ಹಿಂದೂಗಳ ರಕ್ಷಕ ಛತ್ರಪತಿ ಶಿವಾಜಿ


Team Udayavani, Feb 20, 2018, 1:19 PM IST

ray-2.jpg

ರಾಯಚೂರು: ಹಿಂದೂ ಸಮಾಜದ ಮೇಲಾಗುವ ದಾಳಿಗಳನ್ನು ಪ್ರತಿರೋಧಿಸುವುದರ ಜತೆಗೆ ಹಿಂದು ಸಂಸ್ಕೃತಿ ರಕ್ಷಸುವ ಮೂಲಕ ದಿಟ್ಟತನ ಮೆರೆದ ಸಾಹಸಿ ಛತ್ರಪತಿ ಶಿವಾಜಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ| ದಸ್ತಗಿರಿಸಾಬ್‌ ದಿನ್ನಿ ಹೇಳಿದರು.

ಜಿಲ್ಲಾಡಳಿತ, ಜಿಪಂ, ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೋಮವಾರ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಆಯೋಜಿಸಿದ್ದ ಶಿವಾಜಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

1623ರಲ್ಲಿ ಜನಿಸಿದ ಶಿವಾಜಿ ಬಾಲ್ಯದಲ್ಲೇ ಕ್ರಿಯಾಶೀಲರಾಗಿದ್ದರು. ಬೆಳೆಯುತ್ತ ಅನೇಕ ಉತ್ತಮ ಗುಣಗಳನ್ನು ಅಳವಡಿಸಿಕೊಂಡು ಸಮಾಜದಲ್ಲಿ ಏಕತೆ, ಶಾಂತಿ ಮೂಡಿಸಲು ಶ್ರಮಿಸಿದರು. ಬಡತನದಲ್ಲಿ ಜನಿಸಿದರೂ ಶ್ರೀಮಂತ ವ್ಯಕ್ತಿತ್ವ ಹೊಂದಿದ್ದರು. ತಾಯಿನಾಡು ಹಾಗೂ ತಾಯಿ ಬಗ್ಗೆ ವಿಶೇಷ ಗೌರವ, ಅಕ್ಕರೆ, ಅಭಿಮಾನ ಹೊಂದಿದ್ದರು. ಜತೆಗೆ ನೆಲ, ಜಲ, ಪರಿಸರ, ರಾಜ್ಯಾಡಳಿತ, ರಾಷ್ಟ್ರಭಕ್ತಿ ಬಗ್ಗೆ ವಿಶೇಷ ಪ್ರೀತಿ, ಕಾಳಜಿ ಹೊಂದಿದ್ದರು. ಹುಟ್ಟು  ಹೋರಾಟಗಾರರಾಗಿದ್ದ ಅವರು, ಮರಾಠರನ್ನು ಒಗ್ಗೂಡಿಸಿ ಬಳ್ಳಾರಿ, ಬೆಳಗಾವಿಯವರೆಗೂ ಸಾಮ್ರಾಜ್ಯ ವಿಸ್ತರಿಸಿದ್ದರು ಎಂದರು.

1674ರಲ್ಲಿ ರಾಯಘಡದ ಕೋಟೆಯಲ್ಲಿ ಸಿಂಹಾಸನ ಏರುವ ವೇಳೆ ಶಿವಾಜಿಯವರಿಗೆ ಛತ್ರಪತಿ ಎಂಬ ಬಿರುದು ನೀಡಲಾಯಿತು. 

ಛತ್ರಪತಿ ಶಿವಾಜಿ ತನ್ನ ರಾಜ್ಯಕ್ಕೆ ಸ್ವರಾಜ್ಯ ಎಂದು ಕರೆಯುತ್ತಿದ್ದ. ಇಂದು ನ್ಯಾಯ ಮತ್ತು ಶಾಂತಿ ಸಮಾಜದಿಂದ ದೂರವಾಗಿದ್ದು, ಶಿವಾಜಿಯವರು ಅಂದಿನ ಕಾಲದಲ್ಲೇ ಶಾಂತಿ ಮತ್ತು ನ್ಯಾಯ ಪರಿಪಾಲನೆ ರೂಢಿಸಿಕೊಂಡ ವ್ಯಕ್ತಿಯಾಗಿದ್ದರು. ಹೀಗಾಗಿ ಮರಾಠ ಸಮಾಜದ ಯುವಕರು ಶಿವಾಜಿಯವರ ಸಾಮಾಜಿಕ ಕಾಳಜಿ, ಚಿಂತನೆ, ವ್ಯಕ್ತಿತ್ವ, ವಿಚಾರಧಾರೆ ಮೈಗೂಡಿಸಿಕೊಂಡು ಮಹತ್ತರ ಸ್ಥಾನಕ್ಕೆ ಬರಬೇಕೆಂದು ಸಲಹೆ ನೀಡಿದರು.

ನಗರಸಭೆ ಸದಸ್ಯ ಮಹಾಲಿಂಗ ಮಾತನಾಡಿ, ಛತ್ರಪತಿ ಶಿವಾಜಿ ಜಯಂತಿಯನ್ನು ಇನ್ನೂ ಅದ್ಧೂರಿಯಾಗಿ ಆಚರಿಸಬೇಕು. ಮುಂದಿನ ದಿನಗಳಲ್ಲಿ ನಗರಸಭೆ ಸದಸ್ಯರು ಇತರರು ಸೇರಿ ನಗರದಲ್ಲಿ ಛತ್ರಪತಿ ಶಿವಾಜಿ ವೃತ್ತ ಹಾಗೂ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಶ್ರೀ ಅಂಬಾಭವಾನಿ ದೇವಸ್ಥಾನದಲ್ಲಿ ಛತ್ರಪತಿ ಶಿವಾಜಿ ಜಯಂತಿ ನಿಮಿತ್ತ ಭಾವಚಿತ್ರ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಮೆರವಣಿಗೆ
ರಂಗಮಂದಿರ ತಲುಪಿತು. 

ನಗರಸಭೆ ಸದಸ್ಯ ಈ.ವಿನಯಕುಮಾರ, ಮರಾಠ ಕ್ಷತ್ರೀಯ ಸಮಾಜ ಸದಸ್ಯರಾದ ಹನುಮಂತಪ್ಪ, ಭೀಮರಾವ್‌ ಜಗತಾಪ್‌, ಮೋಹನ್‌ ಶಿಂಧೆ, ತುಳಜಾರಾಮ್‌, ನೀಲಮ್ಮ, ಶಿವರಾಜ್‌ ಡೋಣಿ, ಸತ್ಯನಾರಾಯಣ, ಕನ್ನಡ ಮತ್ತು ಸಂಸðತಿ ಇಲಾಖೆ ಸಹಾಯಕ ನಿರ್ದೇಶಕಿ ಬಿ.ನೀಲಮ್ಮ ಇತರರು ಉಪಸ್ಥಿತರಿದ್ದರು.  

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.