ಎಲ್ಲ ಭಾಷೆಗೆ ಸಮಾನ ಹಕ್ಕು ನೀಡಿ


Team Udayavani, Sep 15, 2020, 3:16 PM IST

rc-tdy-1

ರಾಯಚೂರು: ಕೇಂದ್ರ ಸರ್ಕಾರ ಜಾರಿಗೆ ತಂದ ಹಿಂದಿ ದಿವಸ್‌ ಆಚರಣೆ ಖಂಡಿಸಿ ನಗರದಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ನಗರದ ಡಾ| ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಡಿಸಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.

ಕೇಂದ್ರ ಸರ್ಕಾರ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರುವ ಮೂಲಕ ಪ್ರಾದೇಶಿಕ ಭಾಷೆಗಳ ಅಸ್ತಿತ್ವಕ್ಕೆ ಧಕ್ಕೆ ತರುವ ಹುನ್ನಾರ ನಡೆಸಿದೆ. ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಹಿನ್ನೆಲೆಯಿದೆ. ಈಗ ಆಡಳಿತ ಭಾಷೆಯಾಗಿ ಹಿಂದಿ ಹೇರಿಕೆ ಮಾಡಿ ಹಂತ ಹಂತವಾಗಿ ಪ್ರಾದೇಶಿಕ ಭಾಷೆಗಳನ್ನು ಕೊಲ್ಲುವ ಯತ್ನ ನಡೆಸುತ್ತಿರುವುದು ಖಂಡನೀಯ ಎಂದರು.

ಸೆ.14ರಂದು ಹಿಂದಿ ದಿವಸ್‌ ಆಚರಣೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು.ಅದನ್ನು ಭಾರತೀಯ ಭಾಷಾ ದಿನವನ್ನಾಗಿ ಆಚರಿಸಬೇಕು. ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿರುವ ಎಲ್ಲ 22 ಭಾಷೆಗಳನ್ನು ಅಧಿಕೃತ ಸಂಪರ್ಕ ಭಾಷೆಗಳನ್ನಾಗಿಮಾಡಬೇಕು. ಶಿಕ್ಷಣ, ಉದ್ಯೋಗದ  ವಿಚಾರದಲ್ಲಿ ಎಲ್ಲ ಭಾಷೆಗಳಿಗೂ ಸಮಾನ ಹಕ್ಕು ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ವಿನೋದರೆಡ್ಡಿ, ಕೊಂಡಪ್ಪ, ವಿಷ್ಣು ಪ್ರಸಾದ್‌ ಯಾದವ್‌, ಶರಣಪ್ಪ ಆಟೋ, ಸಾದಿಕ್,ಫಿರೋಜ್‌, ರಮೇಶ, ವೆಂಕಟೇಶ, ಸುರೇಶ, ಪ್ರಕಾಶ ಇತರರಿದ್ದರು. ಕರ್ನಾಟಕ ಜನ ಸೈನ್ಯ: ಇದೇ ವಿಚಾರವಾಗಿ ಕರ್ನಾಟಕ ಜನ ಸೈನ್ಯ ಸಂಘಟನೆ ಸದಸ್ಯರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹಿಂದಿ ದಿವಸ್‌ ಆಚರಿಸುವ ಮೂಲಕ ದಕ್ಷಿಣ ಭಾರತದ ಎಲ್ಲ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರಿಕೆಗೆ ಮುಂದಾಗಿದೆ.ದಕ್ಷಿಣ ಭಾರತದಲ್ಲಿ ಎಲ್ಲ ವಿದ್ಯಾರ್ಥಿಗಳಿಗೆಶೈಕ್ಷಣಿಕವಾಗಿ ಒತ್ತಾಯಪೂರ್ವಕವಾಗಿ ಹಿಂದಿಭಾಷೆ ಕಲಿಯುವಂತೆ ಮಾಡುತ್ತಿರುವುದು ಖಂಡನೀಯ. ದಕ್ಷಿಣ ಭಾರತದ ಮಕ್ಕಳಿಗೆ ತ್ರಿಭಾಷಾ ನೀತಿ ಜಾರಿಗೆ ತಂದು ಮಕ್ಕಳ ವಿದ್ಯಾಭ್ಯಾಸದ ಮೇಲೆ ಒತ್ತಡ ಹಾಕುತ್ತಿರುವುದು ದುರದೃಷ್ಟಕರ ಸಂಗತಿ ಎಂದರು.

ಉತ್ತರ ಭಾರತದಲ್ಲಿ ಹೆಚ್ಚಾಗಿ ಹಿಂದಿ ಬಳಸುವುದರಿಂದ ಅಲ್ಲಿ ಬೇಕಾದರೆ ಆಚರಿಸಿಕೊಳ್ಳಲಿ. ಆದರೆ, ದಕ್ಷಿಣ ಭಾರತದಲ್ಲಿ ಪ್ರತಿ ರಾಜ್ಯಕ್ಕೂ ತನ್ನದೆಯಾದ ಪ್ರಾದೇಶಿಕ ಭಾಷೆ ಇದ್ದು, ಅದಕ್ಕೆ ಐತಿಹಾಸಿಕ ಹಿನ್ನೆಲೆ ಕೂಡ ಇದೆ. ಹಿಂದಿ ದಿವಸ್‌ವನ್ನು ದಕ್ಷಿಣ ಭಾರತ ರಾಜ್ಯಗಳಿಗೆ ಕಡ್ಡಾಯಗೊಳಿಸಬಾರದು. ಈ ಬಗ್ಗೆ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು.

ಸಂಘಟನೆ ಜಿಲ್ಲಾಧ್ಯಕ್ಷ ವೆಂಕಟೇಶ ಅರಗೋಲ, ಪದಾಧಿಕಾರಿಗಳಾದ ಶಾಂತಕುಮಾರ, ಪ್ರಸಾದ ಭಂಡಾರಿ, ವೆಂಕಟಸ್ವಾಮಿ, ಬಸವರಾಜ ಕ್ಯಾದಿಗೇರಾ, ವೀರಣ್ಣ ಶೆಟ್ಟಿ ಭಂಡಾರಿ, ಹುಸೇನ್‌, ಸಂದೀಪ, ರಮೇಶ, ಭೀಮೇಶ ಸೇರಿ ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.