ಟಿಬಿ ಡ್ಯಾಂ ವಿಚಾರಕ್ಕೆ ಬಂದರೆ ಕಾನೂನು ಹೋರಾಟ


Team Udayavani, Jan 5, 2018, 3:30 PM IST

Rahul-1.jpg

ರಾಯಚೂರು: ತುಂಗಭದ್ರಾ ಜಲಾಶಯ ದಿಂದ ಪಾವಗಡಕ್ಕೆ ನೀರು ಪೂರೈಸಲು ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಧಾರ ಈ ಭಾಗಕ್ಕೆ ದೊಡ್ಡ ದ್ರೋಹ ಎಸಗಲಿದೆ. ಈ ಕೂಡಲೇ ಯೋಜನೆ ಕೈಬಿಡಬೇಕು. ಇಲ್ಲವಾದರೆ ಕಾನೂನು
ಹೋರಾಟಕ್ಕೂ ಸಿದ್ಧ ಎಂದು ವಾಣಿಜ್ಯೋದ್ಯಮ ಸಂಘದ ಜಿಲ್ಲಾಧ್ಯಕ್ಷ ತ್ರಿವಿಕ್ರಮ ಜೋಶಿ ಎಚ್ಚರಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಯ ರೈತರ ಜೀವನಾಡಿಯಾದ ಈ ಜಲಾಶಯ ಲಕ್ಷಾಂತರ ಜನರಿಗೆ ಕುಡಿಯುವ ನೀರೊದಗಿಸುತ್ತಿದೆ. ಆದರೆ, ಈಗ ಕೇವಲ
2.5 ಟಿಎಂಸಿ ಅಡಿ ನೀರು ಪಡೆಯುವುದಾಗಿ ಹೇಳುವ ಸರ್ಕಾರ ಮುಂದೆ ಒತ್ತಡ ಬಂದು ಯೋಜನೆ ವಿಸ್ತರಿಸಿದರೂ ಅಚ್ಚರಿಯಿಲ್ಲ. ಹೀಗಾಗಿ ಅದಕ್ಕೆ ಈಗಲೇ ಕಡಿವಾಣ ಹಾಕಬೇಕು. ಇದು ಬೇರೆ ಬೇರೆ ತಾಲೂಕುಗಳಿಗೆ ನೀರೊದಗಿಸುವ ಹುನ್ನಾರವಾಗಿದೆ ಎಂದರು.

ಇಂಥ ನಿರ್ಧಾರದ ಬಗ್ಗೆ ಸಚಿವ ಸಂಪುಟ ಸದಸ್ಯರಿಗೆ ಹೊರತಾಗಿಸಿ ಮತ್ಯಾವ ಜನಪ್ರತಿನಿಧಿಗಳಿಗೆ ಮಾಹಿತಿ ಇರಲಿಕ್ಕಿಲ್ಲ. ಇಲ್ಲವಾದಲ್ಲಿ ಅದಕ್ಕೆ ವಿರೋಧ ವ್ಯಕ್ತವಾಗುತ್ತಿತ್ತು.
 
ಈ ಕೂಡಲೇ ನಿರ್ಣಯ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜನಪ್ರತಿನಿಧಿಗಳ ನಿಯೋಗ ಮನವಿ ಸಲ್ಲಿಸಲಿದ್ದು, ಇಲ್ಲವಾದಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ತಿಳಿಸಿದರು.

ಜಲಾಶಯದ ಹಿನ್ನೀರಿನಲ್ಲಿ 2.3 ಟಿಎಂಸಿ ಅಡಿ ನೀರನ್ನು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸಲು ಸಚಿವ ಸಂಪುಟ 2,350 ಕೋಟಿ ರೂ. ಯೋಜನೆಗೆ ಸಮ್ಮತಿ ನೀಡಿದೆ. ಜಲಾಶಯದಲ್ಲಿ ಕುದುರೆಮುಖ, ಬಳ್ಳಾರಿ ಸೇರಿ ವಿವಿಧೆಡೆ ನಡೆಸಿದ ಗಣಿಗಾರಿಕೆಯಿಂದ ಸುಮಾರು 30ರಿಂದ 35 ಟಿಎಂಸಿ ಅಡಿ ಹೂಳು ತುಂಬಿದೆ. ಜತೆಗೆ 20 ಟಿಎಂಸಿ ಅಡಿ ನೀರು ಆವಿಯಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಮೂರು ಜಿಲ್ಲೆಗಳ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು ಅಸಮರ್ಪಕವಾಗಿ ಲಭ್ಯವಾಗುತ್ತಿದ್ದು, ಇನ್ನು ಯೋಜನೆ ಜಾರಿಗೊಂಡಲ್ಲಿ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ ಸಂಕಷ್ಟ ಎದುರಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಂಘದ ಸದಸ್ಯರಾದ ಹರವಿ ನಾಗನಗೌಡ, ಜಗದೀಶ ಗುಪ್ತಾ, ಎಂ.ಎನ್‌.ಮೂರ್ತಿ, ಜಂಬಣ್ಣ ಯಕ್ಲಾಸಪುರ ಇದ್ದರು.

