ನರೇಗಾದಡಿ ಕೆಲಸ ನೀಡಲು ಆಗ್ರಹಿಸಿ ಪ್ರತಿಭಟನೆ
Team Udayavani, Jul 5, 2020, 5:06 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹಟ್ಟಿ ಚಿನ್ನದ ಗಣಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಆಗ್ರಹಿಸಿ ವಿವಿಧ ಗ್ರಾಮಗಳ ಕೂಲಿಕಾರ್ಮಿಕರು ಗೆಜ್ಜಲಗಟ್ಟಾ ಗ್ರಾಪಂ ಎದುರು ಧರಣಿ ನಡೆಸಿದರು.
ಕೋವಿಡ್ ಲಾಕ್ಡೌನ್ನಿಂದಾಗಿ ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ಮರಳಿದ್ದಾರೆ. ಬಡವರು ಮತ್ತು ಕೂಲಿಕಾರ್ಮಿಕರು ಊರಲ್ಲಿ ಕೆಲಸವೂ ಇಲ್ಲದೇ, ಕೈಯಲ್ಲಿ ಕಾಸೂ ಇಲ್ಲದೇ ಜೀವನ ನಿರ್ವಹಣೆಗೆ ತೊಂದರೆ ಆಗಿದೆ. ನರೇಗಾದಡಿ ಕೆಲಸ ನೀಡಲು ಅರ್ಜಿ ಸಲ್ಲಿಸಿದ್ದು, 15 ದಿನದಲ್ಲಿ ಕೆಲಸ ನೀಡಬೇಕಿತ್ತು. ಆದರೆ ಪಿಡಿಒ ಉದ್ಯೋಗ ನೀಡದೇ ನಿರ್ಲಕ್ಷಿಸಿದ್ದಾರೆ. ಉದ್ಯೋಗ ನೀಡಲಾಗದಿದ್ದರೆ ನಿರುದ್ಯೋಗ ಭತ್ಯೆಯನ್ನಾದರೂ ನೀಡಬೇಕೆಂದು ಆಗ್ರಹಿಸಿದರು.
ಪಂಚಾಯಿತಿ ಪಿಡಿಒ ನಜೀರ್ಸಾಬ್ ಹಾಗೂ ಕಾರ್ಯದರ್ಶಿ ಗುಂಡುರಾವ್ ಕೂಲಿಕಾರರನ್ನು ಸಮಾಧಾನ ಪಡಿಸಲು ಮುಂದಾದರೂ ಒಪ್ಪದ ಜನತೆ ತಾಪಂ ಇಒ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದರು. ಗೆಜ್ಜಲಗಟ್ಟಾ, ನಿಲೋಗಲ್, ಚಿಕ್ಕನಗನೂರು ಸೇರಿದಂತೆ ಇತರ ಗ್ರಾಮಗಳ ಕೂಲಿ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