ರಸ್ತೆ ದುರಸ್ತಿಗೆ ನಿರ್ಲಕ್ಷ್ಯ : ಪ್ರಯಾಣ ಪ್ರಯಾಸ

ಗೌಡೂರು-ಗುರುಗುಂಟಾ ರಸ್ತೆಯಲ್ಲಿ ಗುಂಡಿಗಳು „ಕಿತ್ತು ಹೋದ ಮಾಚನೂರು-ಗೌಡೂರು ರಸ್ತೆ ಡಾಂಬರ್‌

Team Udayavani, Mar 19, 2020, 6:28 PM IST

19-March-27

ಹಟ್ಟಿ ಚಿನ್ನದ ಗಣಿ: ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ನಿರ್ಲಕ್ಷ್ಯದಿಂದಾಗಿ ಸಮೀಪದ ಗುರುಗುಂಟಾ-ಗೌಡೂರು, ಮಾಚನೂರು, ಯಲಗಟ್ಟಾ ರಸ್ತೆ ನಿರ್ವಹಣೆ ಇಲ್ಲದೇ ಹಾಳಾಗಿದ್ದರಿಂದ ವಾಹನ, ಚಾಲಕರು, ಸಾರ್ವಜನಿಕರ ಪ್ರಯಾಣ ಪ್ರಯಾಸವಾಗುತ್ತಿದೆ.

ಗುರುಗುಂಟಾ ಬಳಿ ಹಾದು ಹೋದ ಗೌಡೂರು, ಮಾಚನೂರು ಮತ್ತು ಯಲಗಟ್ಟಾದ 12 ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯಲ್ಲಿ ಗುಂಡಿಗಳು ಬಿದ್ದು, ವಾಹನಗಳ ಸವಾರರು ತೊಂದರೆ ಅನುಭವಿಸುವಂತಾಗಿದೆ. ಗೌಡೂರು-ಗುರುಗುಂಟಾ ಮಧ್ಯದ 5 ಕಿ.ಮೀ. ರಸ್ತೆಯುದ್ದಕ್ಕೂ ತಗ್ಗುಗಳು ಬಿದ್ದಿವೆ. ಇದು ನೀರಾವರಿ ಪ್ರದೇಶವಾಗಿದ್ದರಿಂದ ಗುಂಡಿಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆ ಆಗುತ್ತಿದೆ.

ವಾಹನ ಸವಾರರು ಈ 5 ಕಿ.ಮೀ. ರಸ್ತೆ ಕ್ರಮಿಸಲು ಸುಮಾರು ಅರ್ಧ ಗಂಟೆ ವ್ಯಯಿಸಬೇಕಿದೆ. ಈ ರಸ್ತೆ ಸಂಪೂರ್ಣ ಹದಗೆಟ್ಟಿದ್ದರೂ ವೇಗ ನಿಯಂತ್ರಣಕ್ಕೆ ಅಲ್ಲಲ್ಲಿ ಹಂಪ್ಸ್‌ ಹಾಕಿದ್ದು, ರಸ್ತೆ ಮತ್ತಷ್ಟು ಹದಗೆಡಲು ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಇನ್ನು ಮಾಚನೂರು ಗೌಡೂರು ರಸ್ತೆ ಡಾಂಬರ್‌ ಸಂಪೂರ್ಣ ಕಿತ್ತಿಹೋಗಿ ಕಂಕರ್‌ಗಳು ತೇಲಿವೆ. ಗೌಡೂರು ಸಮೀಪದ ಹಳ್ಳದ ಬಳಿ ಸಿಸಿ ರಸ್ತೆ ಕಿತ್ತಿದ್ದು ದ್ವಿಚಕ್ರ ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಚಿನ್ನದ ಗಣಿ ಕಂಪನಿ ಕೆಲಸಕ್ಕೆ ತೆರಳುವ ಕಾರ್ಮಿಕರ ದ್ವಿಚಕ್ರ ವಾಹನಗಳು ಹಾಳಾಗುತ್ತಿವೆ. ಇದರಂತೆ ಮಾಚನೂರು ಯಲಗಟ್ಟಾ ರಸ್ತೆಯ ಬಹುತೇಕ ಭಾಗ ಹಾಳಾಗಿದೆ. ಗುರುಗುಂಟಾ ಯಲಗಟ್ಟಾ 12 ಕಿ.ಮೀ. ರಸ್ತೆ ಸಂಪೂರ್ಣ ಹಾಳಾಗಿದ್ದರಿಂದ ತುರ್ತು ಸಂದರ್ಭದಲ್ಲಿ ಕಾರು, ಆಟೋ, ಸಣ್ಣಪುಟ್ಟ ವಾಹನಗಳವರು ಬಾಡಿಗೆ ಬರಲು ಹಿಂದೇಟು ಹಾಕುತ್ತಾರೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಗುರುಗುಂಟಾ-ಗೌಡೂರು, ಯಲಗಟ್ಟಾ ರಸ್ತೆ ಸಂಪೂರ್ಣ ಹಾಳಾಗಿದ್ದರೂ ಈ ಭಾಗದ ಜನಪ್ರತಿನಿಧಿಗಳು ದುರಸ್ತಿಗೆ ಕ್ರಮ ವಹಿಸದ್ದರಿಂದ ಜನರು ಹಿಡಿಶಾಪ ಹಾಕುತ್ತ ಸಂಚರಿಸುವಂತಾಗಿದೆ. ಇನ್ನಾದರೂ ಅಧಿಕಾರಿಗಳು, ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗಬೇಕಿದೆ.

„ಗಂಗಾಧರ ನಾಯಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.