ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸವದಿ

ಪ್ರಧಾನಿ ನರೇಂದ್ರ ಮೋದಿ  ಇದನ್ನು ಹೆಚ್ಚಿಸಿದ್ದು, ಪ್ರತಿ ಗ್ರಾಪಂಗೆ 1 ಕೋಟಿ ಅನುದಾನ ನೀಡಲಿದ್ದಾರೆ.

Team Udayavani, Jan 29, 2021, 4:52 PM IST

ಕಲ್ಯಾಣ ಕರ್ನಾಟಕ ಭಾಗ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸವದಿ

ದೇವದುರ್ಗ: ಕಲ್ಯಾಣ ಕರ್ನಾಟಕ ಭಾಗ ಸೇರಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು. ಗೂಗಲ್‌ ಗ್ರಾಮದಲ್ಲಿ ಆಯೋಜಿಸಿದ್ದ 231 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಅಡಿಗಲ್ಲು ಸಮಾರಂಭ ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಅತ್ಯಂದ ಹಿಂದುಳಿದ ತಾಲೂಕು ಎನ್ನುವ ಹಣೆ ಪಟ್ಟಿ ಕಟ್ಟಿಕೊಂಡಿರುವ ದೇವದುರ್ಗ ತಾಲೂಕಿನಲ್ಲಿ ರಾಜ್ಯ ಸರ್ಕಾರದ ವಿಶೇಷ ಕಾಳಜಿ ಹಾಗೂ ಸ್ಥಳೀಯ ಶಾಸಕ ಕೆ. ಶಿವನಗೌಡ ನಾಯಕ ಇಚ್ಛಾಶಕ್ತಿಯಿಂದ ನಾಗಾಲೋಟದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಈ ಹಿಂದೆ 250 ಕೋಟಿ ಸೇರಿ ಸದ್ಯ ಐದನೇ ಹಂತದಲ್ಲಿ 231 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ದೇವದುರ್ಗ ಮಾದರಿ  ಕ್ಷೇತ್ರವಾಗಲಿದ್ದು, ಕ್ಷೇತ್ರದ ಅಭಿವೃದ್ಧಿಗೆ ನಾನು ಡಿಸಿಎಂ ಆಗಿ ಎಲ್ಲ ಸಹಕಾರ ನೀಡುತ್ತೇನೆ ಎಂದರು. ವಸತಿ ಸಚಿವ ವಿ. ಸೋಮಣ್ಣ ಮಾತನಾಡಿ, ದೇವದುರ್ಗ ತಾಲೂಕು ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದಿದ್ದು, ಶಾಸಕ ಕೆ. ಶಿವನಗೌಡ ನಾಯಕ ಇಚ್ಛಾಶಕ್ತಿಯಿಂದ ಸದ್ಯ ಅಭಿವೃದ್ಧಿಯತ್ತ ಸಾಗುತ್ತಿದೆ.

ಕೇಂದ್ರ ಸರ್ಕಾರ ಈ ಹಿಂದೆ 14ನೇ ಹಣಕಾಸು ಯೋಜನೆಯಡಿ ಪ್ರತಿ ಗ್ರಾಪಂಗೆ 40 ಲಕ್ಷ ರೂ. ಅನುದಾನ ನೀಡುತ್ತಿತ್ತು. ಪ್ರಧಾನಿ ನರೇಂದ್ರ ಮೋದಿ  ಇದನ್ನು ಹೆಚ್ಚಿಸಿದ್ದು, ಪ್ರತಿ ಗ್ರಾಪಂಗೆ 1 ಕೋಟಿ ಅನುದಾನ ನೀಡಲಿದ್ದಾರೆ. ಈ ಅನುದಾನದಲ್ಲಿ ಕ್ಷೇತ್ರದ ಸಮಗ್ರ  ಅಭಿವೃದ್ಧಿ ಮಾಡಲಾಗುವುದು. ನಾನು ಕ್ಷೇತ್ರದಲ್ಲಿ ಕಳೆದ
10 ವರ್ಷಕ್ಕಿಂತಲೂ ಹೆಚ್ಚು ಕಾಲ ಸಂಬಂಧ ಹೊಂದಿದ್ದು, ಇಲ್ಲಿನ ಜನರ ಪ್ರೀತಿ, ವಿಶ್ವಾಸ ಹಾಗೂ ಶಾಸಕ ಜನಪರ ಕಾರ್ಯ ನನಗೆ ಶಕ್ತಿ ತುಂಬಿವೆ ಎಂದರು.

