ಹೈಕ ಹಿಂದುಳಿಯಲು ರಾಜಕಾರಣಿಗಳೇ ಕಾರಣ


Team Udayavani, Sep 23, 2018, 12:24 PM IST

ray-1.jpg

ಸಿಂಧನೂರು: ಹೈದ್ರಾಬಾದ್‌ ಕರ್ನಾಟಕ ಪ್ರದೇಶ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿಯಲು ಈ ಭಾಗದ ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣ ಎಂದು ಭಾರತ ಕಮ್ಯುನಿಸ್ಟ್‌ ಪಕ್ಷದ ರಾಜ್ಯ ಘಟಕದ ಸಹ ಕಾರ್ಯದರ್ಶಿ ಡಾ| ಕೆ.ಎಸ್‌.ಜನಾರ್ಧನ ಆಪಾದಿಸಿದರು.

ಹೈದ್ರಾಬಾದ್‌ ಕರ್ನಾಟಕ ಭಾಗದ ಸಮಗ್ರ ಅಭಿವೃದ್ದಿಗಾಗಿ ಭಾರತ ಕಮ್ಯುನಿಸ್ಟ್‌ ಪಕ್ಷದ ನೇತೃತ್ವದಲ್ಲಿ ನಡೆಸುತ್ತಿರುವ ಬೀದರ್‌ನಿಂದ ಬಳ್ಳಾರಿವರೆಗೆ ಜನಜಾಗೃತಿ ಜಾಥಾ ಶನಿವಾರ ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ತಾಲೂಕು ಘಟಕದ ಮುಖಂಡರು, ಕಾರ್ಯಕರ್ತರು ಸ್ವಾಗತಿಸಿದ ನಂತರ ಎಪಿಎಂಸಿ ಪ್ರಾಂಗಣದಲ್ಲಿ ನಡೆದ ಬಹಿರಂಗ ಸಭೆಯಲ್ಲಿ
ಅವರು ಮಾತನಾಡಿದರು. ದೇಶ-ವಿದೇಶಗಳಿಗೆ ಚಿನ್ನ ಕೊಡುವ ನಾಡು, ಅನ್ನದ ಬಟ್ಟಲು ಎಂದು ಹೆಸರಾದ ಹೈಕ ಪ್ರದೇಶದಲ್ಲಿ ಅನ್ನಕ್ಕೆ ಪರದಾಡುವ ಪರಿಸ್ಥಿತಿ ಬಂದೊದಗಿದೆ. ಲೋಕಕ್ಕೆ ಉಕ್ಕನ್ನು ಕೊಟ್ಟ ಈ ಭಾಗದಲ್ಲಿ ವಸತಿ ಹಕ್ಕು ಇಲ್ಲದಂತಾಗಿದೆ. ವಿಶ್ವಕ್ಕೆ ಸಿಮೆಂಟ್‌ ನೀಡಿದ ನಾಡಿನ ಜನ ಮಣ್ಣಿನ ಮನೆಗಳಲ್ಲಿ ಬದುಕು ಸಾಗಿಸುವಂತಾಗಿದೆ. ಯುರೇನಿಯಂ ಗಣಿಗಾರಿಕೆ ಮಾಡುವ ನಮಗೆ ಮಾಹಿತಿ ತಂತ್ರಜ್ಞಾನ ಅಲಭ್ಯವಾಗಿದೆ. ಕೃಷ್ಣ, ಭೀಮಾ, ತುಂಗಭದ್ರೆಯರು ಹರಿದ ಈ ನೆಲದಲ್ಲಿ ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಅಖೀಲ ಭಾರತ ಕಿಸಾನ್‌ ಸಭಾ ರಾಜ್ಯ ಘಟಕ ಅಧ್ಯಕ್ಷ ಪ್ರಸನ್ನಕುಮಾರ ಮಾತನಾಡಿ, ಪ್ರಾದೇಶಿಕ ಅಸಮಾನತೆ ನಿವಾರಿಸಲು ಸಮಿತಿ ವರದಿ ಸೇರಿದಂತೆ ಹಲವು ವರದಿಗಳ ಆಧಾರದ ಮೇಲೆ ಸರ್ಕಾರಗಳು ಕಳೆದ ಐದಾರು ದಶಕಗಳಿಂದ ರೂಪಿಸಿದ ಯೋಜನೆಗಳು ಜನರ ಸಂಕಷ್ಟಗಳಿಗೆ ಪರಿಹಾರ ನೀಡುವಲ್ಲಿ ವಿಫಲವಾಗಿವೆ. 

