ಶೋಷಿತರ ಮೇಲೆ ಸರ್ಕಾರ ಪ್ರಹಾರ


Team Udayavani, Jan 15, 2019, 10:37 AM IST

ray-1.jpg

ರಾಯಚೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ, ದಲಿತ, ನೊಂದ ಮಹಿಳೆಯರ ಏಳಿಗೆಗಾಗಿ ನೀಡುತ್ತಿದ್ದ ಅನುದಾನವನ್ನೂ ಕಡಿತಗೊಳಿಸುತ್ತಿವೆ. ಆ ಮೂಲಕ ಶೋಷಿತ ವರ್ಗಗಳ ಮೇಲೆ ಪ್ರಹಾರ ಮಾಡುತ್ತಿವೆ ಎಂದು ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯ ಗೌರವಾಧ್ಯಕ್ಷ ಯು.ಬಸವರಾಜ ದೂರಿದರು.

ನಗರದ ಕನ್ನಡ ಭವನದಲ್ಲಿ ಇತ್ತೀಚೆಗೆ ನಡೆದ ಸಂಘದ ಜಿಲ್ಲಾ ಘಟಕದ ನಾಲ್ಕನೇ ಸಮ್ಮೇಳನದಲ್ಲಿ ಅವರು ಮಾತನಾಡಿದರು. ನೊಂದ ಜನರ ಸಂಖ್ಯೆಗೆ ಅನುಗುಣವಾಗಿ ಸರ್ಕಾರಗಳು ಅನುದಾನ ನೀಡಬೇಕು. ಅದರಲ್ಲೂ ತಡೆ ಹಿಡಿಯುವ ಮೂಲಕ ಅವರ ಬದುಕನ್ನು ಮತ್ತಷ್ಟು ಜಟಿಲಗೊಳಿಸುತ್ತಿವೆ ಎಂದು ದೂರಿದರು.

ಸರ್ಕಾರಗಳಿಗೆ ಶೋಷಿತರ ಒಗ್ಗಟ್ಟಿನ ಬಲ ಏನು ಎಂಬುದನ್ನು ತೋರಿಸಬೇಕು. ಅದಕ್ಕೆ ಸಂಘಟಿತ ಹೋರಾಟವೊಂದೇ ದಾರಿ. ಅನುದಾನ ಹಂಚಿಕೆಯಲ್ಲಿ ವಂಚಿಸುತ್ತಿರುವ ಸರ್ಕಾರಗಳ ವಿರುದ್ಧ ಹೋರಾಟ ಅನಿವಾರ್ಯ. ದೇವದಾಸಿ ಪದ್ಧತಿ ನಿರ್ಮೂಲನೆಗಾಗಿ ದೇವದಾಸಿ ಕುಟುಂಬಗಳು ಪುನರ್ವಸತಿ ಯೋಜನೆಗಳನ್ನು ರೂಪಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಗೋಪಾಲ ನಾಯಕ ಮಾತನಾಡಿ, ದೇವದಾಸಿಯರಿಗೆ ಸರ್ಕಾರ ನೀಡುತ್ತಿರುವ ಸೌಲಭ್ಯಗಳು ಸಮರ್ಪಕ ದೊರೆಯುವಂತಾಗಬೇಕು. ದೇವದಾಸಿ ಪದ್ಧತಿಯಿಂದ ವಿಮೋಚನೆಗೊಂಡ ಮಹಿಳೆಯರಿಗಾಗಿ ಸರ್ಕಾರ ಮಾಸಾಶನ, ವಸತಿ ಯೋಜನೆ ಹಾಗೂ ಸ್ವಯಂ ಉದ್ಯೋಗಕ್ಕೆ ಸಾಲದ ಸೌಲಭ್ಯ ಕಲ್ಪಿಸುತ್ತಿದೆ. ಅದನ್ನೆಲ್ಲ ಸರಿಯಾಗಿ ಬಳಸಿಕೊಳ್ಳಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಬಿ.ಮಾಳಮ್ಮ ಮಾತನಾಡಿ, ದೇವದಾಸಿ ಪದ್ಧತಿಯನ್ನು ಸಾಮಾಜಿಕ ದೌರ್ಜನ್ಯ ಎಂದು ಪರಿಗಣಿಸಿ ಸರ್ಕಾರಗಳು ಈ ಪದ್ಧತಿ ನಿರ್ಮೂಲನೆಗೆ ಬಲಿಷ್ಠ ಕಾನೂನು ಜಾರಿಗೆ ತರುವ ಅಗತ್ಯವಿದೆ ಎಂದರು. ತಾಲೂಕು ಕಾರ್ಯದರ್ಶಿ ಡಿ.ಎಸ್‌.ಶರಣಬಸವ, ಕೆ.ಜಿ.ವೀರೇಶ ಮಾತನಾಡಿದರು.

ಪದಾಧಿಕಾರಿಗಳ ಆಯ್ಕೆ: ಇದೇ ವೇಳೆ ಜಿಲ್ಲಾ ಘಟಕಕ್ಕೆ ಮುಂದಿನ ಮೂರು ವರ್ಷದ ಅವಧಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಎಚ್.ಪದ್ಮಾ, ಕಾರ್ಯದರ್ಶಿಯಾಗಿ ಹುಲಿಗೆಮ್ಮ ಮುದಗಲ್‌, ಜೆ.ತಾಯಮ್ಮ, ಗೌರವಾಧ್ಯಕ್ಷರಾಗಿ ಕೆ.ಜಿ.ವೀರೇಶ ಆಯ್ಕೆಯಾದರು. 17 ಜನರ ಸಮಿತಿ ರಚಿಸಲಾಯಿತು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.