ಕಾಲುವೆ ಸ್ಥಿತಿ ದೇವರಿಗೆ ಪ್ರೀತಿ


Team Udayavani, Mar 16, 2019, 11:53 AM IST

ray-2.jpg

ಲಿಂಗಸುಗೂರು: ಅಲ್ಲಲ್ಲಿ ಕಿತ್ತು ಹೋದ ಲೈನಿಂಗ್‌, ಸರ್ವೀಸ್‌ ರಸ್ತೆ ಕಾಣದಂತ ಸ್ಥಿತಿಯಲ್ಲಿ ಬೆಳೆದ ಮುಳ್ಳಿನ ಗಿಡಗಳು ಇದು ನಾರಾಯಣಪುರ ಬಲದಂಡೆ ಮತ್ತು ರಾಂಪುರ ಏತ ನೀರಾವರಿ ಯೋಜನೆಗಳ ಕಾಲುವೆಗಳ ದುಸ್ಥಿತಿ.

ಕೃಷ್ಣ ಮೇಲ್ದಂಡೆ ಯೋಜನೆಯ ಸ್ಕೀಂ ಎ ಅಡಿಯಲ್ಲಿ ಯೋಜನೆಯಡಿಯಲ್ಲಿ ನಾರಾಯಣಪುರ ಬಲದಂಡೆ ನಾಲೆ 0.00 ಕಿಮೀ ದಿಂದ 95 ಕಿಮೀ ಕಾಮಗಾರಿ ಪೂರ್ಣಗೊಳಿಸಲಾಯಿತು. ರಾಯಚೂರು, ಲಿಂಗಸುಗೂರು ಹಾಗೂ ದೇವದುರ್ಗ ತಾಲೂಕುಗಳ 84 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರುಣಿಸುತ್ತದೆ. ಜಡಿ ಶಂಕರಲಿಂಗ ಏತ ನೀರಾವರಿ (ರಾಂಪುರ) ಯೋಜನೆ ಆರಂಭಿಸಿ ತಾಲೂಕಿನ ಸುಮಾರು 20.235 ಹೆಕ್ಟೇರ್‌ ಭೂ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗಿದೆ.

ನಾರಾಯಣಪುರ ಬಲದಂಡೆ ಹಾಗೂ ರಾಂಪುರ ಯೋಜನೆಯ ಮುಖ್ಯ ಹಾಗೂ ವಿತರಣಾ ನಾಲೆಗಳ ಎರಡು ಬದಿಯ ಲೈನಿಂಗ್‌ ಹಾಳಾಗಿದೆ. ಸರ್ವೀಸ್‌ ರಸ್ತೆಗಳಲ್ಲಿ ಬೋಂಗಾ, ಮುಳ್ಳಿನ ಕಂಟಿಗಳು ಬೆಳೆದು ನಾಲೆಗಳೇ ಕಾಣದಂತಾಗಿದೆ. ಇದರಿಂದ ನಾಲೆಗಳು ಒಡೆದು ಹೋಗುವುದಕ್ಕೆ ಕಾರಣವಾಗಿದೆ. ಕೆಲವೊಂದು ನಾಲೆಗಳಲ್ಲಿ ಹೂಳು ತುಂಬಿ ನಾಲೆ ಯಾವುದೋ ರಸ್ತೆ ಯಾವುದೋ ಎಂದು ವ್ಯತ್ಯಾಸ ತಿಳಿಯದಾಗಿದೆ. 

ಹೊಲಗಾಲುವೆ ಸಂಪೂರ್ಣ ಕಾಣದಂತೆ ಮಣ್ಣನಿಂದ ಮುಚ್ಚಿಹೋಗಿದ್ದು, ಇದರಿಂದ ಕೊನೆ ಭಾಗದ ರೈತರ ಜಮೀನಿಗೆ ನೀರು ಹರಿಯುವುದು ದೂರದ ಮಾತಾಗಿದೆ. ರೈತರಲ್ಲಿ ಆಂತಕ ಮನೆ ಮಾಡಿದೆ. ಪ್ರತಿ ವರ್ಷ ನಾಲೆಗಳ ನಿರ್ವಹಣೆಯಂತೆ ದುರಸ್ತಿಗಾಗಿ ಸಾಕಷ್ಟು ಹಣ ಖರ್ಚು ಮಾಡುವ ಬದಲು ಸರಕಾರ ಇದಕ್ಕಾಗಿ ಆಧುನೀಕರಣ ಮಾಡುವುದು ಅಗತ್ಯವಾಗಿದೆ.

