ಹಂಪನಾಳ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ
Team Udayavani, Jan 21, 2018, 5:27 PM IST
ಮಸ್ಕಿ: ತೆಲಂಗಾಣ ರಾಜ್ಯದ ಸಿಕಂದರಾಬಾದ್ ನಲ್ಲಿ ನಡೆದ ಆರು ರಾಜ್ಯಗಳ ದಕ್ಷಿಣ ಭಾರತ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕರ್ನಾರಟಕವನ್ನು ಪ್ರತಿನಿಧಿಸಿದ ಸಮೀಪದ ಹಂಪನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪ್ರದರ್ಶಿಸಿದ ಬಹುಪಯೋಗಿ ರೈತ ಮಿತ್ರ ಯಂತ್ರಕ್ಕೆ ದ್ವಿತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ.
ಹಂಪನಾಳ ಗ್ರಾಮದ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಮನೋಜ್ಕುಮಾರ ಹಾಗೂ ಸುರೇಶ ಅವರು ಗಣಿತ ಶಿಕ್ಷಕ ಎಸ್.ಎಸ್. ರವೀಶ ಮಾರ್ಗದರ್ಶನದಲ್ಲಿ ತಯಾರಿಸಿದ ಬಹು ಉಪಯೋಗಿ ರೈತ ಮಿತ್ರ ಯಂತ್ರಕ್ಕೆ ಯಾವುದೇ ಇಂಧನ, ದೈಹಿಕ ಶ್ರಮ ಹಾಕದೇ ಬೆಳೆಗಳಿಗೆ ಔಷಧಿ ಸಿಂಪಡಿಸಬಹುದಾಗಿದೆ. ವಾಹನ ಚಲಿಸದೇ ಇರುವ ಜಾಗದಲ್ಲಿ ಹಾಗೂ ದಾಳಿಂಬೆ, ಸಪೋಟಾ ಹಾಗೂ ಮಾವಿನ ಫಸಲುಗಳಿಗೂ ಸಹಿತ ನಿಂತಲ್ಲಿಯೇ ಸೌರ ಶಕ್ತಿಯಿಂದ ಔಷಧಿ ಸಿಂಪಡಿಸುವ ವ್ಯವಸ್ಥೆಯೂ ಇದರಲ್ಲಿದೆ.
ಬೆಳೆಗಳಿಗೆ ಹಾನಿ ಮಾಡುವ ಕೀಟ ಗಳನ್ನುಆಕರ್ಷಿಸಿ ನಾಶ ಮಾಡುವ ವಿಧಾನವನ್ನು ಸಹ ಇದರಲ್ಲಿರುವುದು ವಿಶೇಷ. ಅಲ್ಲದೇ ಜಮೀನುಗಳ ಬೆಳೆಗಳ ಸಾಲುಗಳಲ್ಲಿ ಕಳೆಗಳನ್ನು ಕೀಳುವ ಕುಂಠಿಯ ಅಥವಾ ಇತರ ಸಾಧನವನ್ನು ಸಹ ಅಳವಡಿಸಿ ರೈತರು ಉಪಯೋಗ ಪಡೆಯಬಹುದಾಗಿದೆ.
ಈ ಯಂತ್ರ ತಯಾರಿಗೆ ಹಳೆ ವಸ್ತು ಮತ್ತು ಕಡಿಮೆ ಬೆಲೆಯ ವಸ್ತುಗಳನ್ನು ಬಳಸಿದ್ದು, ಕೇವಲ 1500 ರೂ.ಗಳಲ್ಲಿ ಈ
ಯಂತ್ರ ತಯಾರಿಸಲಾಗಿದೆ ಎನ್ನುತ್ತಾರೆ ವಿದ್ಯಾರ್ಥಿಗಳು. ಸಿಕಂದರಾಬಾದ್ನಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಕೇರಳ, ಪಾಂಡಿಚೇರಿ, ತಮಿಳುನಾಡು, ಸೀಮಾಂಧ್ರ, ತೆಲಂಗಾಣ ಹಾಗೂ ಕರ್ನಾಟಕದ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಹಂಪನಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕರ್ನಾಟಕವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ರಾಜ್ಯ ಮತ್ತು ಜಿಲ್ಲೆಗೆ ಕೀರ್ತಿ ತಂದಿದೆ. ಈ ಶಾಲೆ ಸತತ ಮೂರನೇ ಬಾರಿ ದಕ್ಷಿಣ ಭಾರತ ವಿಜ್ಞಾನ ಮೇಳದಲ್ಲಿ ಭಾಗವಹಿಸಿದ್ದು, ಎರಡು ಬಾರಿ ರಾಷ್ಟ್ರಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