ಜೆಡಿಎಸ್ನಲ್ಲೇ ಬೆಳೆದು ದ್ರೋಹ ಬಗೆದ ಸಿದ್ದು: ಎಚ್ಡಿಡಿ
Team Udayavani, May 7, 2018, 6:30 AM IST
ರಾಯಚೂರು: ರಾಜ್ಯದಲ್ಲಿ ಪ್ರಾದೇಶಿಕ ಪಕ್ಷ ಇರಬಾರದು ಎಂಬ ದುರುದ್ದೇಶದಿಂದ ಬಿಜೆಪಿ, ಕಾಂಗ್ರೆಸ್ ಷಡ್ಯಂತ್ರ ರೂಪಿಸಿವೆ. ಜೆಡಿಎಸ್ನಲ್ಲಿ ಬೆಳೆದು ಡಿಸಿಎಂ ಅಧಿಕಾರ ಅನುಭವಿಸಿದ ಸಿದ್ದರಾಮಯ್ಯ, ಕಾಂಗ್ರೆಸ್ ಸೇರಿ ಸಿಎಂ ಆದರು. ಈಗ ಜೆಡಿಎಸ್ನ 7 ಶಾಸಕರನ್ನು ಕಾಂಗ್ರೆಸ್ಗೆ ಸೆಳೆದು ದ್ರೋಹ ಮಾಡಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಆರೋಪಿಸಿದರು.
ನಗರದಲ್ಲಿ ರವಿವಾರ ಜೆಡಿಎಸ್-ಬಿಎಸ್ಪಿ ಜಂಟಿ ಪ್ರಚಾರ ಸಮಾವೇಶದಲ್ಲಿ ಮಾತನಾಡಿ, ರಾಜ್ಯವನ್ನು ಐದು ವರ್ಷಗಳ ಕಾಲ ಆಳಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ನಂಥ ಭ್ರಷ್ಟ ಸರಕಾರ ವನ್ನು ನನ್ನ ರಾಜಕೀಯ ಜೀವನದಲ್ಲಿ ಎಂದೂ ಕಂಡಿಲ್ಲ. ಮುಂದೆಯೂ ನೋಡುವುದಿಲ್ಲ ಎಂದರು. ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಮೂಲಕ ಬಡವರಿಗೆ ಊಟ ಕೊಡುತ್ತೇನೆ ಎಂದು ಹೇಳುವ ಸಿದ್ದರಾಮಯ್ಯ ಈ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಕೊಟ್ಟರೆ ಅವರೇ ನಾಡಿಗೆ ಅನ್ನ ಕೊಡುತ್ತಾರೆ. ಕುಮಾರಸ್ವಾಮಿ ರೈತರ 51 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡುತ್ತೇನೆ ಎಂದು ಹೇಳಿದಾಕ್ಷಣ ಕಾಂಗ್ರೆಸ್, ಬಿಜೆಪಿ ನಾವೂ ಸಾಲ ಮನ್ನಾ ಮಾಡುತ್ತೇವೆ ಎನ್ನುತ್ತಿವೆ. ಅಷ್ಟೊಂದು ಕಾಳಜಿ ಇದ್ದರೇ ಮೊದಲೇ ಏಕೆ ಹೇಳಲಿಲ್ಲ. ಸಾಲ ಸಂಪೂರ್ಣ ಮನ್ನಾ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು