ಹುಲಿಗುಡ್ಡ-ಪರಾಪುರ ಕೆರೆ ನೀರು ಪೋಲು

ಜಮೀನುಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ಅಧಿಕಾರಿಗಳು ವಿಫಲ

Team Udayavani, Oct 31, 2020, 5:47 PM IST

ಹುಲಿಗುಡ್ಡ-ಪರಾಪುರ ಕೆರೆ ನೀರು ಪೋಲು

ದೇವದುರ್ಗ: ತಾಲೂಕಿನ ಹುಲಿಗುಡ್ಡ, ಪರಾಪುರ ಗ್ರಾಮದ ಕೆರೆಯ ನೀರು ನವೀಲಗುಡ್ಡ ಗ್ರಾಮದ ಹಳ್ಳದ ಮಾರ್ಗವಾಗಿ ಕೃಷ್ಣಾನದಿಗೆ ಹರಿದು ಹೋಗುತ್ತಿವೆ.

ಇದರಿಂದ ಹತ್ತಾರೂ ಹಳ್ಳಿಗಳು ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿದ್ದು, ನದಿಗೆ ಪೋಲಾಗುತ್ತಿರುವ ನೀರು ಜಮೀನುಗಳಿಗೆ ನೀರುಣಿಸುವ ಯೋಜನೆ ಕೈಗೊಳ್ಳುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ವಿಫಲವಾಗಿದ್ದಾರೆ. ಬೇಸಿಗೆ ಅವಧಿ  ಯಲ್ಲೋ ಹಳ್ಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುತ್ತವೆ. ಕೆರೆಯಿಂದ ಪೋಲಾಗುತ್ತಿರುವ ನೀರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಉದ್ದೇಶಿಸಿ ಯೋಜನೆಯೊಂದು ರೂಪಿಸಿ ರೈತರಿಗೆ ಅನುಕೂಲ ಕಲ್ಪಿಸುವ ಯೋಜನೆ ಕ್ರಮ ವಹಿಸುವಲ್ಲಿ ಎಡವಿದ್ದಾರೆ. ನವೀಲಗುಡ್ಡ, ಜಂಬಲದಿನ್ನಿ ಎರಡು ಗ್ರಾಮದ ಮಧ್ಯ ದೊಡ್ಡ ಪ್ರಮಾಣದ ಹಳ್ಳ ಹರಿಯುತ್ತಿದೆ.

ನದಿಗೆ ಪೋಲಾಗುತ್ತಿರುವ ನೀರನ್ನು ಸದ್ಬಳಕೆಮಾಡಿಕೊಂಡು, ನೀರಾವರಿ ವಂಚಿತ ಜಮೀನುಗಳಿಗೆ ನೀರುಣಿಸುವ ಯೋಜನೆಗೆ ಮಂಕು ಕವಿದಿದೆ. ಈ ಭಾಗದಲ್ಲಿ ಏತ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರ ಪ್ರಯತ್ನ ಸರಕಾರ ಮಟ್ಟದಲ್ಲಿ ಮುಂದುವರಿದಿದೆ ಎನ್ನಲಾಗುತ್ತಿದೆ.

ವಂಚಿತ ಹಳ್ಳಿಗಳು: ತಾಲೂಕಿನ ಬಹುತೇಕ ಗ್ರಾಮಗಳು ನೀರಾವರಿ ಸೌಲಭ್ಯ ವಂಚಿತಗೊಂಡಿವೆ. ಮಳೆ, ಹಳ್ಳದ ನೀರು ಬೋರ್‌ವೆಲ್‌ ನಂಬಿ ರೈತರು ಕೃಷಿ ಚಟುವಟಿಕೆ ಅವಲಂಬಿತರಾಗಿದ್ದಾರೆ.

ಆಗಾಗ ಮಳೆರಾಯನ ಮುನಿಸು ಸಮರ್ಪಕವಾಗಿ ವಿದ್ಯುತ್‌ ಪೂರೈಕೆ ವಿಳಂಬ ಹೀಗೆ ಒಂದಿಲ್ಲೊಂದು ಈ ಭಾಗದ ರೈತರು ಸಮಸ್ಯೆ ಎದುರಿಸುವಂತಾಗಿದೆ. ಹೇರುಂಡಿ, ಗಾಜಲದಿನ್ನಿ, ಮುಕ್ಕನಾಳ, ಅಮರಾಪೂರು, ಉಣಿಚಮರದೊಡ್ಡಿ, ಅಂಜಳ, ಜಂಬಲದಿನ್ನಿ, ಕರಿಗುಡ್ಡ ಸೀಮಾಂತರವ್ಯಾಪ್ತಿಯ ಹಳ್ಳದ ಆಸುಪಾಸಿನ ಸಾವಿರಾರೂ ಎಕರೆ ಪ್ರದೇಶದಲ್ಲಿರುವ ಜಮೀನುಗಳಿಗೆ ಹಳ್ಳದ ನೀರುಣಿಸುವ ಯೋಜನೆ ಕೈಗೊಳ್ಳಬೇಕಾಗಿತ್ತು. ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ರೈತರು ಗೈರಾಣು ಭೂಮಿ ಸಾಗುವಳಿ ಮಾಡಲಾಗುತ್ತಿದೆ.

