ಧರ್ಮ -ಜಾತಿಗಿಂತ ಮಾನವೀಯತೆ ಮಿಗಿಲು


Team Udayavani, Nov 22, 2018, 12:31 PM IST

ray-1.jpg

ಸಿಂಧನೂರು: ಮನುಷ್ಯ-ಮನುಷ್ಯನನ್ನು ಪ್ರೀತಿಸಬೇಕಿದೆ. ಧರ್ಮ, ಜಾತಿಗಿಂತಲೂ ಮಾನವೀಯತೆ ದೊಡ್ಡದಾಗಿದೆ ಎಂದು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಇಸ್ಲಾಂ ಧರ್ಮದ ಸಂಸ್ಥಾಪಕ ಮೊಹಮ್ಮದ್‌ ಪೈಗಂಬರ್‌ ರವರ ಜನ್ಮದಿನಾಚರಣೆ ಅಂಗವಾಗಿ ನಗರದ ನೂರಾನಿ ಮಸ್ಜಿದ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಧರ್ಮಗಳ ದಾರ್ಶನಿಕರು, ಸೂಫಿಗಳು, ಸಂತರು ಮಾನವೀಯತೆ, ಸಮಾನತೆ,
ಸೌಹಾರ್ದತೆ ಬೋಧಿಸಿದ್ದಾರೆ. ಅವರನ್ನು ಯಾವುದೇ, ಜಾತಿ, ಧರ್ಮಕ್ಕೆ ಸೀಮಿತಗೊಳಿಸಬಾರದು. ಪೈಗಂಬರ್‌ ಸೇರಿದಂತೆ ವಿಶ್ವದ ಶ್ರೇಷ್ಠ ದಾರ್ಶನಿಕರ ಜಯಂತಿಗಳು ಭಾಷಣ, ಮೆರವಣಿಗೆಗೆ ಸೀಮಿತವಾಗಬಾರದು. ಅವರ ಆಶಯಗಳು, ಆದರ್ಶಗಳು ಯುವ ಪೀಳಿಗೆಗೆ ತಲುಪಿಸುವ ಕೆಲಸಗಳಾಗಬೇಕಾಗಿದೆ. ಮನುಷ್ಯನನ್ನು ಮೀರಿದ ಒಂದು ಶಕ್ತಿ ಇದೆ. ನಾವು ವೈಜ್ಞಾನಿಕವಾಗಿ ಎಷ್ಟೇ ಬೆಳೆದರೂ ಹುಟ್ಟು-ಸಾವು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಆ ಶಕ್ತಿ ನಮ್ಮನ್ನು ನಿಯಂತ್ರಿಸುತ್ತಿದೆ ಎಂದರು.

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ಎಲ್ಲ ದಾರ್ಶನಿಕರು ಮನುಕುಲದ ಒಳಿತಿಗಾಗಿ ಶ್ರಮಿಸಿದ್ದಾರೆ. ಇಡೀ ಮನುಕುಲ ಶಾಂತಿ, ಸಹಬಾಳ್ವೆಯಿಂದ ಬಾಳಬೇಕು. ಸೌಹಾರ್ದಯುತ ಬದುಕು ನಮ್ಮದಾಗಬೇಕು. ದಾರ್ಶನಿಕರ ಜಯಂತಿಗಳನ್ನು ಆಚರಿಸುವಾಗ ಮೆರವಣಿಗೆಗಿಂತಲೂ ಅವರ ವಿಚಾರಧಾರೆಗಳನ್ನು ಅರಿತು ಪಾಲಿಸಲು ಆದ್ಯತೆ ನೀಡಬೇಕು. ಅಂದಾಗ ಮಾತ್ರ ಜಯಂತಿಗಳು ಅರ್ಥಪೂರ್ಣವಾಗುತ್ತವೆ. ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನೇ ಪ್ರದಿಪಾದಿಸಿವೆ. ಕ್ಷುಲ್ಲಕ ವಿಚಾರಗಳಿಂದ
ಸಮಾಜ ಸ್ವಾಸ್ಥ್ಯ ಕದಡುವ ಕಲಸ ಆಗಬಾರದು ಎಂದು ಹೇಳಿದರು.

ಪ್ರದೇಶ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸವನಗೌಡ ಬಾದರ್ಲಿ ಮಾತನಾಡಿ, ಸಮಾಜದಲ್ಲಿ ವೈರತ್ವ ಮರೆತು ಸಹೋದರತೆಯಿಂದ ಜೀವನ ಮಾಡಬೇಕು. ಮನುಕುಲ ಸೌಹಾರ್ದತೆಯಿಂದ ಬಾಳಬೇಕು ಎನ್ನುವ ಸಂದೇಶವನ್ನು ಮೊಹಮ್ಮದ್‌ ಪೈಗಂಬರ್‌ ನೀಡಿದ್ದಾರೆ ಎಂದರು. ಜಿಪಂ ಸದಸ್ಯ ಎನ್‌.ಶಿವನಗೌಡ ಗೊರೇಬಾಳ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಎಂ.ದೊಡ್ಡಬಸವರಾಜ, ನಗರಸಭೆ
ಸದಸ್ಯರಾದ ಮುರ್ತುಜಾ ಹುಸೇನ್‌, ಶಬ್ಬೀರ್‌ ಅಹ್ಮದ್‌, ಜಿಲಾನಿಪಾಷಾ, ಎಚ್‌.ಬಾಷಾ, ಮಾಜಿ ಸದಸ್ಯ ಹಾಜಿ ಮಸ್ತಾನ್‌,
ಮುಖಂಡರಾದ ಗಿರಾಮಿಪಾಷಾ ಜಾಹಗೀರದಾರ, ಎಚ್‌. ಎನ್‌.ಬಡಿಗೇರ, ಎಸ್‌.ಶರಣೇಗೌಡ, ರಾಜುಗೌಡ ಬಾದರ್ಲಿ,
ಖಾಜಿ ಮಲ್ಲಿಕ್‌, ಬಾಬರ್‌ ಪಾಷಾ ವಕೀಲರು, ಜಮಾಅತೆ ಇಸ್ಲಾಂ ಅಧ್ಯಕ್ಷ ಹುಸೇನ ಬಾಷಾ, ನದೀಮ್‌ ಮುಲ್ಲಾ, ಅಶೋಕಗೌಡ ಗದ್ರಟಗಿ, ಖಾಜಾ ರೌಡಕುಂದಾ, ಡಿವೈಎಸ್‌ಪಿ ವಿಶ್ವನಾಥ ಎಚ್‌.ಕುಲಕರ್ಣಿ ಇತರರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.