ಕೂಲಿಗಾಗಿ ಆಗ್ರಹಿಸಿ ಹಮಾಲರ ಪ್ರತಿಭಟನೆ
Team Udayavani, Dec 31, 2019, 12:13 PM IST
ರಾಯಚೂರು: ಲಾರಿ ಮಾಲೀಕರು ಹಾಗೂ ವರ್ತಕರು ಸರಿಯಾಗಿ ಕೂಲಿ ಹಣ ನೀಡುತ್ತಿಲ್ಲ. ನೇರವಾಗಿ ಹಮಾಲರಿಗೆ ಕೂಲಿ ಕೊಡಿಸುವ ಮೂಲಕ ವಂಚನೆ ತಡೆಗಟ್ಟುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ಹಮಾಲರ ಸಂಘದಿಂದ ನಗರದ ಎಪಿಎಂಸಿ ಕಚೇರ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಎಪಿಎಂಸಿ ವ್ಯಾಪ್ತಿಯ ವರ್ತಕರ ಅಂಗಡಿಗಳಲ್ಲಿ ಸುಮಾರು 150ಕ್ಕೂ ಅಧಿಕ ಹಮಾಲರು ಮೂರ್ನಾಲ್ಕು ದಶಕದಿಂದ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಲಾರಿಗಳಿಂದ ಲೋಡಿಂಗ್, ಅನ್ ಲೋಡಿಂಗ್ ಮಾಡುವ ಮೂಲಕ ದುಡಿಯುತ್ತಿದ್ದಾರೆ. ಆದರೆ, ಎರಡು ವರ್ಷದಿಂದ ಕೂಲಿ ಹಣ ತಾವೇ ಪಡೆಯುತ್ತಿರುವ ವರ್ತಕರು ನಮ್ಮ ಶ್ರಮಕ್ಕೆ ತಕ್ಕ ಕೂಲಿ ನೀಡದೆ ವಂಚಿಸುತ್ತಿದ್ದಾರೆ. ಹೀಗಾಗಿ ಕೆಲಸ ಮಾಡಿದ ಹಮಾಲಿಗಳಿಗೆ ನೇರವಾಗಿ ನೀಡುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ದಿನವಿಡೀ ಶ್ರಮ ವಹಿಸಿ ದುಡಿಯುವ ಹಮಾಲರಿಗೆ ಇದರಿಂದ ಅನ್ಯಾಯವಾಗುತ್ತಿದೆ. ಈ ಕುರಿತು ಕಾರ್ಮಿಕ ಇಲಾಖೆ ಹಾಗೂ ಮುಖಂಡರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಳ್ಳದಿದ್ದಲ್ಲಿ ಎಲ್ಲ ಹಮಾಲಿಗಳು ಸೇವೆ ಸ್ಥಗಿತಗೊಳಿಸಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಹಮಾಲರ ಸಂಘದ ಸಣ್ಣ ಮಾರೆಪ್ಪ, ಪ್ರಧಾನ ಕಾರ್ಯದರ್ಶಿ ಕೆ. ವೆಂಕಟೇಶ ಯಾದವ್, ಗೌರವಾಧ್ಯಕ್ಷ ಆದೆಪ್ಪ ಕಾಡೂರು, ಕಾನೂನು ಸಲಹೆಗಾರ ಜಿ.ಎಸ್. ವೀರಭದ್ರಪ್ಪ, ಉಪಾಧ್ಯಕ್ಷ ಶಿವಣ್ಣ ಸೇರಿದಂತೆ ಹಮಾಲರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