30ರಂದು ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ
Team Udayavani, Jan 22, 2018, 4:17 PM IST
ಸಿಂಧನೂರು: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪುಣ್ಯತಿಥಿ ಪ್ರಯುಕ್ತ ಜ.30ರಂದು ನಗರದಲ್ಲಿ ಸೌಹಾರ್ದ ಕರ್ನಾಟಕಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಸೌಹಾರ್ದ ಸಂದೇಶ ಸಾರಲು ದಲಿತ ಮತ್ತು ಪ್ರಗತಿಪರ ಸಂಘಟನೆಗಳ
ಒಕ್ಕೂಟದ ಮುಖಂಡರು ನಿರ್ಣಯಿಸಿದ್ದಾರೆ.
ನಗರದ ತಾಪಂ ಸಭಾಂಗಣದಲ್ಲಿ ರವಿವಾರ ಪೂರ್ವಭಾವಿ ಸಭೆ ನಡೆಸಿದ ಮುಖಂಡರು ಈ ಕುರಿತು ನಿರ್ಣಯ ಕೈಗೊಂಡರು. ಮನುಜಮತ ಬಳಗದ ಅಧ್ಯಕ್ಷ ಡಿ.ಎಚ್. ಕಂಬಳಿ ಮಾತನಾಡಿ, ನಮ್ಮದು ಸೌಹಾರ್ದ ಕರ್ನಾಟಕ. ಇಲ್ಲಿ ಜಾತ್ಯತೀತತೆ ಆಳವಾಗಿ ಬೇರುಬಿಟ್ಟಿದೆ. ಇದನ್ನು ಬಸವಣ್ಣನವರಿಂದ ಹಿಡಿದು ಅನೇಕ ಶರಣರು, ಸಾಧು, ಸಂತರು, ಸೂಫಿಗಳು ವೈಚಾರಿಕ ನೆಲೆಗಟ್ಟಿನಿಂದ ಬಲಗೊಳಿಸಿದ್ದಾರೆ. ಆದರೆ ಇತ್ತೀಚೆಗೆ ಸಂಘ ಪರಿವಾರ ಹಾಗೂ ಮೂಲಭೂತವಾದಿಗಳು ಜಾತಿ, ಧರ್ಮ, ದೇವರು, ಗೋರಕ್ಷಣೆ ಮತ್ತಿತರ ಭಾವನಾತ್ಮಕ ವಿಚಾರಗಳನ್ನು ಕೆದಕಿ
ಕೋಮು ದ್ವೇಷದ ಜ್ವಾಲೆ ಹರಡಿಸಿ ರಾಜ್ಯದಲ್ಲಿ ಅಶಾಂತಿಯ ವಾತವರಣ ಸೃಷ್ಟಿಸುತ್ತಿದ್ದಾರೆ.
ಅಲ್ಲದೆ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಸಂವಿಧಾನ ಬದಲಿಸುತ್ತೇವೆ, ಜಾತ್ಯತೀತರು ತಂದೆ-ತಾಯಿಗೆ ಹುಟ್ಟಿಲ್ಲ ಹೀಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಇದರ ವಿರುದ್ಧ ಬಹುಸಂಖ್ಯಾತರೆಲ್ಲರೂ ಒಗ್ಗೂಡಿ ಸಂಘಟಿತ ಹೋರಾಟ ನಡೆಸುವ ಮೂಲಕ ಬಿಸಿ ಮುಟ್ಟಿಸಬೇಕಾದ ಅನಿವಾರ್ಯತೆಯಿದೆ ಎಂದು ಹೇಳಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶೇಕ್ಷಾ ಖಾದ್ರಿ ಮಾತನಾಡಿ, ಜ.30ರಂದು ಮಧ್ಯಾಹ್ನ 3 ಗಂಟೆಗೆ ಗಾಂಧಿ ವೃತ್ತದಿಂದ
ರ್ಯಾಲಿ ಆರಂಭಿಸಿ, ಬಸವೇಶ್ವರ ವೃತ್ತ, ಟಿಪ್ಪು ಸುಲ್ತಾನ್ ವೃತ್ತ, ಹಳೆಬಜಾರ್ ರಸ್ತೆ, ರಾಣಿ ಚನ್ನಮ್ಮ ವೃತ್ತ, ಕನಕದಾಸ ವೃತ್ತ ಮಾರ್ಗವಾಗಿ ಪುನಃ ಗಾಂಧಿ ವೃತ್ತಕ್ಕೆ ತಲುಪಿ ಮಾನವ ಸರಳಿ ನಿರ್ಮಿಸಬೇಕು. ಇಲ್ಲವೇ ಮಿನಿವಿಧಾನಸೌಧ
ಆವರಣದಲ್ಲಿ ಮಾನವ ಸರಪ ನಿರ್ಮಿಸಬೇಕು. ವಿದ್ಯಾರ್ಥಿ, ಯುವಜನರು, ವಿವಿಧ ಕೂಲಿ ಕಾರ್ಮಿಕರು, ದಲಿತಪರ, ಕನ್ನಡಪರ, ಪ್ರಗತಿಪರ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕೋರಿದರು.
ಜಾತಿ ನಿರ್ಮೂಲನಾ ಚಳವಳಿ ರಾಜ್ಯ ಸಂಚಾಲಕ ಎಚ್.ಎನ್.ಬಡಿಗೇರ, ಸಾಹಿತಿ ನರಸಿಂಹಪ್ಪ ಜನತಾಕಾಲೋನಿ, ದಲಿತ ಮುಖಂಡ ಆರ್.ಬೋನ್ವೆಂಚರ್, ಉಪನ್ಯಾಸಕ ಚಂದ್ರಶೇಖರ ಗೊರೇಬಾಳ, ಮುಸ್ಲಿಂ ಮುಖಂಡ ಬಾಬರಪಾಷಾ ವಕೀಲ, ಎಸ್.ಎಂ.ಖಾದ್ರಿ ಸಾಲಗುಂದಾ, ಅಶೋಕ ನಂಜಲದಿನ್ನಿ ಮಾತನಾಡಿದರು. ಮುಖಂಡರಾದ ವೆಂಕನಗೌಡ ಗದ್ರಟಗಿ, ಹಾಸೀಮ್ಅಲಿ ಜಾಗೀರದಾರ, ಬಸವರಾಜ ಬಾದರ್ಲಿ, ಶಂಕರ ಗುರಿಕಾರ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