ಹೊಂದಾಣಿಕೆ ಇದ್ದಲ್ಲಿ ಅಪರಾಧ ಪ್ರಕರಣ ಕಡಿಮೆ


Team Udayavani, Dec 2, 2018, 3:13 PM IST

ray-2.jpg

ರಾಯಚೂರು: ಸಮಾಜದಲ್ಲಿ ಪರಸ್ಪರ ಹೊಂದಾಣಿಕೆ ಮನೋಭಾವದಿಂದ ಬಾಳಿದರೆ ಅಪರಾಧ ಪ್ರಕರಣಗಳನ್ನು ಕಡಿಮೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಶರತ್‌ ಬಿ. ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪೊಲೀಸ್‌ ಕಚೇರಿ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಣ್ಣಪುಟ್ಟ ವಿಷಯಗಳಿಗೂ ಇಂದು ಜನ ಅತಿರೇಕದ ವರ್ತನೆ ತೋರುತ್ತಿದ್ದಾರೆ. ಸಹನೆ ಕ್ಷೀಣಿಸುತ್ತಿದ್ದು, ಪರಸ್ಪರ ದ್ವೇಷ, ಅಸೂಯೆ ಪ್ರವೃತ್ತಿ ಹೆಚ್ಚಾಗುತ್ತಿದೆ. ಇಂಥ ಗುಣಗಳಿಂದಲೇ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ. ಎಲ್ಲರೂ ಸಹಿಷ್ಣು ಮನೋಭಾವ ಹೊಂದಬೇಕು. ಅಂದಾಗ ಮಾತ್ರ ಸಣ್ಣಪುಟ್ಟ ವಿಚಾರಗಳಿಗೆ ಠಾಣೆಗೆ ಬರುವ ಸನ್ನಿವೇಶ ತಪ್ಪಲಿದೆ ಎಂದು ತಿಳಿಸಿದರು.

ಅಪರಾಧ ಪ್ರಕರಣಗಳ ಹೆಚ್ಚಳಕ್ಕೆ ಸಾಮಾಜಿಕ ವ್ಯವಸ್ಥೆಯೂ ಕಾರಣವಾಗುತ್ತಿದೆ. ವಿಭಕ್ತ ಕುಟುಂಬಗಳ ಸಂಖ್ಯೆ ದಿನೇದಿನೆ
ಹೆಚ್ಚುತ್ತಿದ್ದು, ಆಪ್ತ ವಲಯವೇ ಇಲ್ಲದಂಥ ಸನ್ನಿವೇಶ ಇದೆ. ಇದರಿಂದ ಅಭದ್ರತೆ ಕಾಡುತ್ತಿದೆ. ಹಿಂದೆ ಅವಿಭಕ್ತ ಕುಟುಂಬಗಳು ಹೆಚ್ಚಾಗಿರುವ ಕಾರಣ ಭದ್ರತೆ ಇರುತ್ತಿತ್ತು. ಆದರೆ, ಈಗ ನಗರ ಪ್ರದೇಶಗಳಲ್ಲಿ ನಮ್ಮ ನೆರೆಹೊರೆಯವರೇ ನಮಗೆ ಪರಿಚಯ ಇಲ್ಲದಂಥ ಸನ್ನಿವೇಶ ಇದೆ ಎಂದರು.

ಇಂದು ಸಾಕಷ್ಟು ಅಪರಾಧ ಪ್ರಕರಣಗಳು ಮಾಧ್ಯಮಗಳ ಮೂಲಕ ಬಯಲಾಗುತ್ತಿವೆ. ಪೊಲೀಸ್‌ ಇಲಾಖೆ ಗಮನಕ್ಕೂ ಬಾರದಂತೆ ಸಾಕಷ್ಟು ಅಕ್ರಮ ನಡೆಯುತ್ತಿದ್ದು, ಅವುಗಳನ್ನು ಸಮಾಜಕ್ಕೆ ತೋರಿಸುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸುತ್ತಿವೆ. ಯಾವ ವ್ಯಕ್ತಿ ಕಾನೂನು ಪಾಲಿಸುವುದಿಲ್ಲವೋ ಅವರಿಗೆ ವ್ಯವಸ್ಥೆ ಬಗ್ಗೆ ಪ್ರಶ್ನಿಸುವ, ಟೀಕಿಸುವ ಹಕ್ಕು ಇರುವುದಿಲ್ಲ. ನಾವು ಮೊದಲು ಕಾನೂನು ಪಾಲಿಸಬೇಕು. ಆಮೇಲೆ ಇತರರ ಬಗ್ಗೆ ಮಾತನಾಡಬೇಕು ಎಂದರು.

ಜಿಪಂ ಸಿಇಒ ನಲಿನ್‌ ಅತುಲ್‌ ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನಿನ ತಿಳಿವಳಿಕೆ ಮುಖ್ಯ. ಕೆಲವೊಂದು ಪ್ರಾಥಮಿಕ ಮಾಹಿತಿ ತಿಳಿಯುವುದು ಎಲ್ಲರ ಕರ್ತವ್ಯ. ಕಾನೂನಿನ ಅರಿವು ಮೂಡಿದಾಗಲೇ ಅಪರಾಧಗಳನ್ನು ಮಾಡಬಾರದು ಎಂಬ ಮನೋಭಾವ
ಮೂಡಲಿದೆ. ಕಾನೂನು ಯಾಕೆ ಬೇಕು? ಅದರಿಂದ ಏನು ಪ್ರಯೋಜನ ಎನ್ನುವ ಮಾಹಿತಿ ಅಗತ್ಯ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ಮಾತನಾಡಿ, ಈ ಮಾಸಾಚರಣೆ ಮಾಡುವ ಉದ್ದೇಶವೇ ಅಪರಾಧ ತಡೆಯುವುದಾಗಿದೆ. ಘಟನೆ ನಡೆದ ಮೇಲೆ ಕ್ರಮಕ್ಕೆ ಮುಂದಾಗುವುದಕ್ಕಿಂತ ಘಟನೆ ನಡೆಯದಂತೆ ನೋಡಿಕೊಳ್ಳುವುದು ಮುಖ್ಯ. ಒಂದು ಅಪರಾಧ ಪ್ರಕರಣ ಇಡೀ ವ್ಯವಸ್ಥೆ ಮೇಲೆಯೇ ದುಷ್ಪರಿಣಾಮ ಬೀರಬಲ್ಲದು. ಈ ನಿಟ್ಟಿನಲ್ಲಿ ಇಲಾಖೆ ಜತೆ ಸಾರ್ವಜನಿಕರು ಸಹಕಾರ ನೀಡುವುದು ಅನಿವಾರ್ಯ ಎಂದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಬಿ. ಪಾಟೀಲ ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.