ಕೂಲಿಗಾಗಿ ಆಗ್ರಹಿಸಿ ಹಮಾಲರ ಪ್ರತಿಭಟನೆ
Team Udayavani, Dec 31, 2019, 12:13 PM IST
ರಾಯಚೂರು: ಲಾರಿ ಮಾಲೀಕರು ಹಾಗೂ ವರ್ತಕರು ಸರಿಯಾಗಿ ಕೂಲಿ ಹಣ ನೀಡುತ್ತಿಲ್ಲ. ನೇರವಾಗಿ ಹಮಾಲರಿಗೆ ಕೂಲಿ ಕೊಡಿಸುವ ಮೂಲಕ ವಂಚನೆ ತಡೆಗಟ್ಟುವಂತೆ ಆಗ್ರಹಿಸಿ ರಾಯಚೂರು ಜಿಲ್ಲಾ ಹಮಾಲರ ಸಂಘದಿಂದ ನಗರದ ಎಪಿಎಂಸಿ ಕಚೇರ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಎಪಿಎಂಸಿ ವ್ಯಾಪ್ತಿಯ ವರ್ತಕರ ಅಂಗಡಿಗಳಲ್ಲಿ ಸುಮಾರು 150ಕ್ಕೂ ಅಧಿಕ ಹಮಾಲರು ಮೂರ್ನಾಲ್ಕು ದಶಕದಿಂದ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಲಾರಿಗಳಿಂದ ಲೋಡಿಂಗ್, ಅನ್ ಲೋಡಿಂಗ್ ಮಾಡುವ ಮೂಲಕ ದುಡಿಯುತ್ತಿದ್ದಾರೆ. ಆದರೆ, ಎರಡು ವರ್ಷದಿಂದ ಕೂಲಿ ಹಣ ತಾವೇ ಪಡೆಯುತ್ತಿರುವ ವರ್ತಕರು ನಮ್ಮ ಶ್ರಮಕ್ಕೆ ತಕ್ಕ ಕೂಲಿ ನೀಡದೆ ವಂಚಿಸುತ್ತಿದ್ದಾರೆ. ಹೀಗಾಗಿ ಕೆಲಸ ಮಾಡಿದ ಹಮಾಲಿಗಳಿಗೆ ನೇರವಾಗಿ ನೀಡುವಂತೆ ಮಾಡಬೇಕು ಎಂದು ಒತ್ತಾಯಿಸಿದರು.
ದಿನವಿಡೀ ಶ್ರಮ ವಹಿಸಿ ದುಡಿಯುವ ಹಮಾಲರಿಗೆ ಇದರಿಂದ ಅನ್ಯಾಯವಾಗುತ್ತಿದೆ. ಈ ಕುರಿತು ಕಾರ್ಮಿಕ ಇಲಾಖೆ ಹಾಗೂ ಮುಖಂಡರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಕ್ರಮ ಕೈಗೊಳ್ಳದಿದ್ದಲ್ಲಿ ಎಲ್ಲ ಹಮಾಲಿಗಳು ಸೇವೆ ಸ್ಥಗಿತಗೊಳಿಸಿ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಹಮಾಲರ ಸಂಘದ ಸಣ್ಣ ಮಾರೆಪ್ಪ, ಪ್ರಧಾನ ಕಾರ್ಯದರ್ಶಿ ಕೆ. ವೆಂಕಟೇಶ ಯಾದವ್, ಗೌರವಾಧ್ಯಕ್ಷ ಆದೆಪ್ಪ ಕಾಡೂರು, ಕಾನೂನು ಸಲಹೆಗಾರ ಜಿ.ಎಸ್. ವೀರಭದ್ರಪ್ಪ, ಉಪಾಧ್ಯಕ್ಷ ಶಿವಣ್ಣ ಸೇರಿದಂತೆ ಹಮಾಲರು ಭಾಗವಹಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ
Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು
Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ
Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ
MUST WATCH
ಹೊಸ ಸೇರ್ಪಡೆ
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.