ಸೋಂಕಿತರನ್ನು ತಿರುಗಿಯೂ ನೋಡದ ಆಡಳಿತ


Team Udayavani, Apr 30, 2021, 4:08 PM IST

ಲಕಜದ್ತಗದಸ್ಗ

ಸಿಂಧನೂರು : ಕೋವಿಡ್‌ ಮೊದಲ ಅಲೆಯ ಸಂದರ್ಭ ಕೊರೊನಾ ಪಾಸಿಟಿವ್‌ ವ್ಯಕ್ತಿ ಸೇರಿದಂತೆ ಪ್ರಾಥಮಿಕ ಸಂಪರ್ಕಿತರ ಬೆನ್ನು ಬಿದ್ದು ಪತ್ತೆ ಹಚ್ಚಿ ಚಿಕಿತ್ಸೆಗೆ ಸಹಕರಿಸುತ್ತಿದ್ದ ಆಡಳಿತ ವರ್ಗ ಈ ಬಾರಿ ಕೊರೊನಾ ಸೋಂಕಿತರನ್ನು ತಿರುಗಿ ಕೂಡ ನೋಡುತ್ತಿಲ್ಲ! ತಾಲೂಕಿನಲ್ಲಿ 400ಕ್ಕೂ ಹೆಚ್ಚು ಕೊರೊನಾ ಸೋಂಕಿತರಿದ್ದರೂ ಅವರೆಲ್ಲರಿಗೂ ಮನೆಯಲ್ಲೇ ಇರಿ ಎಂಬ ಸಲಹೆ ನೀಡಿದ್ದನ್ನು ಬಿಟ್ಟರೆ, ಅವರ ಚಲನವಲನದ ಮೇಲೆ ಯಾವುದೇ ನಿಗಾ ವಹಿಸುತ್ತಿಲ್ಲವೆಂಬ ದೂರು ಕೇಳಿ ಬಂದಿವೆ.

ಸ್ವಾಬ್‌ ಟೆಸ್ಟ್‌ಗೆ ನೀಡಿದ ನಂತರ ವರದಿ ಪಾಸಿಟಿವ್‌ ಬಂದ ಮೇಲಷ್ಟೇ ಸೋಂಕಿತರನ್ನು ಫೋನ್‌ ನಲ್ಲೇ ಸಂಪರ್ಕಿಸಿ, ಮನೆಯಲ್ಲೇ ಇರುವಂತೆ ತಿಳಿಸಲಾಗುತ್ತದೆ. ಜತೆಗೆ ಆರೋಗ್ಯ ವಿಚಾರಿಸಿ ಆನ್‌ಲೈನ್‌ನಲ್ಲಿ ವಿವರ ದಾಖಲಿಸಲಾಗುತ್ತಿದೆ.

ವಿವರಕ್ಕಾಗಿ ಕರೆ-ಕರೆ: ಕೊರೊನಾ ಪಾಸಿಟಿವ್‌ ಬಂದ ಬಳಿಕ ರೋಗಿಗಳು ಮನೆಯಲ್ಲೇ ಇದ್ದರೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಯಾವುದೇ ಸಲಹೆ ನೀಡುತ್ತಿಲ್ಲ. ಯಾವ ಔಷಧಗಳನ್ನು ತೆಗೆದುಕೊಳ್ಳಬೇಕು, ಏನೇನು ಕ್ರಮ ಅನುಸರಿಸಬೇಕೆಂಬ ಬಗ್ಗೆ ತಿಳಿಸುವ ಕೆಲಸವಾಗುತ್ತಿಲ್ಲ. ಸ್ವಾಬ್‌ ಟೆಸ್ಟ್‌ಗೆ ಕೊಟ್ಟ ಸಂದರ್ಭದಲ್ಲಿ ನೀಡಿದ ಮೊಬೈಲ್‌ ಸಂಖ್ಯೆ ಜಾಡು ಹಿಡಿದು ತಾಲೂಕು, ಜಿಲ್ಲಾ, ರಾಜ್ಯಮಟ್ಟದ ಕಚೇರಿಯ ಸಿಬ್ಬಂದಿ ಮಾತ್ರ ಬೆನ್ನು ಬಿಡದೇ ಕರೆ ಮಾಡುತ್ತಿದ್ದಾರೆ.

ಎಲ್ಲ ಕಡೆಯಿಂದಲೂ ಪ್ರತ್ಯೇಕವಾಗಿ ಕರೆ ಮಾಡಿ, ನಿಮ್ಮ ಊರು ಯಾವುದು? ಹೆಸರು, ವಿಳಾಸ ಏನು? ಎಂದು ಪ್ರಶ್ನಿಸಲಾಗುತ್ತಿದೆ. ಮನೆಯಲ್ಲೇ ಇರುವ ಕೊರೊನಾ ಸೋಂಕಿತರೊಬ್ಬರಿಗೆ ಬುಧವಾರ ಬರೋಬ್ಬರಿ 60 ಕರೆಗಳು ಬಂದಿವೆ. ಸೋಂಕಿತರು ಆರೋಗ್ಯ ಕಾಳಜಿಗೆ ಸಂಬಂ ಧಿಸಿ ಒಂದೇ ಒಂದು ಸಲಹೆಯನ್ನೂ ಕೊಟ್ಟಿಲ್ಲ. ಸುತ್ತಾಟದ ಶಂಕೆ: ಆರೋಗ್ಯ ಇಲಾಖೆ ಸಿಬ್ಬಂದಿ ಖುದ್ದು ಮನೆಗೆ ಭೇಟಿ ನೀಡಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಿ, ಸ್ಥಳದಲ್ಲೇ ಔಷಧ ನೀಡಬೇಕೆಂಬ ಸೂಚನೆ ಪಾಲನೆಯಾಗುತ್ತಿಲ್ಲ.

ಕೊರೊನಾ ಸೋಂಕಿತರೇ ಕೆಲವು ಕಡೆಗಳಲ್ಲಿ ಔಷಧ ತರಲು, ಆಸ್ಪತ್ರೆಗೆ ತೋರಿಸಲು ಮನೆಯಿಂದ ಹೊರಗೆ ಅಲೆಯುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಮನೆಯಲ್ಲಿರಬೇಕಾದ ಸೋಂಕಿತರು ರಾಜರೋಷವಾಗಿ ತಿರುಗಾಡಿದರೆ, ಕೊರೊನಾ ಸಮುದಾಯಕ್ಕೆ ಹರಡುವ ಭೀತಿ ಮೂಡಿದೆ. ತಾಲೂಕಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತರ ವಿವರ, ವಿಳಾಸ ಸಂಗ್ರಹಿಸುವ ಕೆಲಸವನ್ನು ಮಾತ್ರ ಮಾಡಲಾಗುತ್ತಿದೆ. ಆದರೆ ಅವರ ಚಲನವಲನದ ಮೇಲೆ ನಿಗಾ ಇರಿಸುವ ಕೆಲಸವಾಗುತ್ತಿಲ್ಲ. ಕಟ್ಟುನಿಟ್ಟಿನ ಕರ್ಫ್ಯೂ ಜಾರಿಯಿದ್ದರೂ ಕೊರೊನಾ ಚೈನ್‌ ಲಿಂಕ್‌ ತಪ್ಪಿಸುವತ್ತ ಗಮನ ಹರಿಸದಿರುವುದು ಅಚ್ಚರಿಗೆ ಆಸ್ಪದ ನೀಡಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.