ಜಾತಿವಾರು ಮತ ಪಡೆಯಲು ಮತ್ತೆ “ಅನುದಾನ’ ಅಸ್ತ್ರ

20-25 ಸಾವಿರದಷ್ಟು ರೆಡ್ಡಿ ಲಿಂಗಾಯತ ಸಮುದಾಯದ ಮತಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

Team Udayavani, Jan 30, 2021, 4:46 PM IST

ಜಾತಿವಾರು ಮತ ಪಡೆಯಲು ಮತ್ತೆ “ಅನುದಾನ’ ಅಸ್ತ್ರ

ಮಸ್ಕಿ(ವಿಶೇಷ ವರದಿ): ಉಪಚುನಾವಣೆ ಘೋಷಣೆ ಕ್ಷಣಗಣನೆ ಹಿನ್ನೆಲೆಯಲ್ಲಿ ಈಗಾಗಲೇ ಭರ್ಜರಿ ಪ್ರಚಾರಗಳು ಆರಂಭವಾಗಿವೆ. ಆದರೆ, ಇದರ ನಡುವೆಯೇ ಈಗ ಬಿಜೆಪಿ ಸರಕಾರ ಜಾತಿವಾರು ಮತಗಳಿಕೆ ಲೆಕ್ಕಚಾರದಲ್ಲಿ ಬಂಪರ್‌ ಗಿಫ್ಟ್‌ ಘೋಷಣೆ ಮಾಡಿದೆ!.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಶಿಫಾರಸ್ಸು ಮೇರೆಗೆ ಸಿಎಂ ಬಿ.ಎಸ್‌. ಯಡಿಯೂರಪ್ಪ ಇಂತಹ ಘೋಷಣೆ ಆದೇಶ ಪತ್ರದ ಮೂಲಕ ಗುರುವಾರ
ಹೊರ ಹಾಕಿದ್ದಾರೆ. ಚುನಾವಣೆ ಘೋಷಣೆ ಹೊತ್ತಲ್ಲಿ ಹೊರ ಬಿದ್ದ ಈ ಅನುದಾನ ಹಂಚಿಕೆಯ ಆದೇಶ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಲಿಂಗಾಯತ ಮತ್ತು ಕುರುಬ ಸಮಾಜದ ಮತಗಳಿಕೆಗಾಗಿಯೇ ಮಾಡಲಾಗಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಕ್ಷೇತ್ರದಲ್ಲೂ ಇದು ಹೆಚ್ಚು ಚರ್ಚೆಗೆ ಗ್ರಾಸವಾಗಿದೆ.

ಎಲ್ಲೆಲ್ಲಿ ಅನುದಾನ?: ಮಸ್ಕಿ ಪಟ್ಟಣದಲ್ಲಿ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಾಣಕ್ಕೆ ಒಂದು ಕೋಟಿ ರೂ., ಕನಕ ಭವನ ನಿರ್ಮಾಣಕ್ಕಾಗಿ ಒಂದು
ಕೋಟಿ ಹಾಗೂ ತುರ್ವಿಹಾಳ ಗ್ರಾಮದಲ್ಲಿರುವ ಅಮೋಘ ಸಿದ್ದೇಶ್ವರ ದೇವಸ್ಥಾನ (ಕುರುಬ ಸಮುದಾಯಕ್ಕೆ ಸೇರಿದ) ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳ  ಟಿಪ್ಪಣಿ ಪತ್ರದ ಮೂಲಕ ಹೊರಡಿಸಲಾಗಿದೆ.

ಹೆಚ್ಚಿದ ಕುತೂಹಲ: ಸದ್ಯ ಮಸ್ಕಿ ಕ್ಷೇತ್ರದಲ್ಲಿ ಸಂಪೂರ್ಣ ಉಪಚುನಾವಣೆಯ ಕಾವು ಶುರುವಾಗಿದೆ. 5ಎ ಕಾಲುವೆ ಹೋರಾಟದ ಬೇಡಿಕೆಯ ಬಿಸಿಯೂ ಜೋರಾಗಿದ್ದು ಇದರ ನಡುವೆ ಸಮುದಾಯಗಳ ಮನವೊಲಿಕೆಗೆ ಈ ಮಾರ್ಗ ಹುಡುಕಲಾಗಿದೆಯೇ? ಎನ್ನುವ ಪ್ರಶ್ನೆಗಳು ಶುರುವಾಗಿವೆ. ವಿಶೇಷವಾಗಿ ಈ ಬಾರಿ ಲಿಂಗಾಯತ ಮತ್ತು ಕುರುಬ ಸಮಾಜದ ವೋಟುಗಳ ಕೇಂದ್ರೀಕರಿಸಿ ಅನುದಾನ ಘೋಷಣೆ ಮಾಡಿರುವುದು ಗಮನಾರ್ಹ ಸಂಗತಿ. ಕ್ಷೇತ್ರದಲ್ಲಿ
52 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಲಿಂಗಾಯತ ಸಮುದಾಯದ ಮತಗಳಿದ್ದರೆ, 20-25 ಸಾವಿರದಷ್ಟು ರೆಡ್ಡಿ ಲಿಂಗಾಯತ ಸಮುದಾಯದ ಮತಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಮತಗಳಿಕೆ ದೂರದೃಷ್ಠಿಯಿಂದಲೇ ಈ ಸಮುದಾಯದ ಬಹುಬೇಡಿಕೆಯಾಗಿದ್ದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಇದಕ್ಕಾಗಿ ಒಂದು ಕೋಟಿ ರೂ. ಘೋಷಣೆ ಮಾಡಲಾಗಿದೆ. ಇನ್ನು ಕುರುಬ ಸಮುದಾಯದ ಮತಗಳು ಕೂಡ ಕ್ಷೇತ್ರದಲ್ಲಿ ಅಧಿಕವಾಗಿವೆ. ಅಂದಾಜು 25 ಸಾವಿರಕ್ಕೂ ಹೆಚ್ಚು ಮತಗಳಿದ್ದು, ಇದಕ್ಕಾಗಿ ಮಸ್ಕಿ ಪಟ್ಟಣದಲ್ಲಿ ಕನಕ ಭವನ ನಿರ್ಮಾಣ, ತುರುವಿಹಾಳದಲ್ಲಿರುವ ಅಮೋಘಸಿದ್ದೇಶ್ವರ ಮಠದ ಬಳಿಯೂ ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

ಚರ್ಚೆಗೆ ಗ್ರಾಸ: ವಿಶೇಷ ಪ್ರಾತಿನಿಧ್ಯದಡಿ ಮಸ್ಕಿ ಕ್ಷೇತ್ರಕ್ಕೆ ಸದ್ಯ 2.50 ಕೋಟಿ ರೂ. ಹಂಚಿಕೆ ಮಾಡಿದ ಈ ಆದೇಶ ಹೊರ ಬಿದ್ದ ಬಳಿಕ ಹಲವು ರೀತಿ ಚರ್ಚೆಗಳು ಶುರುವಾಗಿವೆ. ಇಷ್ಟು ವರ್ಷ ಬಿಡುಗಡೆಯಾಗದೇ ಇದ್ದ ಅನುದಾನ ಈಗ ಘೋಷಣೆಗಾಗಿರುವುದು ಎಲೆಕ್ಷನ್‌ ಉದ್ದೇಶಕ್ಕಾಗಿಯೇ ಎನ್ನುವ ಅಭಿಪ್ರಾಯಗಳು ಸಮಾಜಿಕ ಜಾಲತಾಣಗಳೂ ಸೇರಿ ಜನ-ಮನದಲ್ಲೂ ಹರಿದಾಡುತ್ತಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.