ಕೃಷಿ ಚಟುವಟಿಕೆ: ಹುಲಿಗುಡ್ಡ, ಪರಾಪುರ ಕೆರೆಯಿಂದ ಹಳ್ಳದ ಮೂಲಕ ಕೃಷ್ಣಾನದಿಗೆ ನೀರು ಪೋಲಾಗುತ್ತಿವೆ. ಹಳ್ಳದ ಅನುಪಾಸಿನಲ್ಲಿರುವ ನೂರಾರು ಹೆಕ್ಟೇರ್‌ ಪ್ರದೇಶದ ಜಮೀನಿನ ರೈತರು ಬಿತ್ತನೆ ಸಂದರ್ಭ ಬೆಳೆಗಳಿಗೆ ಮೋಟರ್‌ನಿಂದ ಹಳ್ಳದ ನೀರು ಸದ್ಬಳಕೆ ಮಾಡಿಕೊಂಡು ಕೃಷಿ ಚಟುವಟಿಕೆ ಆರಂಭಿಸಿದ್ದಾರೆ. ಪೋಲಾಗುವ ನೀರನ್ನು ಬಳಕೆ ಮಾಡಿಕೊಂಡು, ನೀರಾವರಿಸೌಲಭ್ಯ ವಂಚಿತ ಜಮೀನುಗಳಿಗೆ ನೀರುಣಿಸುವ ಯೋಜನೆಗೆ ಅಧಿಕಾರಿಗಳು ಮುಂದಾಗಬೇಕಿತ್ತು. ಕೆಲ ರೈತರು ಬಾಡಿಗೆ ಮೋಟರ್‌ಗಳು ತಂದು ಹಳ್ಳದ ನೀರು ಬೆಳೆಗಳಿಗೆ ಬಳಕೆ ಮಾಡಲಾಗುತ್ತಿದೆ.

ಜಾನುವಾರುಗಳಿಗೆ ಕುಡಿಯಲು ಹಳ್ಳದ ನೀರು ಅನುಕೂಲವಾಗಿದೆ. ಎಸ್‌ಸಿ ಎಸ್‌ಟಿ ಯೋಜನೆ: ರಾಜ್ಯ ಸರಕಾರ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ಜನರ ಅಭಿವೃದ್ಧಿಗಾಗಿಹರಿಜನ ಗಿರಿಜನ ಕಲ್ಯಾಣ ಯೋಜನೆಅಡಿಯಲ್ಲಿ ನೂರಾರು ಕೋಟಿ ರೂ. ಅನುದಾನ ನೀಡಲಾಗುತ್ತಿದೆ. ಈ ಯೋಜನೆ ಮೂಲಕ ನೀರಾವರಿ ಸೌಲಭ್ಯ ವಂಚಿತ ಪ್ರದೇಶಗಳಿಗೆ ನೀರುಣಿಸುವ ಏತ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂಬುದು ಈ ಭಾಗದ ರೈತರ ಬೇಡಿಕೆಯಾಗಿದೆ. ಹರಿಜನ ಗಿರಿಜನ ಯೋಜನೆಯಲ್ಲಿ ವಂಚಿತ ಸಮುದಾಯದ ಜನರನ್ನು ಆರ್ಥಿಕವಾಗಿ ಬದಲಾವಣೆ ಮಾಡುವ ಚಿಂತನೆ ಅಧಿಕಾರಿಗಳು ಮಾಡಬೇಕು ಎಂದು ರೈತರಾದ ಶಿವಪ್ಪ, ಹನುಮಂತ ಆಗ್ರಹಿಸಿದರು.

ನೂರಾರು ಹೆಕ್ಟೇರ್‌ ಪ್ರದೇಶದ ಜಮೀನಗಳಿಗೆ ಹಳ್ಳದ ನೀರು ನೀರು ಹಂಚಿಕೆ ಮಾಡುವ ಯೋಜನೆ ವಿಫಲವಾಗಿದೆ. ಹಲವು ಬಾರಿ ಹೋರಾಟ ಕೈಗೊಳ್ಳಲಾಗಿದೆ. ಅಧಿಕಾರಿಗಳ ಹುಸಿ ಭರವಸೆಗೆ ಈ ಭಾಗದ ರೈತರು ಸಂಕಷ್ಟ ಎದುರಿಸುವಂತಾಗಿದೆ. – ಮಲ್ಲಯ್ಯ ಕಟ್ಟಿಮನಿ, ಕೆಆರ್‌ಎಸ್‌ ತಾಲೂಕು ಅಧ್ಯಕ್ಷ.

 

ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.