ಕಾಡ್ಲೂರಲ್ಲಿ 20ರಿಂದ ಶ್ರೀ ಹನುಮದ್ವ್ರತ
Team Udayavani, Dec 18, 2018, 3:27 PM IST
ರಾಯಚೂರು: ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿ ತೀರದ ವನವಾಸಿ ಶ್ರೀ ರಾಮದೇವರ ಹಾಗೂ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನದಲ್ಲಿ ಡಿ.20ರಿಂದ 22ರವರೆಗೆ ಶ್ರೀ ಹನುಮದ್ವ್ರತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತನ್ನಿಮಿತ್ತ ಡಿ.20ರಂದು ಶ್ರೀ ರಾಮದೇವರಿಗೆ, ಪ್ರಾಣದೇವರಿಗೆ ವಿಶೇಷ ಪೂಜೆ, ಶ್ರೀ ಹನುಮದ್ವ್ರತ ಕಥೆ, ಅಲಂಕಾರ, ನೈವೇದ್ಯ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ. 21ರಂದು ಬೆಳಗ್ಗೆ 9 ಗಂಟೆಗೆ ಶ್ರೀ ತಂಬಿಹಳ್ಳಿ ಮಾಧವತೀರ್ಥ ಮಠದ ಪೀಠಾಧಿಪತಿ ಶ್ರೀ ವಿದ್ಯಾಸಿಂಧು ಮಾಧವ ತೀರ್ಥರ ಭವ್ಯ ಮೆರವಣಿಗೆ, ಪಾದಪೂಜೆ, ಶ್ರೀ
ಪಾದಂಗಳವರಿಂದ ನದಿಯಲ್ಲಿ ದಂಡಕಾಷ್ಟ ಸ್ನಾನ, ರಾಮದೇವರಿಗೆ, ಪ್ರಾಣದೇವರಿಗೆ ಮಧು ಅಭಿಷೇಕ, ಶ್ರೀಗಳವರಿಂದ ಸಂಸ್ಥಾನ ಪೂಜೆ, ಆಶೀರ್ವಚನ ಕಾರ್ಯಕ್ರಮ ಜರುಗಲಿದೆ. ರಾತ್ರಿ ನದಿಯಲ್ಲಿ ದೀಪೋತ್ಸವ, ತೆಪ್ಪೋತ್ಸವ ನಡೆಯಲಿದೆ.
22ರಂದು ಹುಣ್ಣಿಮೆ ಅಂಗವಾಗಿ ಶ್ರೀರಾಮದೇವರಿಗೆ ಹಾಗೂ ಪ್ರಾಣದೇವರಿಗೆ ವಿಶೇಷ ಪೂಜೆ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಕಾಡ್ಲೂರು ಸಂಸ್ಥಾನದ ಶ್ರೀ ರಂಗಾರಾವ್ ದೇಸಾಯಿ ಹಾಗೂ ಗ್ರಾಮಸ್ಥರು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