ಶಾಸಕ ಕೆ. ಶಿವನಗೌಡ ನಾಯಕ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವದುರ್ಗ ಕ್ಷೇತ್ರ ಅಭಿವೃದ್ಧಿಗೆ ಸಿಎಂ ಯಡಿಯೂರಪ್ಪ 11,000 ಕೋಟಿ ರೂ. ಅನುದಾನ
ನೀಡಿದ್ದಾರೆ. ಹಿಂದಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಗೂಗಲ್‌ ರಸ್ತೆ ಅಭಿವೃದ್ಧಿಗಾಗಿ ಇಲ್ಲಿನ ಜನರ ಜತೆ ರಾಯಚೂರಿಗೆ ಪಾದಯಾತ್ರೆ ಮಾಡಿದ್ದೆವು.
ಸುಮಾರು 25 ಸಾವಿರ ಜನರೊಂದಿಗೆ 86 ಕಿ.ಮೀ ಪಾದಯಾತ್ರೆ ಮಾಡಿದ್ದೆವು. ಅದರ ಫಲವಾಗಿ ಸರ್ಕಾರ ಈ ಭಾಗದ ರಸ್ತೆ ಅಭಿವೃದ್ಧಿಗೆ 112 ಕೋಟಿ ರೂ.
ಅನುದಾನ ನೀಡಿದೆ. ಹಿಂದಿನ ಸರ್ಕಾರ ಕ್ಷೇತ್ರಕ್ಕೆ 70 ಸಾವಿರ ಮನೆ ನೀಡಿ ಬಡನತ ನಿರ್ಮೂಲನೆಗೆ ಶ್ರಮಿಸಿದೆ ಎಂದರು.

ಈ ಸಂದರ್ಭದಲ್ಲಿ ವೀರಗೋಟದ ಶ್ರೀ ಅಡವಿಲಿಂಗ ಮಹಾರಾಜರು, ಗಬ್ಬೂರು ಸಂಸ್ಥಾನ ಶ್ರೀ ಬೂದಿಬಸವ ಶಿವಾಚಾರ್ಯ ಸ್ವಾಮೀಜಿ, ಸುಲ್ತಾನಪುರದ ಶ್ರೀ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ನವಲಕಲ್‌ನ ಶ್ರೀ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಗುಂಡಗುರ್ತಿಯ ಶ್ರೀ ನಿಜಲಿಂಗ ತಾತನವರು, ಮುಂಡರಗಿಯ ಶ್ರೀ ಶಿವಣ್ಣ ತಾತ, ಜಾಗಟಗಲ್‌ನ ಶ್ರೀ ಸಾಂಬಯ್ಯಪ್ಪ ತಾತನವರು, ಎನ್‌. ಗಣೇಕಲ್‌ನ ಶ್ರೀ ರೇಣುಕಾ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಶ್ರೀ ವೆಂಕೋಬ ತಾತನವರು, ಶ್ರೀ ಅಯ್ಯಪ್ಪ ತಾತ, ಗುರುಬಸವ ರಾಜ ಗುರುಗಳು, ಜಂಬಣ್ಣ ತಾತ, ಕೆಂಚಣ್ಣ ತಾತ, ಜಿಪಂ ಅಧ್ಯಕ್ಷ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್‌. ವೆಂಕಟೇಶ ಕುಮಾರ, ಎಸ್ಪಿ ಪ್ರಕಾಶ ನಿಕ್ಕಮ್‌ ಇತರರಿದ್ದರು.

ಬೆಳ್ಳಿ ಗದೆ, ಖಡ್ಗ, ಕಿರೀಟ ಉಡುಗೊರೆ
ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಬೆಳ್ಳಿ ಖಡ್ಗ, ವಸತಿ ಸಚಿವ ವಿ. ಸೋಮಣ್ಣಗೆ ಬೆಳ್ಳಿ ಕಿರೀಟ, ಅರಣ್ಯ ಸಚಿವ ಅರವಿಂದ ಲಿಂಬಾವಳಿಗೆ ಬೆಳ್ಳಿ ಗಧೆ ನೀಡಿ ಶಾಸಕ ಕೆ. ಶಿವನಗೌಡ ನಾಯಕ ಸನ್ಮಾನಿಸಿದರು.

ನಮ್ಮ ಸರ್ಕಾರ ಅಧಿ ಕಾರಕ್ಕಾಗಿ ಆಡಳಿತ ನಡೆಸದೇ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ. ಶಾಸಕ ಕೆ. ಶಿವನಗೌಡ ನಾಯಕ ಕೂಡ ತಮ್ಮ ಹೆಸರು ಉಳಿಸುವ ಕೆಲಸ ಮಾಡುತ್ತಿದ್ದು, ಇದಕ್ಕೆ ಕ್ಷೇತ್ರದ ಜನತೆ ನಾಲ್ಕನೇ ಬಾರಿ ಆಯ್ಕೆ ಮಾಡಿರುವುದೇ ಸಾಕ್ಷಿ.
ಲಕ್ಷ್ಮಣ ಸವದಿ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.