¬ ಹೆರಿಗೆ ಸುರಕ್ಷಿತ, ಸರಕಾರಿ ಆಸ್ಪತ್ರೆಯತ್ತ ಜನರ ಚಿತ್ತ

­ತಿಂಗಳಿಗೆ 200 ಮಹಿಳೆಯರಿಗೆ ಸುರಕ್ಷಿತ ಹೆರಿಗೆ! ­ದುಬಾರಿ ವೆಚ್ಚ ಪಾವತಿ ಹೊರೆ ಇಳಿಸಿದ ವೈದ್ಯರು

Team Udayavani, Feb 12, 2021, 3:28 PM IST

Govt hospital

ಸಿಂಧನೂರು: ಕ್ಲಿಷ್ಟ, ಅವಧಿ  ಪೂರ್ವ ಹೆರಿಗೆ, ತೀವ್ರ ರಕ್ತಸ್ರಾವದಂತಹ ಪ್ರಕರಣಗಳನ್ನು ನಿರ್ವಹಿಸು ತ್ತಿರುವುದರಿಂದ ಈಗ ಜನರ ಚಿತ್ತ ಸರಕಾರಿ ಆಸ್ಪತ್ರೆಯತ್ತ ನೆಟ್ಟಿದೆ.

ಇಲ್ಲಿನ ವೈದ್ಯರು ತಿಂಗಳಿಗೆ ಬರೋಬ್ಬರಿ 200 ಮಹಿಳೆಯರಿಗೆ ಸುರಕ್ಷಿತ ಹೆರಿಗೆ ಮಾಡಿಸುತ್ತಿದ್ದು, ಖಾಸಗಿ  ಆಸ್ಪತ್ರೆಗೆ ದಾಖಲಾಗಿ ದುಬಾರಿ ವೆಚ್ಚ ಪಾವತಿಸಬೇಕಾದ ಹೊರೆ ಇಳಿಸಿದ್ದಾರೆ.

ತಹಶೀಲ್ದಾರ್‌ ಮಂಜುನಾಥ ಬೋಗಾವತಿ ಅವರು ಕೂಡ ತಮ್ಮ ಪತ್ನಿಗೆ ಸಂತಾನ ಶಕ್ತಿಹರಣ ಶಸ್ತ್ರ  ಚಿಕಿತ್ಸೆಯನ್ನು ಸರಕಾರಿ ಆಸ್ಪತ್ರೆಯಲ್ಲೇ ಮಾಡಿಸಿ ಸರಕಾರಿ ಆಸ್ಪತ್ರೆಯ ಮೇಲಿನ ನಂಬಿಕೆ ಹೆಚ್ಚಿಸುವ ಪ್ರಯತ್ನ ಮಾಡಿದ್ದಾರೆ.

ಇಲ್ಲಿನ ವೈದ್ಯ ಡಾ|ನಾಗರಾಜ್‌ ಕಾಟವಾ ಪಾಸಿಟಿವ್‌ ಬಂದು ರಜೆ ತೆಗೆದುಕೊಂಡಿದ್ದರಿಂದ ಒಂದೂವರೆ ತಿಂಗಳು ಪ್ರಕರಣಗಳಲ್ಲಿ ಕುಸಿತ  ಕಂಡಿತ್ತು. ತಾಲೂಕಿನ 10 ಪಿಎಚ್‌ಸಿ ಕೇಂದ್ರಗಳಿಂದ ಹೆರಿಗೆ ಪ್ರಕರಣಗಳನ್ನು ಇಲ್ಲಿಗೆ ಶಿಫಾರಸು ಮಾಡಲಿಕ್ಕೆ ಸಿಬ್ಬಂದಿ ಹೆದರಿದ್ದರು ಎನ್ನುತ್ತವೆ ಇಲಾಖೆ ದಾಖಲೆಗಳು.

