ಬೇಸಿಗೆ ರಜೆಯಲ್ಲೂ ಬಿಸಿಯೂಟ


Team Udayavani, Mar 26, 2019, 4:12 PM IST

Udayavani Kannada Newspaper
ದೇವದುರ್ಗ: ಸರ್ವೋತ್ಛ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬರಪೀಡಿತ ತಾಲೂಕು ಕೇಂದ್ರಗಳಲ್ಲಿನ
ಅನುದಾನಿತ ಮತ್ತು ಸರಕಾರಿ ಶಾಲೆಗಳಲ್ಲಿ ಬೇಸಿಗೆ ರಜೆಯಲ್ಲೂ ಮಕ್ಕಳಿಗೆ ಬಿಸಿಯೂಟ ಯೋಜನೆ ಜಾರಿಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯದ 30 ಜಿಲ್ಲೆಗಳ 156 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಬೇಸಿಗೆ ರಜೆಯಲ್ಲಿ ಸರಕಾರಿ
ಮತ್ತು ಅನುದಾನಿತ ಶಾಲೆಗಳ 1ರಿಂದ 9ನೇ ತರಗತಿ ಮಕ್ಕಳಿಗೆ ಬಿಸಿಯೂಟ ಯೋಜನೆ ಮುಂದುವರಿಸುವಂತೆ ಮತ್ತು ಇದಕ್ಕಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶ ಹೊರಡಿಸಿದೆ.
ಏನಿದು ಯೋಜನೆ: ಬೇಸಿಗೆ ರಜೆಯಲ್ಲಿ ಸರಕಾರಿ ಶಾಲೆಯಲ್ಲಿ ಬಿಸಿಯೂಟ ಯೋಜನೆಗೆ ಮಕ್ಕಳ ಪಾಲಕರಿಂದ ಒಪ್ಪಿಗೆ ಪತ್ರ
ನೀಡಿದ ಮಕ್ಕಳಿಗೆ ಬಿಸಿಯೂಟ ಉಪಹಾರ ಒದಗಿಸಲಾಗುತ್ತದೆ. ಯೋಜನೆ ಕುರಿತು ಮಾಹಿತಿ ಒದಗಿಸಿ ಎಲ್ಲ ಮಕ್ಕಳ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಬೇಕು. ಮುಖ್ಯಶಿಕ್ಷಕರು ಮಕ್ಕಳ ಪಟ್ಟಿ ತಯಾರಿಸಿ ಸಂಬಂಧಿಸಿದ ಅಧಿಕಾರಿಗಳಿಗೆ ನೀಡಬೇಕು. ಒಂದೇ ಗ್ರಾಮದಲ್ಲಿ ಎರಡೂಮೂರು ಶಾಲೆಗಳಿದ್ದಲ್ಲಿ ಕೇಂದ್ರ ಶಾಲೆಯೆಂದು ಗುರುತಿಸಿ ಉಳಿದ ಶಾಲಾ ಮಕ್ಕಳ ಪಟ್ಟಿಯನ್ನು ಕೇಂದ್ರ ಶಾಲೆಯ ಮುಖ್ಯಶಿಕ್ಷಕರಿಗೆ ನೀಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಎಸ್‌ಎಂಎಸ್‌ ಕಡ್ಡಾಯ: ಬೇಸಿಗೆ ರಜೆಯಲ್ಲಿ ಬಿಸಿಯೂಟ ಯೋಜನೆ ಕರ್ತವ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರಿಗೆ ಗಳಿಕೆ ರಜೆ ಸೌಲಭ್ಯವಿದೆ. ಶಿಕ್ಷಕರ ಮೊಬೈಲ್‌ ಸಂಖ್ಯೆಯನ್ನು ಕಡ್ಡಾಯವಾಗಿ ನೀಡಬೇಕು. ನಿತ್ಯ ಬಿಸಿಯೂಟ ಸೇವಿಸಲು ಆಗಮಿಸುವ ಮಕ್ಕಳ ಸಂಖ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಎಸ್‌ ಎಂಎಸ್‌ ಮೂಲಕ ಮಾಹಿತಿ ನೀಡಬೇಕು.