ಈ ಭಾಗದ ಹಲವಾರು ಜನಸ್ನೇಹಿ ಮುಖಂಡರ, ಸಂಘ-ಸಂಸ್ಥೆಗಳ ಜನಾಂದೋಲನದ ಪರಿಣಾಮವಾಗಿ ಜಾರಿಗೆ ಬಂದ ಸಂವಿಧಾನದ 371 (ಜೆ) ಕಲಂ ತಿದ್ದುಪಡಿಯ ನಂತರವೂ ಪ್ರಾದೇಶಿಕ ಅಸಮಾನತೆ ಮುಂದುವರಿದಿರುವುದು ದುರದೃಷ್ಟಕರ. ಈ ಭಾಗದ ಜನಪ್ರತಿನಿ ಧಿಗಳ ಮತ್ತು ಅನುಷ್ಠಾನಾಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಅಭಿವೃದ್ಧಿಗೆ ಅಡ್ಡಿಯಾಗಿದೆ. ಹಲವು ದಶಕಗಳಿಂದ ಸಂಕಟ ಅನುಭವಿಸುತ್ತಿರುವ ಜನರೇ ಜಾಗೃತರಾಗಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು. 

ಉಪಾಧ್ಯಕ್ಷ ಮೌಲಾ ಮುಲ್ಲಾ, ಇಫಾr ಸಾಂಸ್ಕೃತಿಕ ಸಂಘಟನೆ ರಾಜ್ಯ ಅಧ್ಯಕ್ಷ ಷಣ್ಮುಖಸ್ವಾಮಿ, ಎಐಎಸ್‌ ಎಫ್‌ ರಾಜ್ಯ ಅಧ್ಯಕ್ಷ ಶಾಂತರಾಜ ಜೈನ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ, ಅಂಗನವಾಡಿ ನೌಕರರ ಫೆಡರೇಷನ್‌ ಜಿಲ್ಲಾ ಅಧ್ಯಕ್ಷ ಡಿ.ಎಚ್‌.ಕಂಬಳಿ, ಮುಖಂಡರಾದ ರಾಜಶೇಖರ, ಸಂಗಯ್ಯಸ್ವಾಮಿ, ವೆಂಕನಗೌಡ ಗದ್ರಟಗಿ, ಚಂದ್ರಶೇಖರ ಕ್ಯಾತನಟ್ಟಿ, ತಿಪ್ಪಯ್ಯಶೆಟ್ಟಿ, ಪ್ರಭಾವತಿ, ಗಿರಿಜಮ್ಮ, ಅಮರಮ್ಮ, ಆದಿಮನಿ ಲಕ್ಷ್ಮೀ, ಶಾಂತಾ ಗೊರೇಬಾಳ, ಗೌರಮ್ಮ ಅಲಬನೂರು, ಮಲ್ಲೇಶ ಬಡಿಗೇರ ಇದ್ದರು.

ಜಾಥಾ: ಬಹಿರಂಗ ಸಭೆಗೂ ಮುನ್ನ ತಾಲೂಕಿನ ಜವಳಗೇರಾ ಗ್ರಾಮಕ್ಕೆ ಆಗಮಿಸಿದ ಜಾಥಾವನ್ನು ಅಲ್ಲಿಯ ಕಾರ್ಯಕರ್ತರು ಸ್ವಾಗತಿಸಿಕೊಂಡರು. ತಾಪಂ ಮಾಜಿ ಸದಸ್ಯ ಚಂದ್ರುಭೂಪಾಲ ನಾಡಗೌಡ ಸೇರಿದಂತೆ ಜಾಥಾದ ಮುಖಂಡರ ನೇತೃತ್ವದಲ್ಲಿ ಬಹಿರಂಗ ಸಭೆ ನಡೆಯಿತು. ನಂತರ ಸಿಂಧನೂರು ಮೂಲಕ ಗುಂಜಳ್ಳಿ, ತುರ್ವಿಹಾಳ ಗ್ರಾಮಕ್ಕೆ ತೆರಳಿ ಜನಜಾಗೃತಿ ಮೂಡಿಸಲಾಯಿತು. 

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.