ರಿಸ್ಕ್ ಕೇಸ್‌ನಲ್ಲಿ ಜಿಲ್ಲೆಗೆ ಫಸ್ಟ್‌: ಕಳೆದ ವರ್ಷ ಡಿಸೆಂಬರ್‌ನಲ್ಲಿ 180 ಮಹಿಳೆಯರಿಗೆ ಸಹಜ ಹೆರಿಗೆ ಮಾಡಿಸಿದ್ದರೆ, 30 ಪ್ರಕರಣಗಳಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಕ್ಲಿಷ್ಟಕರ ಕೇಸ್‌ಗಳನ್ನು ಕೂಡ ಖಾಸಗಿ ಆಸ್ಪತ್ರೆ ಇಲ್ಲವೇ 90 ಕಿ.ಮೀ. ಅಂತರದ ರಾಯಚೂರು, ಬಳ್ಳಾರಿ ಆಸ್ಪತ್ರೆಗಳಿಗೆ ಶಿಫಾರಸು ಮಾಡದೇ 30 ಪ್ರಕರಣಗಳಲ್ಲಿ ಇಲ್ಲಿಯೇ ಸುರಕ್ಷಿತ ಹೆರಿಗೆ ಮಾಡಿಸಲಾಗಿದೆ. 2021 ಜನವರಿಯಲ್ಲಿ 196 ಸಹಜ ಹೆರಿಗೆ ಪ್ರಕರಣ ದಾಖಲಾದರೆ, 89 ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಕ್ಲಿಷ್ಟಕರ ಹೆರಿಗೆಯ 90 ಪ್ರಕರಣಗಳನ್ನು ಇಲ್ಲಿ ನಿರ್ವಹಿಸಲಾಗಿದ್ದು, ಫೆಬ್ರವರಿಯಲ್ಲಿ ಹೆರಿಗೆ ಪ್ರಕರಣಗಳ ನಿರ್ವಹಣೆಯಲ್ಲಿ ಹೆಚ್ಚಿನ ಪ್ರಗತಿ ದಾಖಲಾಗುವ ಮುನ್ಸೂಚನೆಯಿದೆ.

ಖಾಸಗಿ ಆಸ್ಪತ್ರೆಗೆ ಕಳುಹಿಸದೇ ನಿರ್ವಹಣೆ: ತಾವರಗೇರಾದ ಯಲ್ಲಮ್ಮ ಎನ್ನುವರಿಗ ಗರ್ಭಚೀಲದಲ್ಲಿ ಬ್ಲಾಕ್‌ ಇರುವ ಹಿನ್ನೆಲೆಯಲ್ಲಿ ಆಪರೇಷನ್‌ ಮಾಡಬೇಕಿತ್ತು. ಅದನ್ನು ಇಲ್ಲಿನ ವೈದ್ಯ ಡಾ|ನಾಗರಾಜ್‌ ಕಾಟವಾ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಆ ಬಳಿಕ ಅವ ಧಿ ಪೂರ್ವ ಹೆರಿಗೆ ಹಿನ್ನೆಲೆಯಲ್ಲಿ ಎರಡು  ತಿಂಗಳು ಆಸ್ಪತ್ರೆಯಲ್ಲೇ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ಕುಷ್ಟಗಿ ತಾಲೂಕಿನ ತಾವರಾಗೇರಾದಿಂದ 40 ಕಿ.ಮೀ. ಬಂದು ಹೋಗುವ ನಡುವೆ ಗರ್ಭಪಾತ ಭೀತಿ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ  ದಾಖಲಿಸಿಕೊಳ್ಳಲಾಗಿದೆ. ಯಾದಗಿರಿ ಜಿಲ್ಲೆಯ ಮಮತಾ ಎಂಬುವರನ್ನು ಕೂಡ ಹೆರಿಗೆಯ ರಿಸ್ಕ್ ಗಮನಿಸಿ 2 ತಿಂಗಳಿಂದ ಇಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗಿದೆ.

ಇದನ್ನೂ ಓದಿ :ಕೃಷಿಹೊಂಡದ ನೀರಿನಲ್ಲಿ ಮುಳುಗಿ ನಾಲ್ಕು ವರ್ಷ ಪ್ರಾಯದ ಇಬ್ಬರು ಮಕ್ಕಳ ಸಾವು

ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿದಾಗ ಅವಧಿ ಪೂರ್ವ ಹೆರಿಗೆ, ತೀವ್ರ ರಕ್ತಸ್ರಾವ ಪ್ರಕರಣ ಗಮನಿಸಿ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹೆರಿಗೆಗೆ ಖಾಸಗಿ ಆಸ್ಪತ್ರೆಯೇ ಗತಿ ಎಂಬ ವಾದವನ್ನು ತಳ್ಳಿ ಹಾಕುವುದರ ಮೂಲಕ ಇಲ್ಲಿನ ವೈದ್ಯರು ಬಡವರ ಪಾಲಿಗೆ ಆಶಾಕಿರಣವಾಗಿದ್ದಾರೆ.

 

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.