ನದಿ ತೀರದ ಹಳ್ಳಿಗಳಲ್ಲಿ ಹೈಅಲರ್ಟ್‌

•ಲಿಂಗಸುಗೂರಿನ ಹೊಂಕಮ್ಮನಗಡ್ಡೆ ನಿವಾಸಿಗಳ ಸ್ಥಳಾಂತರ•ಜಮೀನುಗಳಿಗೆ ನುಗ್ಗಿದ ನೀರು

Team Udayavani, Aug 6, 2019, 3:55 PM IST

rc-tdy-2

ರಾಯಚೂರು: ಕೃಷ್ಣಾ ನದಿ ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ಬೆಳೆ ಹಾನಿಗೀಡಾದ ಪ್ರದೇಶ ವೈಮಾನಿಕ ಸಮೀಕ್ಷೆಯಲ್ಲಿ ಕಂಡು ಬಂದಿದ್ದು ಹೀಗೆ.

ರಾಯಚೂರು: ಕೃಷ್ಣಾ ನದಿಗೆ ಸೋಮವಾರವೂ ಹೆಚ್ಚುವರಿ ನೀರು ಹರಿಸಿದ ಪರಿಣಾಮ ಪ್ರವಾಹ ಸ್ಥಿತಿ ಮುಂದುವರಿದಿದ್ದು, ನದಿ ಪಾತ್ರದ ನಿವಾಸಿಗಳಲ್ಲಿ ಆತಂಕ ಮಾತ್ರ ದೂರವಾಗಿಲ್ಲ. ಏತನ್ಮಧ್ಯೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಜಿಲ್ಲೆಯ ಪರಿಸ್ಥಿತಿ ಅವಲೋಕನ ಮಾಡಿದ್ದು, ನೆರೆ ಹಾನಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮುಂದುವರಿದ ಮಳೆಯಿಂದ ಜಲಾಶಯಗಳಿಗೆ ಒಳಹರಿವಿನಲ್ಲಿ ಕಿಂಚಿತ್ತೂ ಕಡಿಮೆಯಾಗಿಲ್ಲ. ಇದರಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್‌ ನೀರು ಬಿಟ್ಟಿದ್ದು, ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿಯಾಗುತ್ತಿದೆ. ತಾಲೂಕಿನ ಅರಷಿಣಗಿ, ಗುರ್ಜಾಪುರದಲ್ಲಿ 200 ಎಕರೆಗೂ ಅಧಿಕ ಬೆಳೆ ಹಾನಿಯಾಗಿದೆ. ಕಳೆದ ಐದಾರು ದಿನಗಳಿಂದ ನದಿ ಒಂದೇ ಪ್ರಮಾಣದಲ್ಲಿ ಹರಿಯುತ್ತಿರುವ ಕಾರಣ ಕೆಲವೆಡೆ ಮಣ್ಣು ಕುಸಿತವಾಗಿ ಜಮೀನುಗಳ ಕೊರತೆ ಕಂಡು ಬಂದರೆ, ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಕಾಡುತ್ತಿದೆ.

ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕು ಸೇರಿದಂತೆ ಒಟ್ಟು 51ಕ್ಕೂ ಹೆಚ್ಚು ಗ್ರಾಮಗಳು ಪ್ರವಾಹಕ್ಕೆ ತುತ್ತಾಗಿದ್ದು, ಜಿಲ್ಲಾಡಳಿತ ರಕ್ಷಣೆ, ಅಗತ್ಯ ಸೇವೆ ಮುಂದುವರಿಸಿದೆ. ಲಿಂಗಸುಗೂರು ತಾಲೂಕಿನ ನಡುಗಡ್ಡೆಯಾದ ಓಂಕಾರಗಡ್ಡೆಯಲ್ಲಿ ಬಿತ್ತನೆಗೆಂದು ತೆರಳಿ ಪ್ರವಾಹಕ್ಕೆ ಸಿಲುಕಿದ್ದ ಐವರನ್ನು ಎನ್‌ಡಿಆರ್‌ಎಫ್‌ ತಂಡ ರಕ್ಷಿಸಿದೆ. ಆರ್‌ಟಿಪಿಎಸ್‌ಗಾಗಿ ನಿರ್ಮಿಸಿದ್ದ ಗುರ್ಜಾಪುರ ಸೇತುವೆ ಕೂಡ ಮುಳುಗಡೆ ಹಂತಕ್ಕೆ ತಲುಪಿದೆ. ಗುರ್ಜಾಪುರ ಮತ್ತು ಅರಷಿಣಗಿ ಗ್ರಾಮಗಳ ಸುತ್ತಮುತ್ತಲಿನ ಗದ್ದೆಗಳಿಗೆ ನೀರು ನುಗ್ಗಿದೆ. ದೇವದುರ್ಗ ತಾಲೂಕಿನ ಕೃಷ್ಣಾನದಿ ದಡದಲ್ಲಿರುವ ಕೊಪ್ಪರ ಗ್ರಾಮದ ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ನೀರು ಬಂದಿದ್ದು, ಗ್ರಾಮಕ್ಕೂ ನೀರು ನುಗ್ಗುವ ಆತಂಕ ಶುರುವಾಗಿದೆ. ಲಿಂಗಸುಗೂರು ತಾಲೂಕಿನ ಕಾರೆ ಪವರ್‌ ಕಂಪೆನಿ ನಿರ್ಮಿಸಿರುವ ಬ್ಯಾರೇಜ್‌ ನೀರಿನಿಂದ ಮುಳುಗಿದ್ದು, ಯಳಗುಂದಿ, ಹಂಚಿನಾಳ ಗ್ರಾಮದ 150 ಎಕರೆ ಪ್ರದೇಶ ಜಲಾವೃತಗೊಂಡಿದೆ. ನದಿ ಪಾತ್ರದ ಹಳ್ಳಿಗಳಲ್ಲಿ ಜಿಲ್ಲಾಡಳಿತ ಹೈ ಅಲರ್ಟ್‌ ಘೋಷಿಸಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.