ಜಿಎಸ್‌ಟಿ ದೇಶದ ಪ್ರಗತಿಗೆ ಪೂರಕ


Team Udayavani, Jul 5, 2017, 11:32 AM IST

GULB-5.jpg

ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ತೆರಿಗೆ ನೀತಿ ಜಿಎಸ್‌ಟಿ ದೇಶದ ಅಭಿವೃದ್ಧಿಗೆ
ತುಂಬಾ ಅನುಕೂಲಕರವಾಗಿದೆ. ಇದರಿಂದ ಗ್ರಾಹಕರಾಗಲಿ, ವ್ಯಾಪಾರಿಗಳಾಗಲಿ ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂದು ವಾಣಿಜ್ಯ ತೆರಿಗೆ ಇಲಾಖೆ ಕಲಬುರಗಿ ವಿಭಾಗೀಯ ಜಂಟಿ ಆಯುಕ್ತ ಪದ್ಮಾಕರ ಕುಲಕರ್ಣಿ ಹೇಳಿದರು.

ವಾಣಿಜ್ಯ ತೆರಿಗೆಗಳ ಇಲಾಖೆ, ವಾಣಿಜ್ಯೋದ್ಯಮಗಳ ಸಂಘ ಹಾಗೂ ಟ್ಯಾಕ್ಸ್‌ ಬಾರ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಮಂಗಳವಾರ ಸಮೀಪದ ಕೃಷಿ ವಿವಿಯ ಪ್ರೇಕ್ಷಾಗೃಹದಲ್ಲಿ ಹಮ್ಮಿಕೊಂಡಿದ್ದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ತೆರಿಗೆ ನೀತಿಯಾದ ಜಿಎಸ್‌ಟಿಯಿಂದ ದೇಶ ಅಭಿವೃದ್ಧಿಯತ್ತ ಸಾಗಲಿದೆ. 20 ಲಕ್ಷಕ್ಕೂ ಹೆಚ್ಚು ವ್ಯವಹಾರ ನಡೆಸುವವರು ಶೇ.5ರಷ್ಟು ತೆರಿಗೆ ಕಟ್ಟಬೇಕಾಗುತ್ತದೆ. ಈ ಮೊದಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಪ್ರತ್ಯೇಕ ತೆರಿಗೆ ಪಾವತಿ ಮಾಡಬೇಕಿತ್ತು. ಆದರೆ, ಈಗ ಇದು ಏಕರೂಪದ್ದಾಗಿದ್ದು, ಒಮ್ಮೆ ಪಾವತಿಸಿದರೆ ಸಾಕು.
ಅಂತಾರಾಜ್ಯದಲ್ಲಿ ವಸ್ತುಗಳನ್ನು ಖರೀದಿಸಿದರೆ ಮಾತ್ರ ಇನ್‌ಫುಟ್‌ ಟ್ಯಾಕ್ಸ್‌ ಭರಿಸಬೇಕಾಗುತ್ತದೆ ಎಂದು ವಿವರಿಸಿದರು.

ಇಂದು ಸಾಕಷ್ಟು ವರ್ತಕರು ಗೊಂದಲಕ್ಕೆ ಸಿಲುಕಿದ್ದಾರೆ. ಜಿಎಸ್‌ಟಿಯಿಂದ ನಷ್ಟಕ್ಕೆ ತುತ್ತಾಗಲಿದ್ದೇವೆ ಎಂಬ ಆತಂಕ ಮನೆ ಮಾಡಿದೆ. ಆದರೆ, ಅಂಥ ಯಾವುದೇ ಗೊಂದಲಗಳು ಬೇಡ. ಜನರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಹೆಚ್ಚುವರಿಯಾಗಿ ಪಾವತಿಸುತ್ತಿದ್ದ ತೆರಿಗೆಗೆ ಕಡಿವಾಣ ಹಾಕಲು ಕೇಂದ್ರ ಇಂಥ ನೀತಿ ಜಾರಿಗೊಳಿಸಿದೆ ಎಂದು ಹೇಳಿದರು.