ಪಾವಗಡಕ್ಕೆ ತುಂಗಭದ್ರಾ ನೀರು; ಮೂರು ಜಿಲ್ಲೆಗಳಿಗೆ ಅನ್ಯಾಯ ಸಿಂಧನೂರು: ತುಂಗಭದ್ರಾ ನೀರನ್ನು ಪಾವಗಡಕ್ಕೆ
ಬಿಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿದ್ದು, ಇದರಿಂದ ಮೂರು ಜಿಲ್ಲೆಗಳ ಜನತೆಗೆ ಅನ್ಯಾಯವಾಗಿದೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂಮೂರು ವರ್ಷಗಳಿಂದ
ಮಳೆ ಬರದೆ ಇರುವುದರಿಂದ ತುಂಗಭದ್ರಾ ಜಲಾಶಯ ತುಂಬಿಲ್ಲ. ಇದರಿಂದ ರೈತರು ಬೆಳೆ ಇಲ್ಲದೆ ಕಷ್ಟದಲ್ಲಿರುವಾಗ
ಪಾವಗಡಕ್ಕೆ ನೀರು ಬಿಡಲು ರಾಜ್ಯ ಸರ್ಕಾರ ತೀರ್ಮಾನ ತೆಗೆದುಕೊಂಡಿದ್ದು ಸರಿಯಲ್ಲ. ತುಂಗಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೆ ಅಧಿಕೃತವಾಗಿ ನೀರು ಬಾರದ ಪರಿಸ್ಥಿತಿ ಉಂಟಾಗಿದೆ. ಜಲಾಶಯದ ಹಿನ್ನೀರನ್ನು ಬೇರೆ ಜಿಲ್ಲೆಗೆ ಕೊಡುವುದು ವೈಜ್ಞಾನಿಕವಾಗಿ ಸರಿಯುಲ್ಲ ಎಂದರು.

ಸಚಿವ ಸಂಪುಟ ಸಭೆಯಲ್ಲಿ ನೀರು ಬಿಡುವ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳುವಾಗ ಮೂರು ಜಿಲ್ಲೆಗಳ ಸಚಿವರ,
ಶಾಸಕರು ವಿರೋಧಿಸದೇ ಮೌನ ವಹಿಸಿರುವುದು ರೈತ ವಿರೋಧಿ ಧೋರಣೆ ಆಗಿದೆ. ಶಿಂಗಟಾಲೂರು ಹಾಗೂ ತುಂಗಾ ಯೋಜನೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಒಳಹರಿವು ನೀರು ಕಡಿಮೆಯಾಗಿದೆ. ಅಂಥದ್ದರಲ್ಲಿ ಪಾವಗಡಕ್ಕೆ ನೀರು ಬಿಡುವುದು ರೈತರಿಗೆ ಬರೆ ಎಳೆದಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ಈ ತೀರ್ಮಾನ ಕೈಬಿಡದಿದ್ದರೆ ಮೂರು ಜಿಲ್ಲೆಗಳ ರೈತರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ಬಿಜೆಪಿ ಮುಖಂಡರಾದ ಅಮರೇಗೌಡ ವಿರೂಪಾಪುರ, ಕೊಲ್ಲಾ ಶೇಷಗಿರಿರಾವ್‌, ಈರೇಶ ಇಲ್ಲೂರು, ಅಡಿವೆಪ್ಪ, ಮಧ್ವರಾಜಾಚಾರ್ಯ ಇತರರು ಇದ್ದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.