಿ ಎಂಬ ಕಾರಣಕ್ಕೆ ಪ್ರಶಸ್ತಿ ಮುಡಿಗೇರಿದೆ ಎಂದು ಹೇಳಬಹುದು.

ಈ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಚಂದ್ರಬಂಡಾ ಪಂಚಾಯಿತಿ ಆಯ್ಕೆಯಾಗಿರುವುದು ಸಂತಸ ತಂದಿದೆ. ನಾವು ಕೆಲಸ ಮಾಡಿರುವುದರ ಜತೆಗೆ ಸಾಪ್ಟ್ವೇರ್‌ನಲ್ಲಿ ಎಲ್ಲ ವಿವರ ದಾಖಲಿಸಿದ್ದೇವೆ. ಸರ್ಕಾರ ನೀಡಿದ ಪ್ರಶ್ನಾವಳಿಯನ್ನು ಭರ್ತಿ ಮಾಡಿ ಕಳುಹಿಸಲಾಗಿತ್ತು. 
 ಹನುಮಂತ, ಚಂದ್ರಬಂಡಾ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.