ಹೆಚ್ಚಿವಾಹನ ಓಡಾಟ: ರಸ್ತೆಗಿಳಿದ ಅಧಿಕಾರಿಗಳು
Team Udayavani, May 7, 2021, 3:24 PM IST
ಸಿರವಾರ: ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಓಡಾಟ ಹೆಚ್ಚಾಗಿದ್ದು, ತಹಶೀಲ್ದಾರ್ ನೇತೃತ್ವದಲ್ಲಿ ಎಲ್ಲಾ ಅ ಧಿಕಾರಿಗಳು ರಸ್ತೆಗಿಳಿದು ಜಾಗೃತಿ ಮೂಡಿಸಿದರು.
ಜಿಲ್ಲಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗ್ಗೆ 6ರಿಂದ 10ರ ವರೆಗೆ ಅವಶ್ಯಕ ವಸ್ತುಗಳ ಅಂಗಡಿಗಳನ್ನು ಮಾತ್ರ ತೆಗೆಯಲು ಅನುಮತಿ ನೀಡಿದ್ದು, ನಂತರ ಯಾವುದೇ ವಾಹನಗಳ ಓಡಾಟ ಕಂಡು ಬಂದಲ್ಲಿ ದಂಡ ವಿ ಧಿಸುವುದಕ್ಕೆ ಆದೇಶಿಸಿದ್ದರು. ಅದರಂತೆ ಗುರುವಾರ ಬೆಳಗ್ಗೆ ತಾಲೂಕು ಆಡಳಿತ, ಪಟ್ಟಣ ಪಂಚಾಯತಿ ಕಾರ್ಯಲಯ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸಂಜೀವಿನಿ ಟ್ರಸ್ಟ್ ಹಾಗೂ ಊರಿನ ನಾಗರಿಕರ ಸಹಯೋಗದಲ್ಲಿ ಜಾಗೃತಿ ಜಾಥಾ ಹಾಗೂ ಪಟ್ಟಣದಲ್ಲಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ತಡೆದು ದಂಡ ವಿಧಿ ಸಿ ಎಚ್ಚರಿಕೆ ನೀಡಿದರು.
ನಂತರ ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಮಾತನಾಡಿ, ಕೋವಿಡ್ ಹಾವಳಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದ್ದು ಜಿಲ್ಲಾಧಿ ಕಾರಿಗಳು ಅನಗತ್ಯ ವಾಹನ ಓಡಾಟ ನಿಷೇಧಿ ಸಿದ್ದಾರೆ. ನಿಯಮ ಬಾಹಿರವಾಗಿ ಅಂಗಡಿಗಳನ್ನು ತೆರೆದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು. ವೈದ್ಯಾಧಿ ಕಾರಿ ಸುನೀಲ್ ಸರೋದೆ ಮಾತನಾಡಿ, ಪಟ್ಟಣದಲ್ಲಿ ಕೋವಿಡ್ ಹಾವಳಿ ಹೆಚ್ಚಿದ್ದು, ಸಾರ್ವಜನಿಕರು ಜಾಗೃತಿಯಿಂದ ಮನೆಯಲ್ಲಿ ಇರಿ. ಕೆಮ್ಮು, ಜ್ವರ, ನೆಗಡಿಯಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ.
ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಬಾಳಿ ಎಂದರು. ಪಪಂ ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ, ವೈದ್ಯಾಧಿ ಕಾರಿ ಡಾ| ಪರಿಮಳಾ ಮೈತ್ರಿ, ಪಿಎಸ್ಐ ಸುಜಾತ ನಾಯಕ, ಗ್ರಾಮ ಲೆಕ್ಕಾ ಧಿಕಾರಿ ವಿಲ್ಸನ್, ಜೆಇ ಶರಣಬಸವ, ಮುಖಂಡರಾದ ಟಿ.ಬಸವರಾಜ, ಅಯ್ಯನಗೌಡ ಎರೆಡ್ಡಿ, ನರಸಿಂಹರಾವ್ ಕುಲಕರ್ಣಿ, ಗುರುನಾಥಗೌಡ, ವೆಂಕಟೇಶ ಜಕ್ಕಲದಿನ್ನಿ, ಜ್ಞಾನಮಿತ್ರ, ಶ್ರೀಕಾಂತ ಸೇರಿದಂತೆ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಲ್ಲಾರು : ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಮೇಲ್ಛಾವಣಿ, ವಿದ್ಯಾರ್ಥಿಗಳು ಕಂಗಾಲು
ಬಾಳೆ ಕೃಷಿ ಮಾಡಿ ಸೈ ಎನಿಸಿಕೊಂಡಿರುವ ಕಳಸದ ಪ್ರಕಾಶ್ ಕುಮಾರ್
ಕಾಪು ತಾಲೂಕಿನಾದ್ಯಂತ ಭಾರೀ ಮಳೆ ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ
ಮಹಾ ತಿರುವು ; ಏಕನಾಥ್ ಶಿಂಧೆಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟು ಕೊಟ್ಟ ಬಿಜೆಪಿ
ಸುರತ್ಕಲ್ ಸುತ್ತಮುತ್ತ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಹೊಸ ಸೇರ್ಪಡೆ
ಸುಳ್ಯ-ಸಂಪಾಜೆಯಲ್ಲಿ ಮತ್ತೆ ಕಂಪನ; ಒಂದೇ ವಾರದಲ್ಲಿ ನಾಲ್ಕನೇ ಬಾರಿ ನಡುಗಿದ ಭೂಮಿ!
ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎಂ.ಡಿ ಲಕ್ಷ್ಮಿ ನಾರಾಯಣ್ಗೆ ಶೋಕಾಸ್ ನೋಟಿಸ್
ಇಂಗ್ಲೆಂಡ್ ವಿರುದ್ಧ ಟಿ20 ಏಕದಿನ ಸರಣಿಗೆ ತಂಡ ಪ್ರಕಟ; ಮರಳಿದ ಶಿಖರ್ ಧವನ್
ಬರ್ಮಿಂಗ್ಹ್ಯಾಮ್: ಭಾರತಕ್ಕೆ ಸವಾಲಿನ ಟೆಸ್ಟ್
ರಾಷ್ಟ್ರಪತಿ ಚುನಾವಣೆ: ಮುರ್ಮು, ಸಿನ್ಹಾ ನಾಮಪತ್ರ ಸ್ವೀಕೃತ