ಲಿಂಗಸುಗೂರು ಬಂದ್ಗೆ ಉತ್ತಮ ಪ್ರತಿಕ್ರಿಯೆ
Team Udayavani, Nov 30, 2021, 3:58 PM IST
ಲಿಂಗಸುಗೂರು: ಕಿಲ್ಲಾರಹಟ್ಟಿ ಗ್ರಾಮದ ವ್ಯಕ್ತಿಯೊಬ್ಬನನ್ನು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ ಅವಮಾನವೀಯ ಘಟನೆ ಮನುಕುಲವೇ ತಲೆತಗ್ಗಿಸುವಂತಾಗಿದೆ. ಘಟನೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿಬೇಕು ಹಾಗೂ ಕರ್ತವ್ಯದ ಬಗ್ಗೆ ನಿರ್ಲಕ್ಷ್ಯ ತೋರಿದ ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸುವಂತೆ ಆಗ್ರಹಿಸಿ ದಲಿತ ಹಾಗೂ ಜನಪರ ಸಂಘಟನೆ ವೇದಿಕೆ ಸೋಮವಾರ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ಅಂಗಡಿ-ಮುಂಗಟ್ಟು ಮುಚ್ಚಿದ್ದವು. ವಾಹನ ಸಂಚಾರ ಎಂದಿನಂತಿತ್ತು, ಶಾಲಾ-ಕಾಲೇಜು ಕಾರ್ಯ ನಿರ್ವಹಿಸಿದವು. ಡಿವೈಎಸ್ಪಿ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಂಚೆ ಕಚೇರಿ, ಗಡಿಯಾರ ವೃತ್ತದ ಮೂಲಕ ಬಸ್ ನಿಲ್ದಾಣ ವೃತ್ತಕ್ಕೆ ಬಂದು ತಲುಪಿತು. ಕಿಲ್ಲಾರಹಟ್ಟಿ ಪ್ರಕರಣದ ಎಲ್ಲ ದೂರು ದಾಖಲಾಗಬೇಕು. ಎಲ್ಲ ಆರೋಪಿತರನ್ನು ಬಂಧಿಸಬೇಕು. ಹಲ್ಲೆಗೊಳಗಾದ ಕುಟಂಬಕ್ಕೆ ಶಾಸನ ಬದ್ಧ ಪರಿಹಾರ ನೀಡಬೇಕು. ಪ್ರಕರಣದ ತನಿಖಾಧಿಕಾರಿಗಳಾಗಿ ಕರ್ತವ್ಯ ಮರೆತ ಮುದಗಲ್ ಪಿಎಸ್ಐ, ಎಎಸ್ಐ, ಮಸ್ಕಿ ಸಿಪಿಐ, ರಾಯಚೂರು ಮಹಿಳಾ ಠಾಣೆ ಸಿಪಿಐ ಹಾಗೂ ಲಿಂಗಸುಗೂರು ಡಿವೈಎಸ್ಪಿ ಮೇಲೆ ಇಲಾಖೆಯಿಂದ ಕಠಿಣ ಕ್ರಮ ಜರಗಿಸಬೇಕು, ಜಿಲ್ಲೆಯಲ್ಲಿ ದಲಿತರಿಗೆ ಪ್ರವೇಶ ನೀಡದ ಹೋಟೆಲ್, ಕ್ಷೌರದಂಗಡಿ, ದೇವಸ್ಥಾನ, ಕುಡಿವ ನೀರಿನ ಬಾವಿ ಮುಚ್ಚಿಸಬೇಕು ಎಂದು ಆಗ್ರಹಿಸಿದರು.
ಜಾತಿ ತಾರತಮ್ಯ ಆಚರಣೆ ಸಾಮಾಜಿಕ ಅಪರಾಧವೆಂದು ಜಿಲ್ಲೆಯಲ್ಲಿ ಜನಜಾಗೃತಿ ಆಂದೋಲನಕ್ಕೆ ಪೊಲೀಸ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಜಂಟಿಯಾಗಿ ಮುಂದಾಗಬೇಕು. ಮುಂದಿನ ಮೂರು ತಿಂಗಳಲ್ಲಿ ಜಿಲ್ಲೆಯ ಎಲ್ಲ ಗ್ರಾಮಗಳನ್ನು ಅಸ್ಪೃಶ್ಯತೆ ಹಾಗೂ ಜಾತಿ ಮುಕ್ತ ಗ್ರಾಮಗಳೆಂದು ಘೋಷಣೆ ಮಾಡಬೇಕು. ಜಿಲ್ಲೆಯಲ್ಲಿ ಎಲ್ಲ ಭೂ ರಹಿತ ಎಸ್ಸಿ, ಎಸ್ಟಿ ಕುಟಂಬಗಳಿಗೆ ಸರ್ಕಾರ ಭೂಮಿ ವಿತರಿಸಲು ಆಯಾ ತಹಶೀಲ್ದಾರ್ಗೆ ವಿಶೇಷ ಕರ್ತವ್ಯಕ್ಕೆ ನೇಮಿಸಬೇಕು ಎಂದು ಆಗ್ರಹಿಸಿದರು.
ಈ ವೇಳೆ ಸಿ. ದಾನಪ್ಪ, ಎ. ಬಾಲಸ್ವಾಮಿ ಕೊಡ್ಲಿ, ಹನುಮಂತಪ್ಪ ಕುಣಿಕೆಲ್ಲೂರು, ದೊಡ್ಡಪ್ಪ ಮುರಾರಿ, ಲಿಂಗಪ್ಪ ಪರಂಗಿ, ಚಿನ್ನಪ್ಪ ಕೊಟ್ರಕಿ, ಚಿನ್ನಪ್ಪ ಕಂದಳ್ಳಿ, ಎಚ್.ಎನ್. ಬಡಿಗೇರ, ಬಸವರಾಜ ಸಾಸಲಮರಿ, ಯಲ್ಲಾಲಿಂಗ, ಅನೀಲಕುಮಾರ, ಶಿವಪ್ಪ ಮಾಚನೂರು, ದುರಗಪ್ಪ ಅಗ್ರಹಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು