ಸಪ್ಪಾದ ಹಸಿ ಮೆಣಸಿನಕಾಯಿ
Team Udayavani, Oct 11, 2021, 1:15 PM IST
ದೇವದುರ್ಗ: ಹಸಿ ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ಕೆಜಿಗೆ 7ರೂ. ಮಾರಾಟವಾಗುತ್ತಿದ್ದು, ರೈತರ ಕಣ್ಣಲ್ಲಿ ನೀರು ತರಿಸಿದೆ.
ಹಸಿ ಮೆಣಸಿನಕಾಯಿಗೆ ಗ್ರಾಹಕರು ವಾರದ ಸಂತೆ, ತರಕಾರಿ ಮಾರುಕಟ್ಟೆಯಲ್ಲಿ ಕೆಜಿಗೆ ನಾಲ್ಕೈದು ರೂ. ಕೇಳುವುದರಿಂದ ರೈತರಿಗೆ ದಿಗಿಲು ಬಡದಿದೆ. ಸಂಜೆಯಾಗುತ್ತಿದ್ದಂತೆ ವ್ಯಾಪಾರಸ್ಥರೂ ಕೇಳಿದ ದರಕ್ಕೆ ಅನಿವಾರ್ಯ ಮಾರುವಂತಹ ಸ್ಥಿತಿ ಇದೆ. ಕೆಲ ರೈತರು ಮಹಾರಾಷ್ಟ್ರದ ಪುಣೆಗೆ ಹಸಿ ಮೆಣಸಿನಕಾಯಿ ಒಯ್ಯುತ್ತಿದ್ದು, ಪುಣೆಯಲ್ಲಿ ಕೆಜಿಗೆ 18ರಿಂದ 20ರೂ ಮಾರಾಟವಾಗುತ್ತಿದೆ.
ಪಟ್ಟಣ ಸೇರಿ ತಾಲೂಕಿನಾದ್ಯಂತ ಮುಂಗಾರಿನಲ್ಲಿ ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಸಿ ಮೆಣಸಿನಕಾಯಿ ಬಿತ್ತನೆ ಮಾಡಲಾಗಿದೆ. ಒಂದು ಎಕರೆಗೆ ಕನಿಷ್ಠ 30ರಿಂದ 35 ಸಾವಿರ ರೂ. ವೆಚ್ಚ ಮಾಡಲಾಗಿದೆ. ಹಾಕಿದ ಹಣಕ್ಕಿಂತ ಕೂಲಿ ಕಾರ್ಮಿಕರಿಗೆ ಕೊಟ್ಟ ಹಣವೂ ಬಾರದಂತಾಗಿದೆ. ಜೂನ್ ತಿಂಗಳು ನಾರು ಸಸಿ ಮಾಡಿ ಮೆಣಸಿನಕಾಯಿ ಬಿತ್ತನೆ ಮಾಡಿದ ನೂರಾರು ರೈತರು ಸಾಲದ ಸುಳಿಗೆ ಸಿಲುಕುವಂತಾಗಿದೆ.
ಇದನ್ನೂ ಓದಿ: ಅಕ್ರಮ ಮರಂ ಸಾಗಣೆ ಮತ್ತೆ ಶುರು
ತಾಲೂಕಿನಲ್ಲಿ ಹಸಿ ಮೆಣಸಿನಕಾಯಿ, ಭತ್ತ, ಹತ್ತಿ ಅತಿ ಹೆಚ್ಚು ಬಿತ್ತನೆ ಮಾಡಲಾಗುತ್ತಿದೆ. ಕೊಪ್ಪರು, ಗಬ್ಬೂರು, ಮಸರಕಲ್, ಸುಂಕೇಶ್ವರಹಾಳ, ರಾಮನಾಳ, ಯಮನಾಳ ಸೇರಿ ಇತರೆ ಗ್ರಾಮಗಳಲ್ಲಿ ಹಸಿ ಮೆಣಸಿನಕಾಯಿ ಅತಿ ಹೆಚ್ಚು ಬೆಳೆಯಲಾಗಿದೆ. ಕಳೆದ ವರ್ಷ ಹೋಲಿಸಿದರೆ ಈ ವರ್ಷ ಹೆಚ್ಚು ಹಸಿ ಮೆಣಸಿನಕಾಯಿ ಬಿತ್ತನೆ ಮಾಡಲಾಗಿದೆ. ಇದೀಗ ಹತ್ತಿಗೆ ಮಾರುಕಟ್ಟೆಯಲ್ಲಿ ಕ್ವಿಂಟಲ್ಗೆ 9ರಿಂದ 10 ಸಾವಿರ ರೂ. ಬೆಲೆ ಇದೆ. ಹತ್ತಿ ಬಿಡಿಸಿ ಮಾರುಕಟ್ಟೆಗೆ ಬರುತ್ತಿದ್ದಂತೆ ಏಕಾಏಕಿ ದರ ಕುಸಿದು ಹೋಗುವುದು ರೈತರಿಗೆ ಹೊಸದೇನಲ್ಲ. ಈ ಬಾರಿ ಹಸಿ ಮೆಣಸಿನಕಾಯಿಗೆ ಬೆಲೆ ಇಲ್ಲದ ಕಾರಣ ನೂರಾರು ರೈತರು ತೊಂದರೆ ಅನುಭವಿಸುವಂತಾಗಿದೆ.
