ಉಚ್ಛಾಯ ಮಹೋತ್ಸವ ಸಂಪನ್ನ
Team Udayavani, Dec 15, 2021, 12:08 PM IST
ನಾಗರಹಾಳ: ಬೊಮ್ಮನಾಳ ಗ್ರಾಮದ ಆರಾಧ್ಯ ದೈವ ರಾಮಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಉಚ್ಛಾಯ ಮಹೋತ್ಸವ ಮಂಗಳವಾರ ಸಂಭ್ರಮದಿಂದ ಜರುಗಿತು.
ಜಾತ್ರೆ ನಿಮಿತ್ತ ಕಳೆದ 15 ದಿನಗಳಿಂದ ಬೀರಲಿಂಗೇಶ್ವರ ದೇವರ ಕುರಿತು ಕೊಮನೂರಿನ ನಾಗಭೂಷಣ ಹಿರೇಮಠ ಪ್ರವಚನ ಕಾರ್ಯಕ್ರಮ ನಡೆಸಿಕೊಟ್ಟಿದ್ದರು.
ಮಂಗಳವಾರ ಬೆಳಗಿನ ಜಾವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಲ್ಲಕ್ಕಿ ಮೆರವಣಿಗೆ ನಡೆಯಿತು. ನಂತರ ಗೋಪುರಕ್ಕೆ ಕಳಸಾರೋಹಣ ಹಾಗೂ ವಿಶೇಷ ಪೂಜೆ ಸಲ್ಲಿಸಲಾಯಿತು. ಭಕ್ತರು ಕಾಯಿ-ಕರ್ಪೂರ, ಮುಡಿಪು, ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದರು. ಸಂಜೆ 6 ಗಂಟೆಗೆ ಉಚ್ಛಾಯ ಮಹೋತ್ಸವ ಜರುಗಿತು. ಬಯ್ನಾಪೂರ, ಬೊಗಾಪೂರ, ಸುಂಕಾಪೂರ, ಆಶಿಹಾಳ, ಕಿಲಾರಹಟ್ಟಿ, ಲೆಕ್ಕಿಹಾಳ ಗ್ರಾಮಗಳ ಭಕ್ತರು ತಂಡೋಪ ತಂಡವಾಗಿ ಬಂದು ದೇವರ ದರ್ಶನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!