 ನೋಡಲ್‌ ಅಧಿಕಾರಿಗಳು: ಪಟ್ಟಣ ಸೇರಿ ತಾಲೂಕಿನಾದ್ಯಂತ ಸರಕಾರಿ ಶಾಲೆಯಲ್ಲಿ ಜಾರಿ ಮಾಡಿದ ಬೇಸಿಗೆ ಬಿಸಿಯೂಟ ಉಪಹಾರ ಯೋಜನೆಗೆ ತಾಲೂಕು ಹಂತದಲ್ಲಿ ಬಿಆರ್‌ಸಿ ಮತ್ತು ಕ್ಲಸ್ಟರ್‌ ಹಂತದಲ್ಲಿ ಸಿಆರ್‌ಪಿಗಳನ್ನು ನೋಡಲ್‌ ಅಧಿಕಾರಿಗಳ ಎಂದು ನೇಮಿಸಬೇಕು. ನಿಯೋಜಿತ ಅಧಿಕಾರಿಗಳು ಬಿಸಿಯೂಟದ ನಿತ್ಯ ವರದಿಯನ್ನು ಮೇಲಧಿಕಾರಿಗಳಿಗೆ ನೀಡಬೇಕು. ಕ್ಲಸ್ಟರ್‌ ಹಂತದಲ್ಲಿ ಸಿಆರ್‌ ಪಿಗಳು ಲಭ್ಯವಿಲ್ಲದಿದ್ದಲ್ಲಿ ಶಿಕ್ಷಣ ಸಂಯೋಜಕ ಅಥವಾ ಪ್ರೌಢಶಾಲಾ ಸಹ ಶಿಕ್ಷಕರನ್ನು ನೋಡಲ್‌ ಅಧಿಕಾರಿಯಾಗಿ ನೇಮಿಸಲು ಆದೇಶಿಸಲಾಗಿದೆ.
ಕೇಂದ್ರಗಳಿಗೆ ಆಹಾರ: ಕೇಂದ್ರ ಶಾಲೆಯೆಂದು ಗುರುತಿಸಿರುವ ಶಾಲಾ ಮುಖ್ಯಶಿಕ್ಷಕರು ಆಹಾರ ಧಾನ್ಯಗಳ ಬೇಡಿಕೆ ಸಲ್ಲಿಸುವ ಮುನ್ನ ಈ ಕೇಂದ್ರ ಶಾಲೆಗೆ ಜೋಡಿಸಲ್ಪಟ್ಟ ಶಾಲೆಗಳ ಮುಖ್ಯಶಿಕ್ಷಕರು ಬಿಸಿಯುಟ ಪಡೆಯಲು ಇಚ್ಚಿಸುವ ಮಕ್ಕಳ ಪಟ್ಟಿ ಕ್ರೋಢೀಕರಿಸಿ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಬೇಕು.
ಸಾದಿಲ್ವಾರು ಅನುದಾನ ಮತ್ತು ಅಡುಗೆ ಸಿಬ್ಬಂದಿ ಗೌರವಧನವನ್ನು ಮುಂಗಡವಾಗಿ ಶಾಲೆಗಳ ಖಾತೆಗೆ ಜಮಾ
ಮಾಡುವುದು ತಾಲೂಕು ಪಂಚಾಯತಿ ಅಧಿಕಾರಿ, ಅಕ್ಷರ ದಾಸೋಹ ಅಧಿಕಾರಿಗಳ ಹೊಣೆಯಾಗಿದೆ.
 ನೀರಿನ ಕೊರತೆ: ಬೇಸಿಗೆ ರಜೆಯಲ್ಲಿ ಬಿಸಿಯೂಟಕ್ಕೆ ನೀರಿನ ತೊಂದರೆ ಆಗದಂತೆ ಶಾಲೆಗೆ ನೀರು ಒದಗಿಸುವುದು ಗ್ರಾಪಂ
ಅಭಿವೃದ್ಧಿ ಅಧಿಕಾರಿಗಳ ಹೊಣೆಯಾಗಿದ್ದು, ಈ ಕುರಿತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ನಿಗಾ ವಹಿಸಬೇಕೆಂದು
ಸೂಚನೆ ನೀಡಲಾಗಿದೆ. ಬೇಸಿಗೆ ರಜೆಯಲ್ಲಿ ಬರಪೀಡಿತ ತಾಲೂಕುಗಳ ಶಾಲಾ ಮಕ್ಕಳಿಗೆ ಬಿಸಿಯೂಟ ಒದಗಿಸುವ
ಯೋಜನೆ ಯಶಸ್ಸಿಗೆ ಈಗಾಗಲೇ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದೆ.
ಬರ ಪೀಡಿತ ತಾಲೂಕುಗಳ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಯೋಜನೆ ಜಾರಿ ಮಾಡಲಾಗಿದೆ. ಈಗಾಗಲೇ ಶಾಲಾ ಮುಖ್ಯಶಿಕ್ಷಕರಿಂದ ಬಿಸಿಯೂಟ ಸೇವಿಸುವ ಮಕ್ಕಳ ಸಂಖ್ಯೆ ಪಡೆಯಲಾಗಿದೆ. ಕಾರ್ಯಕ್ರಮ ಯಶಸ್ಸಿಗೆ ಸಿದ್ದತೆ ಮಾಡಲಾಗಿದೆ.
 ಬಂದೋಲಿಸಾಬ, ಅಕ್ಷರ ದಾಸೋಹ ಅಧಿಕಾರಿ, ದೇವದುರ್ಗ
„ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.