ಒಂದು ಎಕರೆಗೆ 30 ರಿಂದ 40 ಸಾವಿರವರೆಗೆ ವೆಚ್ಚ ಭರಿಸುವ ರೈತರಿಗೆ ಬೆಲೆ ಕೈ ಹಿಡಿಯುತ್ತಿಲ್ಲ. ಹೀಗಾಗಿ ನಷ್ಟದಲ್ಲೇ ಕಾಲ ಕಳೆಯುವಂತಹ ಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ರೈತರಾದ ಬಸಲಿಂಗ, ರಾಮಮೂರ್ತಿ.
ತಾಲೂಕಿನಾದ್ಯಂತ ಬೆಳೆದ ಹಸಿ ಮೆಣಸಿನಕಾಯಿಗೆ ಬೆಲೆ ಇಲ್ಲದಂತಾಗಿದೆ. ವಾರದ ಸಂತೆಯಲ್ಲಿ 7ರೂ. ಕೆಜಿಗೆ ಮಾರಾಟವಾಗುತ್ತಿದೆ. ಇಂತಹ ಸಮಸ್ಯೆಗಳಿಂದ ರೈತರು ನೊಂದಿದ್ದಾರೆ ಎನ್ನುತ್ತಾರೆ ರೈತ ಸಂಘದ ತಾಲೂಕಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ ಕಳೆದ ವರ್ಷಕ್ಕಿಂತ ಈವರ್ಷ ರೈತರು ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಸಿ ಮೆಣಸಿನಕಾಯಿ ಬಿತ್ತನೆ ಮಾಡಿದ್ದಾರೆ. ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದ ಕಾರಣ 7ರೂ. ಕೆಜಿ ಮಾರಾಟ ನಡೆದಿದೆ. ಭೀಮರಾವ್ ಕುಂಬಾರ, ಸಹಾಯಕ ನಿರ್ದೇಶಕ ತೋಟಗಾರಿಕೆ
ಕಳೆದ ವರ್ಷಕ್ಕಿಂತ ಈ ವರ್ಷ ರೈತರು ಎರಡೂವರೆ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಸಿ ಮೆಣಸಿನಕಾಯಿ ಬಿತ್ತನೆ ಮಾಡಿದ್ದಾರೆ. ಈ ಬಾರಿ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದ ಕಾರಣ 7ರೂ. ಕೆಜಿ ಮಾರಾಟ ನಡೆದಿದೆ.
ಭೀಮರಾವ್ ಕುಂಬಾರ, ಸಹಾಯಕ ನಿರ್ದೇಶಕ ತೋಟಗಾರಿಕೆ
ಹಸಿ ಮೆಣಸಿನಕಾಯಿ ಬೆಳೆಗೆ ಬೆಲೆ ಇಲ್ಲ ಕೆಜಿಗೆ 7ರೂ. ಮಾರಾಟ ನಡೆದಿದೆ. ಮಹಾರಾಷ್ಟ್ರದಲ್ಲಿ 18ರಿಂದ 20ರೂ. ಕೆಜಿ ಇದ್ದುದರಿಂದ ಸ್ವಲ್ಪ ಕೂಲಿ ಹಣವಾದರೂ ಬರಲಿ ಎಂದು ಪುಣೆಗೆ ಹೊರಟಿದ್ದೇವೆ.
ಮುದುಕಪ್ಪ, ನಾಗಪ್ಪ, ಅಮರಾಪುರ ಗ್ರಾಮದ ರೈತರು
ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್