ಇಚ್ಛಾಶಕ್ತಿ ಕೊರತೆ: ಕಳೆದ ವರ್ಷ ಸಾವಿರಾರು ಕೋಟಿ ಖರ್ಚು ಮಾಡಿ ಎಡದಂಡೆ ಮುಖ್ಯ ನಾಲೆಗಳ ಆಧುನೀಕರಣ ಮಾಡಲಾಗಿದೆ. ಅಲ್ಲಿನ ರಾಜಕಾರಣಿಗಳ ಪ್ರಭಾವವೇ ಇದಕ್ಕೆ ಕಾರಣವಾಗಿದೆ. ಬಲದಂಡೆ ನಾಲೆಗಳು ಸಂಪೂರ್ಣ ಅಧೋಗತಿಯಲ್ಲಿದ್ದು. ಇದಕ್ಕಾಗಿ ಕಳೆದ ಸಾಲಿನ ಬಜೆಟ್‌ನಲ್ಲಿ 700 ಕೋಟಿ ರೂ. ಮೀಸಲಿಡಲಾಗಿತ್ತು. ಆದರೆ ಇನ್ನೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಕಾರ್ಯರೂಪಕ್ಕೆ ತರುವಲ್ಲಿ ಇಲ್ಲಿನ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಹಿತಾಸಕ್ತಿ ಕೊರತೆ ಎದ್ದು ಕಾಣುತ್ತಿದೆ.

ಕೊನೆ ಭಾಗಕ್ಕೆ ನೀರಿಲ್ಲ: ನಾಲೆಗಳಲ್ಲಿ ಅಭದ್ರ ಸ್ಥಿತಿಯಲ್ಲಿರುವುದರಿಂದ ಕೊನೆಯ ಭಾಗದವರಿಗೆ ನೀರು ಹರಿಯುತ್ತಿಲ್ಲ. ಇದರಿಂದ ಕೊನೆ ಭಾಗದ ರೈತರು ನೀರಿಗಾಗಿ ಎದುರು ನೋಡುವಂತಾಗಿದೆ. ಇದು ಇಂದು ನಿನ್ನೆಯದಲ್ಲ ಯೋಜನೆ ಪ್ರಾರಂಭವಾದಾಗಿನಿಂದ ಈವರೆಗೂ ತೊಂದರೆ ಅನುಭವಿಸುವಂತಾಗಿದೆ. ಸರ್ಕಾರ ಪ್ರತಿ ವರ್ಷ ನಿರ್ವಹಣೆಗೆ ಅಲ್ಪ-ಸ್ವಲ್ಪ ಹಣ ಬಿಡುಗಡೆ ಮಾಡುತ್ತಿದ್ದರಿಂದ ಪರಿಪೂರ್ಣವಾದ ಕೆಲಸವಾಗುತ್ತಿಲ್ಲ. ಇದರಿಂದ ಆಧುನೀಕರಣಕ್ಕೆ ಸರ್ಕಾರ ಮುಂದಾಗಬೇಕಿದೆ.

ನಾಲೆಗಳ ನಿರ್ವಹಣೆ ಹಾಗೂ ನೀರಾವರಿ ಪ್ರದೇಶದ ವ್ಯಾಪ್ತಿಗಳ ಗ್ರಾಮಗಳಲ್ಲಿ ಸಿಸಿ ರಸ್ತೆಗಾಗಿ 5 ಕೋಟಿ ರೂ. ಬಿಡುಗಡೆಯಾಗಿದೆ. ಅದು ಈಗಾಗಲೇ ಟೆಂಡರ್‌ ಕರೆಯಲಾಗಿದೆ. ಕಾಮಗಾರಿಗೆ ಆದೇಶ ನೀಡಲಾಗಿದೆ.
ಎಂ.ಎಸ್‌.ಭಜಂತ್ರಿ, ಎಇಇ ಕೆಬಿಜೆಎನ್‌ಎಲ್‌ ರೋಡಲಬಂಡಾ(ಯುಕೆಪಿ)

„ಶಿವರಾಜ್‌ ಕೆಂಭಾವಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.