ಮೊದಲು ನಾನಾ ಹಂತದಲ್ಲಿ ತೆರಿಗೆ ನೀಡಬೇಕಿತ್ತು. ಅಲ್ಲದೇ, ಒಂದೇ ವಸ್ತುವಿಗೆ ಒಂದೊಂದು ಕಡೆ ಒಂದೊಂದು ದರವಿತ್ತು. ಉತ್ಪಾದಕರು, ಖರೀದಿದಾರರು ಹಾಗೂ ಪೂರೈಕೆದಾರರಿಗೆ ವಿವಿಧ ತೆರಿಗೆಗಳನ್ನು ವಿ ಧಿಸಲಾಗುತ್ತಿತ್ತು. ಆದರೆ, ಜಿಎಸ್‌ಟಿಯಿಂದ ದೇಶದ ಯಾವುದೇ ಭಾಗದಲ್ಲಿ ವಸ್ತು ಖರೀದಿಸಿದರೂ ಒಂದೇ ದರ ಇರುತ್ತದೆ. ಜನರಲ್ಲಿದ್ದ ದರ ಗೊಂದಲ ಜಿಎಸ್‌ಟಿ ಜಾರಿಯಿಂದ ಪರಿಹಾರವಾಗಲಿದೆ. ವಸ್ತುಗಳ ಮೌಲ್ಯಗಳ ಆಧಾರದ ಮೇಲೆ ನಾಲ್ಕು ವಿಭಾಗಗಳಲ್ಲಿ ತೆರಿಗೆ ನಿಗದಿ ಮಾಡಲಾಗಿದೆ. ನೀವು ಯಾವ ವಿಭಾಗಕ್ಕೆ ಒಳಪಡುತ್ತೀರಿ ಎಂಬುದನ್ನು ಅರಿತು ತೆರಿಗೆ ಪಾವತಿಗೆ
ಮುಂದಾಗಬೇಕು ಎಂದು ಹೇಳಿದರು.

ವಾಣಿಜ್ಯೋದ್ಯಮಿಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ ಪ್ರಾಸ್ತಾವಿಕ ಮಾತನಾಡಿ, ಕೇಂದ್ರ ಸರ್ಕಾರ ಈ ಹೊಸ ಮಸೂದೆ ಜಾರಿ ಮುನ್ನ ಸಾಕಷ್ಟು ಪೂರ್ವ ತಯಾರಿ ಮಾಡಿಕೊಂಡಿದೆ. ವಾಣಿಜ್ಯ ತೆರಿಗೆ ಇಲಾಖೆ ಅ ಧಿಕಾರಿಗಳಿಂದ ಯಾವುದೇ ಮಾಹಿತಿ ಬೇಕಾದರೂ ಕೇಳಿ ತಿಳಿದುಕೊಳ್ಳಬಹುದಾಗಿದೆ ಎಂದರು. ಟ್ಯಾಕ್ಸ್‌ ಬಾರ್‌ ಅಸೋಸಿಯೇಶನ್‌ ಅಧ್ಯಕ್ಷ ಮಹಾವೀರ ಸಿಂಘಿ, ರಾಮಚಂದ್ರ ಪ್ರಭು, ಕಮಲಕುಮಾರ ಜೈನ, ಜಂಬಣ್ಣ ಯಕ್ಲಾಸಪುರ, ಅಮರೇಶ್ವರ, ಮಹ್ಮದ್‌ ಇರ್ಫಾನ್‌ , ಉದ್ಯಮಿಗಳು, ವರ್ತಕರು ಭಾಗವಹಿಸಿದ್ದರು. 

ಆರಂಭದಲ್ಲಿ ಎಲ್ಲರಲ್ಲೂ ಈ ಬಗ್ಗೆ ಗೊಂದಲಗಳು ಸೃಷ್ಟಿಯಾಗಿವೆ. ಕೆಲ ದಿನಗಳಲ್ಲೇ ನಿಮ್ಮೆಲ್ಲ ಸಮಸ್ಯೆಗಳು ಪರಿಹಾರವಾಗಲಿದೆ. ಆದರೆ, ಈ ಮುಂಚೆ ತೆರಿಗೆ ವಂಚನೆ ಮಾಡುತ್ತಿದ್ದವರೂ ಈಗ ತಪ್ಪಿಸಿಕೊಳ್ಳುವಂತಿಲ್ಲ. ಮೊದಲನೇ ಹಂತದಲ್ಲಿ ಜಿಎಸ್‌ಟಿ ನೋಂದಣಿಗೆ ಮಹತ್ವ ನೀಡಲಾಗುತ್ತಿದೆ. ತೆರಿಗೆ ಅನುಷ್ಠಾನಕ್ಕೆ ಬೇಕಾಗಿರುವ ಪೂರ್ವ ಸಿದ್ಧತೆಗಳನ್ನು ಇಲಾಖೆ ಮಾಡಿಕೊಂಡಿದೆ.

ಪದ್ಮಾಕರ ಕುಲಕರ್ಣಿ, ವಿಭಾಗೀಯ ಜಂಟಿ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.