ಮಸ್ಕಿ ಪುರಸಭೆ ಕಚೇರಿ ಮುಂದೆ ಹೈಡ್ರಾಮಾ


Team Udayavani, Dec 16, 2021, 4:30 PM IST

23masky

ಮಸ್ಕಿ: ಮಸ್ಕಿ ಪುರಸಭೆಗೆ ನಾಮಪತ್ರ ಸಲ್ಲಿಕೆ ಕೊನೆಯ ದಿನ ಸಮಯ ಗೊಂದಲದಿಂದಾಗಿ ಕಚೇರಿ ಮುಂದೆ ಕೆಲಕಾಲ ಹೈಡ್ರಾಮ ನಡೆದ ಪ್ರಸಂಗ ಬುಧವಾರ ನಡೆಯಿತು.

ನಾಮಪತ್ರ ಸಲ್ಲಿಸಲು ಬುಧವಾರ ಮಧ್ಯಾಹ್ನ 3ಗಂಟೆ ಕೊನೆ ಸಮಯ ಆಗಿತ್ತು. 19 ವಾರ್ಡ್‌ನ ಪಕ್ಷವೊಂದರ ಅಭ್ಯರ್ಥಿಯೊಬ್ಬರು ನಾಮಪತ್ರ ಸಲ್ಲಿಸಲು ಬಂದಾಗ ಮತ್ತೊಂದು ಪಕ್ಷದ ಕಾರ್ಯಕರ್ತರು ಅಡ್ಡಿ ಪಡಿಸಿದರು. ಇದರಿಂದ ಬಿಜೆಪಿ, ಜೆಡಿಎಸ್‌ ಹಾಗೂ ಕೆಆರ್‌ಎಸ್‌ ಪಕ್ಷದ ಅಭ್ಯರ್ಥಿಗಳು ಚುನಾವಣಾಧಿಕಾರಿ ಜೊತೆ ಮಾತಿನ ಚಕಮಕಿ ನಡೆಸಿದ್ದರಿಂದ ಕೆಲ ಕಾಲ ಬೀಗುವಿನ ವಾತಾವರಣ ನಿರ್ಮಾಣಗೊಂಡಿತು.

ಸುದ್ದಿ ತಿಳಿದು ಕಚೇರಿಗೆ ದೌಡಾಯಿಸಿದ ನಾಲ್ಕು ಪಕ್ಷಗಳ ಕಾರ್ಯಕರ್ತರು, ಅಧಿಕಾರಿ ಜೊತೆ ಮಾತಿನ ಚಕಮಕಿ ನಡೆಸಿದರು. ಸುದ್ದಿ ತಿಳಿಯುತ್ತಲೇ ತಹಶೀಲ್ದಾರ್‌ ಕವಿತಾ ಆರ್‌. ಸರ್ಕಲ್‌ ಇನ್‌ಸ್ಪೆಕ್ಟರ್‌ ಸಂಜೀವ್‌ ಕುಮಾರ, ಸಬ್‌ ಇನ್‌ ಸ್ಪೆಕ್ಟರ್‌ ಸಿದ್ಧರಾಮ ಸ್ಥಳಕ್ಕೆ ಆಗಮಿಸಿ ಕಾರ್ಯಕರ್ತರನ್ನು ಚದುರಿಸಿದರು.

ಹಾಲಿ-ಮಾಜಿ ಹಾಜರು

ಘಟನೆ ವಿಷಯ ತಿಳಿದು ಶಾಸಕ ಆರ್‌. ಬಸನಗೌಡ ತುರ್ವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆ ಕಚೇರಿಗೆ ಆಗಮಿಸಿದರು. ಸಮಯ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾಧಿಕಾರಿ ರಂಗನಾಥ ಅವರೊಂದಿಗೆ ಮಾತುಕತೆ ನಡೆಸಿದರು. ಅಲ್ಲದೇ ತಹಶೀಲ್ದಾರ್‌, ಪೊಲೀಸ್‌ ಅಧಿಕಾರಿಗಳ ಜತೆಗೂ ವಾಗ್ವಾದ ನಡೆಸಿದರು.

ಚುನಾವಣಾ ಆಯೋಗದ ನಿರ್ದೇಶನದ ಪ್ರಕಾರ ಕೆಲಸ ಮಾಡಿ ಯಾಕೆ ಹೀಗೆ ಗೊಂದಲ ಮಾಡುತ್ತೀರಿ? 3ಗಂಟೆಯೊಳಗೆ ಬಾರದೇ ಇರುವ ಅಭ್ಯರ್ಥಿಗಳ ನಾಮಪತ್ರ ತೆಗೆದುಕೊಳ್ಳುವುದು ಏಕೆ? ಕೆಲವರು ದಾಖಲೆ ನೀಡಲು ಸಮಯ ಮೀರಿ ಬಂದಿದ್ದಾರೆ. ಅಂತವರಿಂದ ದಾಖಲೆ ಪಡೆಯುವುದು ಯಾಕೆ? ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ತಹಶೀಲ್ದಾರ್‌ನ್ನು ಪ್ರಶ್ನಿಸಿದರು.

ಇನ್ನು ಹಾಲಿ ಶಾಸಕ ಆರ್‌.ಬಸನಗೌಡ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌ ಯದ್ದಲದಿನ್ನಿ ತಹಶೀಲ್ದಾರ್‌ ಜತೆ ಮಾತುಕತೆ ನಡೆಸಿದರು. ಈಗ ಬಂದ ಎಲ್ಲರ ನಾಮಪತ್ರ ಪಡೆಯಿರಿ, ಪರಿಶೀಲನೆ ವೇಳೆ ದಾಖಲೆ ನೋಡಬೇಕು ಎಂದರು. ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಿ ಅವರ ನಿರ್ದೇಶನದಂತೆ ಕೆಲಸ ಮಾಡಲಾಗುತ್ತದೆ ಎಂದು ತಹಶೀಲ್ದಾರ್‌ ಪ್ರತಿಕ್ರಿಯೆ ನೀಡಿದರು.

ನೂಕು ನುಗ್ಗಲು

23 ವಾರ್ಡ್‌ಗಳಿಗೆ ನಾಮಪತ್ರ ಸಲ್ಲಿಸಲು ಬುಧವಾರ ಕೊನೆ ದಿನವಾಗಿದ್ದರಿಂದ ಪುರಸಭೆ ಒಳಗೆ ವಿವಿಧ ರಾಜಕೀಯ ಪಕ್ಷಗಳ ಜೊತೆಗೆ ಪಕ್ಷೇತರರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾದ ಘಟನೆ ನಡೆಯಿತು. 1ರಿಂದ 11 ಹಾಗೂ 12ರಿಂದ 23 ಎರಡು ಚುನಾವಣೆ ಕಚೇರಿಗಳ ಮುಂದೆ ಆಕಾಂಕ್ಷೆಗಳು ತಮ್ಮ-ತಮ್ಮ ದಾಖಲೆಗಳನ್ನು ಹಿಡಿದು ಸರದಿ ಸಾಲಿನಲ್ಲಿ ನಿಂತಿದ್ದ ದೃಶ್ಯ ಕಂಡು ಬಂತು.

ಟಾಪ್ ನ್ಯೂಸ್

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.