ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ-ಶಿಕ್ಷಣ ಹಸಿವು ಹೆಚ್ಚಲಿ
Team Udayavani, Jun 17, 2022, 3:51 PM IST
ರಾಯಚೂರು: ವಿದ್ಯಾರ್ಥಿಗಳಿಗೆ ಶಿಕ್ಷಣದ ಹಸಿವು, ಆಸಕ್ತಿ ಹಾಗೂ ಮಾರ್ಗದರ್ಶನ ಇದ್ದಾಗ ಮಾತ್ರ ಜ್ಞಾನ ಹೆಚ್ಚಿಸಲು ಸಾಧ್ಯ. ವಿದ್ಯಾರ್ಥಿಗಳು ತಮ್ಮ ಕನಸನ್ನು ತಾವೇ ಸಾಕಾರಗೊಳಿಸಿದಾಗ ಮಾತ್ರ ಗುರಿ ತಲುಪಲು ಸಾಧ್ಯ ಎಂದು ಬೆಂಗಳೂರಿನ ಹೆಡ್ಹೆಲ್ಡ್ ಹೈ ಸಂಸ್ಥೆಯ ನಿರ್ದೇಶಕ ರಮೇಶ ಬಲ್ಲಿದ್ ಸಲಹೆ ನೀಡಿದರು.
ತಾಲೂಕಿನ ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಇತಿಹಾಸ ವಿಭಾಗದಿಂದ ಗುರುವಾರ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮೊಬೈಲ್ ಇಲ್ಲದೆ ಜೀವನವೇ ಇಲ್ಲ ಎನ್ನುವಂತಹ ಅಭಿಪ್ರಾಯಕ್ಕೆ ಬರುವುದು ಸರಿಯಲ್ಲ. ಮೊಬೈಲ್ ಒಂದು ಕಲಿಕೆಗೆ ಅವಶ್ಯಕ ವಸ್ತು ಎಂದು ತಿಳಿದು ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ವಿವಿಯ ಹಣಕಾಸು ಅಧಿಕಾರಿ ಪ್ರೊ | ಪಾರ್ವತಿ.ಸಿ.ಎಸ್ ಮಾತನಾಡಿ, ಇಂದಿನ ಯುವಕರು ತಮ್ಮ ವ್ಯಕ್ತಿತ್ವ ವಿಕಸನಗೊಳಿಸಲು ರಮೇಶ ಬಲ್ಲಿದರಂತಹ ಜೀವನ ಮತ್ತು ಸಾಧನೆಯನ್ನು ಸ್ಫೂರ್ತಿಯಾಗಿ ಪಡೆಯಿರಿ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ, ಯುವಕರಿಗೆ ಈ ಆಧುನಿಕ ಯುಗದಲ್ಲಿ ಸಂವಹನ ಕೌಶಲ ಬಹಳ ಮುಖ್ಯ. ಯಾವ ವೇಳೆ ಯಾರ ಜೊತೆ ಎಷ್ಟು ಯಾವಾಗ ಹೇಗೆ ಮಾತನಾಡಬೇಕು, ಅಲ್ಲದೇ ಮಾತಿನ ಜೊತೆ ಅವರ ಸಾಂಧರ್ಬಿಕ ಸಂವಹನ ಜ್ಞಾನ ಗೊತ್ತಿರಬೇಕು ಎಂದು ತಿಳಿಸಿದರು.
ಇಂಗ್ಲಿಷ್ ವಿಭಾಗದ ಉಪನ್ಯಾಸಕ ಅನಿಲ್ ಅಪ್ರಾಳ್ ಮಾತನಾಡಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ| ನುಸ್ರತ್ ಫಾತಿಮಾ, ಅತಿಥಿ ಉಪನ್ಯಾಸಕಿ ಡಾ| ಪದ್ಮಜಾ ದೇಸಾಯಿ, ಡಾ| ಭಾರತಿ ಪಾಟೀಲ್, ಸಮಾಜ ಕಾರ್ಯ ವಿಭಾಗ ಡಾ| ರಶ್ಮೀರಾಣಿ ಅಗ್ನಿಹೋತ್ರಿ, ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್