ಗೊಲ್ಲಪಲ್ಲಿ ಜಲವಿದ್ಯುತ್‌ ಯೋಜನೆ ಕೈಬಿಡಲು ಆಗ್ರಹ


Team Udayavani, Feb 14, 2022, 2:40 PM IST

16power

ಲಿಂಗಸುಗೂರು: ತಾಲೂಕಿನ 15 ಹಳ್ಳಿಗಳ ಮನೆಗಳಿಗೆ ಬೆಂಕಿ ಹಚ್ಚಿ ಅದರಿಂದ ಮಾನಪ್ಪ ವಜ್ಜಲ್‌ ತಮ್ಮ ಮನೆ ಬೆಳೆಸಿಕೊಳ್ಳಲು ಹೊರಟಿದ್ದಾರೆ. ರೈತರಿಗೆ ಬೇಡವಾದ ಗೊಲ್ಲಪಲ್ಲಿ ಜಲ ವಿದ್ಯುತ್‌ ಯೋಜನೆ ಕೈಬಿಡಲು ಶೀಘ್ರವೇ ಹೋರಾಟ ಮಾಡಲಾಗುವುದು ಎಂದು ಜೆಡಿಎಸ್‌ ಮುಖಂಡ ಸಿದ್ದು ಬಂಡಿ ಹೇಳಿದರು.

ಪಟ್ಟಣದ ಜೆಡಿಎಸ್‌ ಕಚೇರಿಯಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಟ್ಟಿ ಚಿನ್ನದ ಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್‌ ಅವರು 15 ಹಳ್ಳಿಗಳ 14 ಸಾವಿರ ಹೆಕ್ಟೇರ್‌ ಪ್ರದೇಶ ನಾಶ ಮಾಡಲು ಗೊಲ್ಲಪಲ್ಲಿ ಜಲ ವಿದ್ಯುತ್‌ ಯೋಜನೆ ಜಾರಿಗೆ ತರಲು ಶತ ಪ್ರಯತ್ನ ನಡೆಸಿದ್ದಾರೆ. ಇದು ರೈತರಿಗೆ ಲಾಭವಿಲ್ಲ. ಆದರೆ ಮಾನಪ್ಪ ವಜ್ಜಲ್‌ ಅವರ ಮನೆ ತುಂಬುವ ಯೋಜನೆಯಾಗಿದೆ. 8 ಸಾವಿರ ಕೋಟಿ ರೂ. ವೆಚ್ಚದಲ್ಲಿ ಜಲ ವಿದ್ಯುತ್‌ ಯೋಜನೆ ಜಾರಿಗೆ ಕೇಂದ್ರ ಸರ್ಕಾರದ ಪರವಾನಗಿ ಪಡೆಯಲು ಮಾನಪ್ಪ ವಜ್ಜಲ್‌ ಈಗಾಗಲೇ ದೆಹಲಿಗೆ ತಿರುಗಾಡುತ್ತಿದ್ದಾರೆ. ಈ ಯೋಜನೆ ಜಾರಿಯಾಗಲು ನಾನು ಬಿಡೋಲ್ಲ. ರೈತರೊಂದಿಗೆ ಹೋರಾಟ ಮಾಡುವೆ. ಇದುಲ್ಲದೆ ನಮ್ಮ ನಾಯಕರಾದ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಜೆಡಿಎಸ್‌ ಪಕ್ಷದಿಂದ ಸದಸ್ಯತ್ವ ನೋಂದಣಿ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಪ್ರತಿ ಬೂತ್‌ ಮಟ್ಟದಿಂದ ಪಕ್ಷ ಬಲಪಡಿಸುವ ಕೆಲಸ ನಡೆಯುತ್ತಿದೆ. ಪ್ರತಿ ಬೂತ್‌ನಲ್ಲಿ 25 ಜನ ಸದಸ್ಯರನ್ನು ಮಾಡಿ ಪಕ್ಷ ಸಂಘಟಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕು ಎಂದರು.

ಜೆಡಿಎಸ್‌ ಹಿರಿಯ ಮುಖಂಡ ಮಹಾಂತೇಶ ಪಾಟೀಲ್‌ ಅತ್ನೂರು ಮಾತನಾಡಿ, 15 ವರ್ಷ ಕ್ಷೇತ್ರದಲ್ಲಿ ಆಡಳಿತವೇ ಇಲ್ಲದಂತಾಗಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಸಿದ್ದು ಬಂಡಿ ಅವರು ಸ್ವಲ್ಪ ಮತಗಳ ಅಂತರದಿಂದ ಸೋತಿದ್ದಾರೆ. ಆದರೆ, ಕಳೆದ ಚುನಾವಣೆ ಆಗಿರುವ ತಪ್ಪುಗಳನ್ನು ಮುಂದಿನ ಚುನಾವಣೆಯಲ್ಲಿ ಸರಿಪಡಿಸಿಕೊಂಡು ಗೆಲುವು ಸಾಧಿಸುವತ್ತ ಕಾರ್ಯಕರ್ತರು ಗಟ್ಟಿಯಾಗಬೇಕು. ನಾರಾಯಣಪುರ ಬಲದಂಡೆ ಯೋಜನೆ ಜಾರಿಯಲ್ಲಿ ಎಚ್‌.ಡಿ. ದೇವೇಗೌಡ ಕೊಡುಗೆ ಅಪಾರವಾಗಿದೆ. ರಾಷ್ಟ್ರೀಯ ಪಕ್ಷಗಳನ್ನು ದಿಕ್ಕರಿಸಿ ಜನ ಪ್ರಾದೇಶಿಕ ಪಕ್ಷಗಳ ಒಲವು ತೋರಿಸುತ್ತಿದ್ದಾರೆ. ಮುಂದೆ ಜೆಡಿಎಸ್‌ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಜೆಡಿಎಸ್‌ ಕಲ್ಯಾಣ ಕರ್ನಾಟಕದ ಉಸ್ತುವಾರಿ ಕೆ.ಕರಿಯಮ್ಮ ನಾಯಕ, ಮುತ್ತಮ್ಮ, ಕೆ.ನಾಗಭೂಷಣ, ಸುನೀತಾ ಕೆಂಭಾವಿ, ಬಸವರಾಜ ಮಾಕಾಪುರ, ಅಮೀರ್‌ ಬೇಗ್‌ ಉಸ್ತಾದ್‌, ರೇಣುಕಾ ಇದ್ದರು.

ಟಾಪ್ ನ್ಯೂಸ್

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.