ವೈಭವದ ಹಾಲಬಾವಿ ವೀರಭದ್ರೇಶ್ವರ ಜಾತ್ರೆ


Team Udayavani, Nov 26, 2018, 11:18 AM IST

yad-3.jpg

ಮುದಗಲ್ಲ; ಪಟ್ಟಣದ ಹೊರವಲಯದ ಶ್ರೀ ಹಾಲಭಾವಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಶನಿವಾರ ಸಾವಿರಾರು
ಭಕ್ತರ ಮಧ್ಯೆ ಅದ್ಧೂರಿಯಾಗಿನಡೆಯಿತು. ಜಾತ್ರೆ ಅಂಗವಾಗಿ ಕುಂಬಾರಪೇಟೆ ಬಸವೇಶ್ವರ ದೇವಸ್ಥಾನದಿಂದ ಕುಂಭ, ವೀರಭದ್ರೇಶ್ವರ ಭಾವಚಿತ್ರ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ 108 ಸುಮಂಗಲಿಯರು ಕುಂಭಗಳನ್ನು ಹೊತ್ತು ಸಾಗಿದರು. ಡೊಳ್ಳು ಕುಣಿತ, ಪುರವಂತರ ಸೇವೆಯೊಂದಿಗೆ ನಡೆದ ಮೆರವಣಿಗೆಯಲ್ಲಿ ಅನೇಕ ಭಕ್ತರು ಶಸ್ತ್ರ ಹಾಕಿಸಿಕೊಂಡು ಭಕ್ತಿ ಮೆರೆದರು.

ಗಮನ ಸೆಳೆದ ಕಲಾತಂಡ: ಜಾತ್ರಾ ಮಹೋತ್ಸವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ದೇವಸ್ಥಾನದ ಸಮಿತಿ ವತಿಯಿಂದ ವಿವಿಧ ಕಲಾ ತಂಡಗಳು ಭಾಗಿಯಾಗಿ ಜಾತ್ರೆ ಮೆರಗು ಹೆಚ್ಚಿಸಿದ್ದವು. ಸಿಂಧನೂರಿನ ಮಹಿಳಾ ವೀರಗಾಸೆ ತಂಡ, ಜಾನಪದ ವೀರಗಾಸೆ ತಂಡದವರು ವೀರಗಾಸೆ ನೃತ್ಯ ಪ್ರದರ್ಶಿಸಿದರು. ಬಸವರಾಜ ತಾವರಗೇರಿ ಹಾಗೂ ಬೂದಗುಂಪಾದ ಬಸಯ್ಯಸ್ವಾಮಿ ಅವರು ಪುರವಂತಿಕೆ ಸೇವೆ ಸಲ್ಲಿಸಿದರು.

ಮುದಗಲ್‌ ಮೇಗಳಪೇಟೆ, ಕನ್ನಾಪುರಹಟ್ಟಿ, ಗೊಲ್ಲರಹಟ್ಟಿ ಸೇರಿ ವಿವಿಧೆಡೆಯಿಂದ ಡೊಳ್ಳು ಕುಣಿತದ ತಂಡಗಳು ಭಾಗಿಯಾಗಿದ್ದವು. ಜಾತ್ರೆ ನಿಮಿತ್ತ ದೇವಸ್ಥಾನದಲ್ಲಿ ಶ್ರೀ ವೀರಭದ್ರೇಶ್ವರ ಮೂರ್ತಿಗೆ ವಿಶೇಷ ಅಲಂಕಾರ ಹಾಗೂ ಮಹಾ ರುದ್ರಾಭಿಷೇಕ ನೆರವೇರಿಸಲಾಯಿತು. ಅನೇಕ ಭಕ್ತರು ಶ್ರೀ ವೀರಭದ್ರೇಶ್ವರನಿಗೆ ಪೂಜೆ ಸಲ್ಲಿಸಿ, ಕಾಯಿ, ಹಣ್ಣು ಸಮರ್ಪಿಸಿದರು.

ಸಿದ್ದಯ್ಯಸ್ವಾಮಿ ಸಾಲಿಮಠ, ಸುರೇಶಗೌಡ ಪಾಟೀಲ, ಗುರುಬಸಪ್ಪ ಸಜ್ಜನ, ಪುರಸಭೆ ಸದಸ್ಯರಾದ ಶ್ರೀಕಾಂತಗೌಡ ಪಾಟೀಲ, ಗುಂಡಪ್ಪ ಗಂಗಾವತಿ, ಪುರಸಭೆ ಮುಖ್ಯಾಧಿಕಾರಿ ನರಸಿಂಹ ಮೂರ್ತಿ, ಶಿವಾನಂದ ಸುಂಕದ, ಚನ್ನಬಸನಗೌಡ ಕನ್ನಾಳ, ಮಲ್ಲಿಕಾರ್ಜುನ ಮಾಟೂರು, ಷಣ್ಮುಖಪ್ಪ ಖೇಣೆದ, ಶಶಿಕಲಾ ಭೋವಿ, ಸಂಗಪ್ಪ ಪಟ್ಟಣಶೆಟ್ಟಿ, ಪ್ರಭು ಕಂಡಕ್ಟರ್‌, ಸಂಗಪ್ಪ ಕೊಡೇಕಲ್‌, ಈರಣ್ಣ ಹಡಪದ, ಶರಣಪ್ಪ ಸಜ್ಜನ್‌, ಬಸವರಾಜ ಬಳಿಗೇರ ಸೇರಿ ಶಾಂಭವಿ ಸದ್ಭಕ್ತ ಮಂಡಳಿ, ಗಜಾನನ ಯುವಕ ಮಂಡಳಿ ಸದಸ್ಯರು, ಪೊಲೀಸ್‌ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.